AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಸ್ವಾಧೀನ ವಿಳಂಬದಿಂದ ತೆಲಂಗಾಣದಲ್ಲಿ ₹32,383 ಕೋಟಿ ಮೌಲ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಸ್ಥಗಿತಗೊಂಡಿವೆ: ಕೇಂದ್ರ ಸಚಿವ ಕಿಶನ್ ರೆಡ್ಡಿ

32,383 ಕೋಟಿ ರೂಪಾಯಿಗಳ ಯೋಜನೆಗಳು ನೆನೆಗುದಿಗೆ ಬಿದ್ದಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಹೇಳಿದ್ದು, ತೆಲಂಗಾಣ ರಾಜ್ಯ ಸರ್ಕಾರದ ನಿರಾಸಕ್ತಿಯಿಂದಾಗಿ ಅದು ಅಗತ್ಯವಾದ ಭೂಸ್ವಾಧೀನವನ್ನು ಮಾಡುತ್ತಿಲ್ಲ ಎಂದಿದ್ದಾರೆ

ಭೂಸ್ವಾಧೀನ ವಿಳಂಬದಿಂದ ತೆಲಂಗಾಣದಲ್ಲಿ ₹32,383 ಕೋಟಿ  ಮೌಲ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಸ್ಥಗಿತಗೊಂಡಿವೆ: ಕೇಂದ್ರ ಸಚಿವ ಕಿಶನ್ ರೆಡ್ಡಿ
ಜಿ ಕಿಶನ್ ರೆಡ್ಡಿ
ರಶ್ಮಿ ಕಲ್ಲಕಟ್ಟ
|

Updated on:Mar 18, 2023 | 10:38 AM

Share

ತೆಲಂಗಾಣದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ (National Highway projects )ಭೂಮಿ ಮಂಜೂರು ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ (G Kishan Reddy) ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (K Chandrasekhar Rao) ಅವರಿಗೆ ಪತ್ರ ಬರೆದಿದ್ದಾರೆ. 32,383 ಕೋಟಿ ರೂಪಾಯಿಗಳ ಯೋಜನೆಗಳು ನೆನೆಗುದಿಗೆ ಬಿದ್ದಿದೆ ಎಂದು ರೆಡ್ಡಿ ಹೇಳಿದ್ದು, ತೆಲಂಗಾಣ ರಾಜ್ಯ ಸರ್ಕಾರದ ನಿರಾಸಕ್ತಿಯಿಂದಾಗಿ ಅದು ಅಗತ್ಯವಾದ ಭೂಸ್ವಾಧೀನವನ್ನು ಮಾಡುತ್ತಿಲ್ಲ ಎಂದಿದ್ದಾರೆ. 750 ಕಿ.ಮೀ ಉದ್ದದ 11 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು, ಇದಕ್ಕಾಗಿ ಅಂದಾಜು 4,332 ಹೆಕ್ಟೇರ್ ಭೂಮಿ ಅಗತ್ಯವಿದೆ, ಇವು ಸದ್ಯ ಸ್ಥಗಿತಗೊಂಡಿದೆ ಎಂದು ರೆಡ್ಡಿ ಹೇಳಿದ್ದಾರೆ. ಉಳಿದ ಭೂಮಿಯನ್ನು ಸಮಯಕ್ಕೆ ಒದಗಿಸಲು ಮತ್ತು ಯೋಜನೆಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸಹಕರಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಕೆಸಿಆರ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಚಿವರು ತೆಲುಗಿನಲ್ಲಿ ಟ್ವೀಟ್ ಮಾಡಿದ್ದಾರೆ.

13,163.18 ಕೋಟಿ ವೆಚ್ಚದ ಹೈದರಾಬಾದ್ ಪ್ರಾದೇಶಿಕ ವರ್ತುಲ ರಸ್ತೆಯ 158 ಕಿಲೋಮೀಟರ್ ಉತ್ತರ ಭಾಗದ ಯೋಜನೆ, ತೆಲಂಗಾಣ ರಾಜ್ಯದಲ್ಲಿ ಸರಿಸುಮಾರು 275 ಕಿಲೋಮೀಟರ್‌ಗಳನ್ನು ಹೊಂದಿರುವ ನಾಗ್‌ಪುರ ವಿಜಯವಾಡ ಕಾರಿಡಾರ್‌ನ NH163G ಕೂಡ ಸ್ಥಗಿತವಾಗಿದೆ ಎಂದು ರೆಡ್ಡಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದು NH163 G ಯ ವಾರಂಗಲ್-ಖಮ್ಮಂ ವಿಭಾಗದ 108 ಕಿಲೋಮೀಟರ್ ವ್ಯಾಪ್ತಿಯ 4 ಲೇನಿಂಗ್ ವೆಚ್ಚ 3,397.01 ಕೋಟಿ, NH163 G ನ ಮಂಚೇರಿಯಲ್-ವಾರಂಗಲ್ ವಿಭಾಗದ 109 ಕಿಲೋಮೀಟರ್ ವ್ಯಾಪ್ತಿಯ 4 ಲೇನಿಂಗ್ ವೆಚ್ಚ 3,441 ಕೋಟಿ ಮತ್ತು ತೆಲಂಗಾಣ ರಾಜ್ಯದಲ್ಲಿ ಬರುವ ಖಮ್ಮಂ-ವಿಜಯವಾಡ ವಿಭಾಗದಲ್ಲಿ 4 ಲೇನಿಂಗ್‌ನ 61 ಕಿಲೋಮೀಟರ್‌ಗಳು ರೂ. 3,007 ಕೋಟಿ ಒಳಗೊಂಡಿದೆ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ:19 ಹೊಸ ಜಿಲ್ಲೆಗಳನ್ನು ಘೋಷಿಸಿದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್; ಇದು ರಾಜಕೀಯ ನಡೆ ಎಂದ ಬಿಜೆಪಿ

2014 ರಿಂದ ಹೆದ್ದಾರಿಗಳ ಅಭಿವೃದ್ಧಿ ಮತ್ತು ಅಧುನಿಕ ಅತ್ಯಾಧುನಿಕ ರಾಷ್ಟ್ರೀಯ ಹೆದ್ದಾರಿ ರಸ್ತೆ ಜಾಲವನ್ನು ನಿರ್ಮಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವನ್ನು ರೆಡ್ಡಿ ಹೊಗಳಿದ್ದಾರೆ.

ಸ್ವಾತಂತ್ರ್ಯದ ನಂತರ 2014 ರವರೆಗಿನ ಅವಧಿಯಲ್ಲಿ, ತೆಲಂಗಾಣ ಪ್ರದೇಶವು ಒಟ್ಟು 2,500 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಗಳನ್ನು ಹೊಂದಿತ್ತು. 2014 ರಿಂದ, ನರೇಂದ್ರ ಮೋದಿ ಪ್ರಧಾನಿಯಾದ ನಂತರ ಕಳೆದ ಎಂಟೂವರೆ ವರ್ಷಗಳಲ್ಲಿ ಇನ್ನೂ 2,500 ನಿರ್ಮಿಸಲಾಗಿದೆ ಎಂದು ರೆಡ್ಡಿ ಅವರು ತೆಲಂಗಾಣ ಮುಖ್ಯಮಂತ್ರಿಗೆ ಪತ್ರದಲ್ಲಿ ಬರೆದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:01 am, Sat, 18 March 23

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್