ನ್ಯಾಷನಲ್ ಹೆರಾಲ್ಡ್ ಪ್ರಕರಣ; ರಾಜಕೀಯ ಪಿತೂರಿಯಿಂದ ನಮ್ಮನ್ನು ಹೆದರಿಸಲಾಗದು ಎಂದ ಖರ್ಗೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ಇಡಿ ಆರೋಪ ಪಟ್ಟಿ 'ರಾಜಕೀಯ ಪಿತೂರಿ'ಯಿಂದ ಕೂಡಿದೆ ಎಂದು ಟೀಕಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. "ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇವಲ ಎರಡು ಅಥವಾ ಮೂರು ದಿನಗಳ ಮೊದಲು, ದೆಹಲಿ, ಲಕ್ನೋ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇದೆಲ್ಲವೂ ಸೇಡಿನ ಮನೋಭಾವದಿಂದ ಮಾಡಲಾಗುತ್ತಿದೆ ಎಂಬುದರಲ್ಲಿ ಸಂದೇಹವಿಲ್ಲ" ಎಂದು ಅವರು ಹೇಳಿದ್ದಾರೆ.

ನವದೆಹಲಿ, ಏಪ್ರಿಲ್ 19: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ (National Herald Case) ಜಾರಿ ನಿರ್ದೇಶನಾಲಯದ ಆರೋಪ ಪಟ್ಟಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಹೆಸರುಗಳನ್ನು ಸೇರಿಸುವುದರ ಹಿಂದೆ “ರಾಜಕೀಯ ಪಿತೂರಿ” ಇದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಆರೋಪಿಸಿದ್ದಾರೆ. ಈ ಕ್ರಮವು ರಾಜಕೀಯ ಪ್ರೇರಿತವಾಗಿದೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸೇಡಿನ ಅಭಿಯಾನದ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ.
“ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೆಸರುಗಳನ್ನು ಇಡಿ ಆರೋಪಪಟ್ಟಿಯಲ್ಲಿ ಹೇಗೆ ಸೇರಿಸಲಾಗಿದೆ ಎಂಬುದನ್ನು ನೀವು ಗಮನಿಸಿರಬೇಕು. ಆದರೆ ಯಾರ ಹೆಸರುಗಳನ್ನು ಸೇರಿಸಿದರೂ ನಮಗೆ ಭಯವಿಲ್ಲ. ಇಂತಹ ಪಿತೂರಿಯಿಂದ ನಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ” ಎಂದು ಖರ್ಗೆ ಹೇಳಿದ್ದಾರೆ.
ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ; ಸೋನಿಯಾ, ರಾಹುಲ್ ಗಾಂಧಿಯ ಆಸ್ತಿ ವಶಕ್ಕೆ ಮುಂದಾದ ಇಡಿ
ಸೋನಿಯಾ ಮತ್ತು ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಸೇರಿಸಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಬಿಜೆಪಿ ನೇತೃತ್ವದ ಸರ್ಕಾರ ಆಯೋಜಿಸಿದ ರಾಜಕೀಯ ಪ್ರೇರಿತ ಪಿತೂರಿಯಾಗಿದೆ ಎಂದಿದ್ದಾರೆ. ದೆಹಲಿ, ಲಕ್ನೋ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದನ್ನು ಖರ್ಗೆ ಟೀಕಿಸಿದ್ದಾರೆ. ಯಂಗ್ ಇಂಡಿಯನ್ ಲಾಭರಹಿತ ಸಂಸ್ಥೆಯಾಗಿದೆ ಮತ್ತು ಬಿಜೆಪಿ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.
आज AICC महासचिवों, प्रभारियों और फ्रंटल संगठनों के अध्यक्षों की बैठक में मेरे शुरुआती वक्तव्य के अंश —
पिछले 8-9 अप्रैल को हम सभी लोग अहमदाबाद AICC सत्र में मिले थे। आप सभी को मैं इस सेशन की ऐतिहासिक सफलता के लिए बहुत बधाई देता हूं।
इस सेशन में पारित Resolution को आप सभी ने… pic.twitter.com/53fo6yWMJs
— Mallikarjun Kharge (@kharge) April 19, 2025
“ಬಿಜೆಪಿಯವರು ಸುಳ್ಳು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ನಾವು ಸಾರ್ವಜನಿಕರಿಗೆ ಸತ್ಯವನ್ನು ಹೇಳಬೇಕು. ‘ಯಂಗ್ ಇಂಡಿಯನ್’ ಒಂದು ಲಾಭರಹಿತ ಕಂಪನಿಯಾಗಿದ್ದು, ಇದರರ್ಥ ಎಜೆಎಲ್ (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್) ನ ಷೇರುಗಳು ಅಥವಾ ಲಾಭಗಳನ್ನು ವರ್ಗಾಯಿಸಲು ಅಥವಾ ತೆಗೆದುಕೊಳ್ಳಲು ಸಾಧ್ಯವಿಲ್ಲ. ಆದರೂ, ಬಿಜೆಪಿ ಸುಳ್ಳುಗಳಿಂದ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಲೇ ಇದೆ. ಸತ್ಯವನ್ನು ಜನರಿಗೆ ತಲುಪಿಸುವುದು ನಮ್ಮ ಕರ್ತವ್ಯ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: National Herald case: ನ್ಯಾಷನಲ್ ಹೆರಾಲ್ಡ್ ಪ್ರಕರಣ; ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಇಡಿ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರ ವಿರುದ್ಧ ನವದೆಹಲಿಯ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್ಶೀಟ್ ಸಲ್ಲಿಸಿದ್ದು, ಅವರ ವಿರುದ್ಧ 988 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಆರೋಪ ಹೊರಿಸಿದೆ. ಕಾಂಗ್ರೆಸ್ ನಾಯಕರು ತಮ್ಮ ಸಾರ್ವಜನಿಕ ಕಂಪನಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ನ 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಕಬಳಿಸಲು “ಕ್ರಿಮಿನಲ್ ಪಿತೂರಿ” ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ