AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡುಗು ಸಹಿತ ಗಾಳಿ ಮಳೆ; ದೆಹಲಿ ವಿಮಾನ ನಿಲ್ದಾಣದಿಂದ 22 ವಿಮಾನಗಳ ಮಾರ್ಗ ಬದಲಾವಣೆ

Delhi Rain: ಸತತ ಎರಡನೇ ದಿನವೂ ಗುಡುಗು ಸಹಿತ ಮಳೆ, ಬಲವಾದ ಗಾಳಿ ಬೀಸಿದ್ದು, ಶುಕ್ರವಾರ ಕೂಡ ಇದೇ ರೀತಿಯ ಹವಾಮಾನವನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಗುಡುಗು ಸಹಿತ ಗಾಳಿ ಮಳೆ; ದೆಹಲಿ ವಿಮಾನ ನಿಲ್ದಾಣದಿಂದ 22 ವಿಮಾನಗಳ ಮಾರ್ಗ ಬದಲಾವಣೆ
ದೆಹಲಿ ಮಳೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 30, 2023 | 10:13 PM

Share

ಮುಖ್ಯಾಂಶಗಳು

  • ಸತತ ಎರಡನೇ ದಿನವೂ ಗುಡುಗು ಸಹಿತ ಮಳೆ
  • ಪೂರ್ವ ದೆಹಲಿಯಲ್ಲಿ ಆಲಿಕಲ್ಲು ಮಳೆಯಾಗಿದೆ
  • ಶುಕ್ರವಾರ ಕೂಡ ಇದೇ ರೀತಿಯ ಹವಾಮಾನ ಮುಂದುವರಿಯುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ

ದೆಹಲಿ: ದೆಹಲಿಯಲ್ಲಿ ಗುರುವಾರ ಸಂಜೆ ಭಾರೀ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದಿಂದ (Delhi Airport) 22 ವಿಮಾನಗಳ ಮಾರ್ಗವನ್ನು ಬದಲಿಸಲಾಗಿದೆ. ಈ ವಿಮಾನಗಳನ್ನು ಲಕ್ನೋ, ಜೈಪುರ, ಅಹಮದಾಬಾದ್, ಚಂಡೀಗಢ ಮತ್ತು ಡೆಹ್ರಾಡೂನ್‌ಗೆ ತಿರುಗಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ(Delhi Rain) ಸುರಿದಿದೆ. 11 ವಿಮಾನಗಳನ್ನು ಲಕ್ನೋಗೆ, 8 ಜೈಪುರಕ್ಕೆ ಮತ್ತು ತಲಾ 1 ವಿಮಾನಗಳನ್ನು ಅಹಮದಾಬಾದ್, ಚಂಡೀಗಢ ಮತ್ತು ಡೆಹ್ರಾಡೂನ್‌ಗೆ ತಿರುಗಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸತತ ಎರಡನೇ ದಿನವೂ ಗುಡುಗು ಸಹಿತ ಮಳೆ, ಬಲವಾದ ಗಾಳಿ ಬೀಸಿದ್ದು, ಶುಕ್ರವಾರ ಕೂಡ ಇದೇ ರೀತಿಯ ಹವಾಮಾನವನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿಯ ಅಧಿಕೃತ ಮಾರ್ಕರ್ ಎಂದು ಪರಿಗಣಿಸಲಾದ ಸಫ್ದರ್‌ಜಂಗ್ ವೀಕ್ಷಣಾಲಯವು 8.30 ರಿಂದ ರಾತ್ರಿ 8.30 ರ ನಡುವೆ 5.8 ಮಿಮೀ ಮಳೆಯನ್ನು ಪಡೆದಿದೆ.ಪಾಲಂ ವೀಕ್ಷಣಾಲಯವು 1.1 ಮಿಮೀ ಮಳೆಯನ್ನು ಪಡೆದರೆ ಲೋಧಿ ರಸ್ತೆ, ರಿಡ್ಜ್ ಮತ್ತು ಅಯಾನಗರದಲ್ಲಿ ಕ್ರಮವಾಗಿ 7.6 ಮಿಮೀ, 4.5 ಮಿಮೀ ಮಳೆಯಾಗಿದೆ. ಪೂರ್ವ ದೆಹಲಿಯಲ್ಲೂ ಆಲಿಕಲ್ಲು ಮಳೆಯಾಗಿದೆ ಎಂದು ವರದಿಯಾಗಿದೆ.

ಗುರುವಾರ ಸಂಜೆ ಪಟೇಲ್ ನಗರ, ಬುದ್ಧ ಜಯಂತಿ ಪಾರ್ಕ್, ರಾಷ್ಟ್ರಪತಿ ಭವನ, ರಾಜೀವ್ ಚೌಕ್, ದೆಹಲಿ ಕಂಟೋನ್ಮೆಂಟ್, ಇಂಡಿಯಾ ಗೇಟ್, ಸಫ್ದರ್‌ಜಂಗ್ ಮತ್ತು ಲೋಡಿ ರಸ್ತೆಯಲ್ಲಿ ಮಳೆ ಸುರಿದಿದೆ.

ಇದನ್ನೂ ಓದಿ: ಬಿಜೆಪಿ ಊಳಿಗಮಾನ್ಯ ವ್ಯವಸ್ಥೆಯ ಜಮೀನುದಾರನಂತೆ ವರ್ತಿಸುತ್ತಿದೆ: ಕೇಂದ್ರ ವಿರುದ್ಧ ಮಮತಾ ವಾಗ್ದಾಳಿ

ಮಾರ್ಚ್ 30 ಮತ್ತು ಏಪ್ರಿಲ್ 5 ರ ನಡುವೆ ವಾರದ ಹೆಚ್ಚಿನ ದಿನಗಳಲ್ಲಿ ದೆಹಲಿ ಮತ್ತು ಪಂಜಾಬ್, ಚಂಡೀಗಢ, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಂತಹ ಪಕ್ಕದ ಪ್ರದೇಶಗಳಲ್ಲಿ ಗುಡುಗು ಸಹಿತ ಲಘು-ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:10 pm, Thu, 30 March 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ