AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಕಚೇರಿ ಒಳಗೆ ರಾಹುಲ್ ವಿಚಾರಣೆ, ಹೊರಗೆ ಕಾಂಗ್ರೆಸ್​ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ

ನ್ಯಾಷನಲ್ ಹೆರಾಲ್ಡ್ ( National Herald)ಪತ್ರಿಕೆಯ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ರಾಹುಲ್ ಗಾಂಧಿ (Rahul Gandhi) ಇಂದು ಮೂರನೇ ದಿನ ಇಡಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

ಇಡಿ ಕಚೇರಿ ಒಳಗೆ ರಾಹುಲ್ ವಿಚಾರಣೆ, ಹೊರಗೆ ಕಾಂಗ್ರೆಸ್​ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ
Rahul GandhiImage Credit source: ANI
TV9 Web
| Edited By: |

Updated on: Jun 15, 2022 | 1:13 PM

Share

ನ್ಯಾಷನಲ್ ಹೆರಾಲ್ಡ್ ( National Herald)ಪತ್ರಿಕೆಯ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ರಾಹುಲ್ ಗಾಂಧಿ (Rahul Gandhi) ಇಂದು ಮೂರನೇ ದಿನ ಇಡಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಅತ್ತ ವಿಚಾರಣೆ ನಡೆಯುತ್ತಿದ್ದರೆ, ಇತ್ತ ಜಾರಿ ನಿರ್ದೇಶನಾಲಯ ಕಚೇರಿ ಎದುರು ಟಯರ್​ಗೆ ಬೆಂಕಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದುವರೆಗೆ 80 ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರ ನೀಡಿದ್ದಾರೆ, ಆದರೆ ಉತ್ತರ ನೀಡಿದ ಬಳಿಕ ಕೆಲ ಉತ್ತರಗಳ ತಿದ್ದುಪಡಿ ಮಾಡಲು ರಾಹುಲ್ ಗಾಂಧಿ ಮುಂದಾದರು ಎಂದು ಮೂಲಗಳು ತಿಳಿಸಿವೆ. ಬುಧವಾರ ಬೆಳಗ್ಗೆ 11.30ಗಂಟೆ ಸುಮಾರಿಗೆ ರಾಹುಲ್ ಗಾಂಧಿ ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿಗೆ ಆಗಮಿಸಿದ್ದು ವಿಚಾರಣೆ ನಡೆಯುತ್ತಿದೆ.

ಭಾರತೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರು ಪಕ್ಷದ ಪ್ರಧಾನ ಕವಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬೂಟು ಕಾಲಿನಲ್ಲಿ ತಮ್ಮನ್ನು ಒದ್ದಿದ್ದರು ಎಂದು ಆರೋಪಿಸಿದ್ದಾರೆ. ಎಐಸಿಸಿ ಪ್ರಧಾನ ಕಚೇರಿಯೊಳಗೆ ತೆರಳಲು ಅವಕಾಶ ದೊರೆಯದ ಕಾರಣ ಕಾಂಗ್ರೆಸ್ ಸಂಸದರು ಮಹಾತ್ಮ ಗಾಂಧಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಹುಲ್ ಗಾಂಧಿ ಅವರ ವಿಚಾರಣೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈಗಲೂ ಗಂಟೆಗಟ್ಟಲೆ ವಿಚಾರಣೆ ನಡೆಸುತ್ತಿರುವುದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಮಾತನಾಡಿ, ನಾವು ಭಯೋತ್ಪಾದಕರಲ್ಲ, ನಮ್ಮ ನಿರ್ವಹಣೆಗೆ ಪೊಲೀಸರ ಅಗತ್ಯವೇನಿದೆ, ನಮ್ಮನ್ನು ಕಂಡರೆ ಭಯ ಏಕೆ ಎಂದು ಪ್ರಶ್ನಿಸಿದ್ದಾರೆ.

ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, ರಾಹುಲ್ ಗಾಂಧಿಯನ್ನು ಕಾನೂನಿನ ಅಡಿ ಬಂಧನ ಮಾಡುತ್ತಾರೆ ಎಂದು ಹೇಳಬೇಕು. ನ್ಯಾಷನಲ್ ಹೆರಾಲ್ಡ್​ ಪ್ರಕರಣದಲ್ಲಿ ಯಾವ ಕೇಸ್​ನಲ್ಲಿ ವಿಚಾರಣೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಇಡಿಯವರಿಗೂ ಗೊತ್ತಿಲ್ಲ. ಅವರು 90 ಕೋಟಿ ರೂ. ಸಾಲವನ್ನು ನ್ಯಾಷನಲ್ ಹೆರಾಲ್ಡ್​ಗೆ ಕೊಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ, ಕೊಡಬಾರದು ಎಂಬ ನಿಯಮ ಎಲ್ಲಾದರೂ ಇದೆಯೇ ಎಂದು ಪ್ರಶ್ನಿಸಿದರು.

90 ಕೋಟಿಯಲ್ಲಿ 60 ಕೋಟಿ ಸಂಬಳ ಎಂದು ಕೊಟ್ಟಿದ್ದಾರೆ, ಇನ್ನುಳಿದ ಹಣವನ್ನು ಪ್ರಿಂಟಿಂಗ್ ವೆಚ್ಚ, ಇನ್​ಫ್ರಾಸ್ಟ್ರಕ್ಚರ್ ಸುಲುವಾಗಿ ಕೊಟ್ಟಿದ್ದಾರೆ. ರಾಹುಲ್ ಗಾಂಧಿಗೆ ಟಾರ್ಚರ್ ಕೊಡಬೇಕೆಂದೇ ಈ ವಿಚಾರಣೆ ನಡೆಸಲಾಗುತ್ತಿದೆ ಎಂದು ದೂರಿದರು.

ಎಲೆಕ್ಷನ್ ಬಂದಾಗ ರಾಬರ್ಟ್ ವಾದ್ರಾ , ಪ್ರಿಯಾಂಕಾ ಗಾಂಧಿ ವಾದ್ರಾ , ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರೆದು ವಿಚಾರಣೆ ಮಾಡುತ್ತಾರೆ ಎಂದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​