ಗುಡುಗು ಸಹಿತ ಗಾಳಿ ಮಳೆ; ದೆಹಲಿ ವಿಮಾನ ನಿಲ್ದಾಣದಿಂದ 22 ವಿಮಾನಗಳ ಮಾರ್ಗ ಬದಲಾವಣೆ

Delhi Rain: ಸತತ ಎರಡನೇ ದಿನವೂ ಗುಡುಗು ಸಹಿತ ಮಳೆ, ಬಲವಾದ ಗಾಳಿ ಬೀಸಿದ್ದು, ಶುಕ್ರವಾರ ಕೂಡ ಇದೇ ರೀತಿಯ ಹವಾಮಾನವನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಗುಡುಗು ಸಹಿತ ಗಾಳಿ ಮಳೆ; ದೆಹಲಿ ವಿಮಾನ ನಿಲ್ದಾಣದಿಂದ 22 ವಿಮಾನಗಳ ಮಾರ್ಗ ಬದಲಾವಣೆ
ದೆಹಲಿ ಮಳೆ
Follow us
|

Updated on:Mar 30, 2023 | 10:13 PM

ದೆಹಲಿ: ದೆಹಲಿಯಲ್ಲಿ ಗುರುವಾರ ಸಂಜೆ ಭಾರೀ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದಿಂದ (Delhi Airport) 22 ವಿಮಾನಗಳ ಮಾರ್ಗವನ್ನು ಬದಲಿಸಲಾಗಿದೆ. ಈ ವಿಮಾನಗಳನ್ನು ಲಕ್ನೋ, ಜೈಪುರ, ಅಹಮದಾಬಾದ್, ಚಂಡೀಗಢ ಮತ್ತು ಡೆಹ್ರಾಡೂನ್‌ಗೆ ತಿರುಗಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ(Delhi Rain) ಸುರಿದಿದೆ. 11 ವಿಮಾನಗಳನ್ನು ಲಕ್ನೋಗೆ, 8 ಜೈಪುರಕ್ಕೆ ಮತ್ತು ತಲಾ 1 ವಿಮಾನಗಳನ್ನು ಅಹಮದಾಬಾದ್, ಚಂಡೀಗಢ ಮತ್ತು ಡೆಹ್ರಾಡೂನ್‌ಗೆ ತಿರುಗಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸತತ ಎರಡನೇ ದಿನವೂ ಗುಡುಗು ಸಹಿತ ಮಳೆ, ಬಲವಾದ ಗಾಳಿ ಬೀಸಿದ್ದು, ಶುಕ್ರವಾರ ಕೂಡ ಇದೇ ರೀತಿಯ ಹವಾಮಾನವನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿಯ ಅಧಿಕೃತ ಮಾರ್ಕರ್ ಎಂದು ಪರಿಗಣಿಸಲಾದ ಸಫ್ದರ್‌ಜಂಗ್ ವೀಕ್ಷಣಾಲಯವು 8.30 ರಿಂದ ರಾತ್ರಿ 8.30 ರ ನಡುವೆ 5.8 ಮಿಮೀ ಮಳೆಯನ್ನು ಪಡೆದಿದೆ.ಪಾಲಂ ವೀಕ್ಷಣಾಲಯವು 1.1 ಮಿಮೀ ಮಳೆಯನ್ನು ಪಡೆದರೆ ಲೋಧಿ ರಸ್ತೆ, ರಿಡ್ಜ್ ಮತ್ತು ಅಯಾನಗರದಲ್ಲಿ ಕ್ರಮವಾಗಿ 7.6 ಮಿಮೀ, 4.5 ಮಿಮೀ ಮಳೆಯಾಗಿದೆ. ಪೂರ್ವ ದೆಹಲಿಯಲ್ಲೂ ಆಲಿಕಲ್ಲು ಮಳೆಯಾಗಿದೆ ಎಂದು ವರದಿಯಾಗಿದೆ.

ಗುರುವಾರ ಸಂಜೆ ಪಟೇಲ್ ನಗರ, ಬುದ್ಧ ಜಯಂತಿ ಪಾರ್ಕ್, ರಾಷ್ಟ್ರಪತಿ ಭವನ, ರಾಜೀವ್ ಚೌಕ್, ದೆಹಲಿ ಕಂಟೋನ್ಮೆಂಟ್, ಇಂಡಿಯಾ ಗೇಟ್, ಸಫ್ದರ್‌ಜಂಗ್ ಮತ್ತು ಲೋಡಿ ರಸ್ತೆಯಲ್ಲಿ ಮಳೆ ಸುರಿದಿದೆ.

ಇದನ್ನೂ ಓದಿ: ಬಿಜೆಪಿ ಊಳಿಗಮಾನ್ಯ ವ್ಯವಸ್ಥೆಯ ಜಮೀನುದಾರನಂತೆ ವರ್ತಿಸುತ್ತಿದೆ: ಕೇಂದ್ರ ವಿರುದ್ಧ ಮಮತಾ ವಾಗ್ದಾಳಿ

ಮಾರ್ಚ್ 30 ಮತ್ತು ಏಪ್ರಿಲ್ 5 ರ ನಡುವೆ ವಾರದ ಹೆಚ್ಚಿನ ದಿನಗಳಲ್ಲಿ ದೆಹಲಿ ಮತ್ತು ಪಂಜಾಬ್, ಚಂಡೀಗಢ, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಂತಹ ಪಕ್ಕದ ಪ್ರದೇಶಗಳಲ್ಲಿ ಗುಡುಗು ಸಹಿತ ಲಘು-ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:10 pm, Thu, 30 March 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ