AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಷೇಪಾರ್ಹ ವಿಡಿಯೊ ಪ್ರಕರಣ: ರೋಸ್ ಅವೆನ್ಯೂ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ರಾಷ್ಟ್ರೀಯ ಮಹಿಳಾ ಆಯೋಗ ಒತ್ತಾಯ

ರಾಷ್ಟ್ರೀಯ ಮಹಿಳಾ ಆಯೋಗವು ಶುಕ್ರವಾರ ತನ್ನ ಹೇಳಿಕೆಯಲ್ಲಿ ರೋಸ್ ಅವೆನ್ಯೂ ನ್ಯಾಯಾಲಯದ ನ್ಯಾಯಾಧೀಶರ "ಆಕ್ಷೇಪಾರ್ಹ ವಿಡಿಯೊ" ವರದಿ ಮಾಡಿರುವ ಮಾಧ್ಯಮದ ಪೋಸ್ಟ್ ಅನ್ನು ನೋಡಿದೆ ಎಂದು ಹೇಳಿದೆ

ಆಕ್ಷೇಪಾರ್ಹ ವಿಡಿಯೊ ಪ್ರಕರಣ: ರೋಸ್ ಅವೆನ್ಯೂ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ರಾಷ್ಟ್ರೀಯ ಮಹಿಳಾ ಆಯೋಗ ಒತ್ತಾಯ
ರೇಖಾ ಶರ್ಮಾ
TV9 Web
| Edited By: |

Updated on:Dec 02, 2022 | 5:55 PM

Share

ತನ್ನ ಕಚೇರಿಯೊಳಗೆ ಮಹಿಳೆಯೊಂದಿಗೆ “ಲೈಂಗಿಕವಾಗಿ ಅಶ್ಲೀಲ” ಕೃತ್ಯದಲ್ಲಿ ತೊಡಗಿರುವ ರೋಸ್ ಅವೆನ್ಯೂ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗ (National Commission for Women) ಶುಕ್ರವಾರ ಒತ್ತಾಯಿಸಿದೆ. ಈ ವಾರದ ಆರಂಭದಲ್ಲಿ ನ್ಯಾಯಾಧೀಶರ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿತ್ತು. ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ತೋರಿಸಲಾದ ವಿಡಿಯೊ ಹಂಚಿಕೊಳ್ಳುವುದಕ್ಕೆ ದೆಹಲಿ ಹೈಕೋರ್ಟ್ ನಿರ್ಬಂಧಿಸಿದೆ. ಹಾಗೆ ಮಾಡುವುದರಿಂದ ಫಿರ್ಯಾದಿಯ ಗೌಪ್ಯತೆ ಹಕ್ಕುಗಳಿಗೆ ಹಾನಿಯುಂಟಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.ರಾಷ್ಟ್ರೀಯ ಮಹಿಳಾ ಆಯೋಗವು ಶುಕ್ರವಾರ ತನ್ನ ಹೇಳಿಕೆಯಲ್ಲಿ ರೋಸ್ ಅವೆನ್ಯೂ ನ್ಯಾಯಾಲಯದ ನ್ಯಾಯಾಧೀಶರ “ಆಕ್ಷೇಪಾರ್ಹ ವಿಡಿಯೊ” ವರದಿ ಮಾಡಿರುವ ಮಾಧ್ಯಮದ ಪೋಸ್ಟ್ ಅನ್ನು ನೋಡಿದೆ ಎಂದು ಹೇಳಿದೆ. ಆಯೋಗವು ವಿಷಯ ಅರಿತುಕೊಂಡಿದೆ. ಅಧ್ಯಕ್ಷೆ ರೇಖಾ ಶರ್ಮಾ ಅವರು ಕ್ರಮ ಕೈಗೊಂಡ ವರದಿಯನ್ನು ಕೋರಿ ದೆಹಲಿ ಹೈಕೋರ್ಟ್(Delhi High Court) ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದಿದ್ದಾರೆ. ಆರೋಪಗಳು ನಿಜವೆಂದು ಕಂಡುಬಂದರೆ ನ್ಯಾಯಾಧೀಶರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ NCW ಹೇಳಿದೆ.

POSH ಕಾಯಿದೆ, 2013 ರಲ್ಲಿ ನಿಗದಿಪಡಿಸಿದ ನಿಯಮಗಳ ಪ್ರಕಾರ ರೋಸ್ ಅವೆನ್ಯೂ ನ್ಯಾಯಾಲಯವು ಆಂತರಿಕ ಸಮಿತಿಯನ್ನು ಹೊಂದಿದೆಯೇ ಎಂದು ತಿಳಿಸಲು ಆಯೋಗವು ಕೇಳಿದೆ. ಆಯೋಗವು ಏಳು ದಿನಗಳಲ್ಲಿ ಕ್ರಮ ಕೈಗೊಂಡ ವರದಿಯನ್ನು ಕೇಳಿದೆ.

ಬುಧವಾರ ತಡರಾತ್ರಿ ಹೊರಡಿಸಿದ ಆದೇಶದಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಘಟನೆಯ ಬಗ್ಗೆ ಹೈಕೋರ್ಟ್ ಗಮನಕ್ಕೆ ತಂದಿದ್ದಾರೆ. ಅದರ ರಿಜಿಸ್ಟ್ರಾರ್ ಜನರಲ್ ಅವರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವಿಡಿಯೊವನ್ನು ನಿರ್ಬಂಧಿಸುವ ಅಗತ್ಯವನ್ನು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಆ ವಿಡಿಯೊದ ವಿಷಯಗಳ ಅಶ್ಲೀಲ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ಮತ್ತು ಫಿರ್ಯಾದಿಯ ಗೌಪ್ಯತೆ ಹಕ್ಕುಗಳಿಗೆ ಉಂಟಾಗಬಹುದಾದ ಗಂಭೀರ ಹಾನಿಯನ್ನು ಪರಿಗಣಿಸಿ ತಡೆಯಾಜ್ಞೆಯನ್ನು ಸ್ಪಷ್ಟವಾಗಿ ಸಮರ್ಥಿಸಲಾಗುತ್ತದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Fri, 2 December 22

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ