AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ತಂದೆ-ಮಗ ಚರಂಡಿಗೆ ಬಿದ್ದ ಪ್ರಕರಣ; ಮುಖ್ಯ ಕಾರ್ಯದರ್ಶಿ, ಪೊಲೀಸ್ ಆಯುಕ್ತರಿಗೆ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್

ಈ ದುರಂತ ಘಟನೆಗೆ ಕಾರಣರಾದ ಕರ್ತವ್ಯಲೋಪ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮದ ಬಗ್ಗೆಯೂ ಮಾಹಿತಿ ನೀಡುವಂತೆ ಮಾನವ ಹಕ್ಕುಗಳ ಆಯೋಗ ಒತ್ತಾಯಿಸಿದೆ.

ದೆಹಲಿಯಲ್ಲಿ ತಂದೆ-ಮಗ ಚರಂಡಿಗೆ ಬಿದ್ದ ಪ್ರಕರಣ; ಮುಖ್ಯ ಕಾರ್ಯದರ್ಶಿ, ಪೊಲೀಸ್ ಆಯುಕ್ತರಿಗೆ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
TV9 Web
| Edited By: |

Updated on: Jan 04, 2023 | 12:08 PM

Share

ನವದೆಹಲಿ: 2 ದಿನಗಳ ಹಿಂದೆ ದೆಹಲಿಯ (Delhi) ರೋಹಿಣಿ ಸೆಕ್ಟರ್ -31ರಲ್ಲಿ ತಂದೆ ಮತ್ತು ಮಗ ತೆರೆದ ಚರಂಡಿಯಲ್ಲಿ ಬಿದ್ದಿದ್ದರು. ಈ ಬಗ್ಗೆ ಬಂದ ಮಾಧ್ಯಮದ ವರದಿಯನ್ನು ಆಧರಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ದೆಹಲಿಯ ಮುಖ್ಯ ಕಾರ್ಯದರ್ಶಿ, ದೆಹಲಿ ಪೊಲೀಸ್ ಕಮಿಷನರ್​​ಗೆ (Delhi Police Commissioner) ನೋಟಿಸ್ ಜಾರಿ ಮಾಡಿದೆ. ಚರಂಡಿಯಲ್ಲಿ ಬಿದ್ದ ತಂದೆಯನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ 8 ವರ್ಷದ ಮಗನ ದೇಹ ಇನ್ನೂ ಸಿಕ್ಕಿಲ್ಲ.

ಚರಂಡಿಗೆ ಚಪ್ಪಡಿ ಮುಚ್ಚದೆ ಹಾಗೇ ತೆರೆದಿಟ್ಟಿದ್ದರಿಂದ ಈ ಘಟನೆ ನಡೆದಿತ್ತು. ಮಾನವ ಹಕ್ಕುಗಳ ಆಯೋಗ ಈ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ದೆಹಲಿಯ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದ್ದು, ಈ ಪ್ರಕರಣದ ಬಗ್ಗೆ ವಿವರವಾದ ವರದಿಯನ್ನು ಕೇಳಿದೆ. ರಕ್ಷಣಾ ಕಾರ್ಯಾಚರಣೆಯ ಪ್ರಸ್ತುತ ಸ್ಥಿತಿ, ಪೊಲೀಸರ ತನಿಖೆಯ ಸ್ಥಿತಿ, ರಕ್ಷಿಸಲ್ಪಟ್ಟ ತಂದೆಯ ವೈದ್ಯಕೀಯ ಚಿಕಿತ್ಸೆ ಮತ್ತು ಹಾನಿಗೊಳಗಾದ ಕುಟುಂಬಕ್ಕೆ ನೀಡಲಾದ ಪರಿಹಾರದ ಬಗ್ಗೆ ಮಾಹಿತಿ ಕೇಳಲಾಗಿದೆ.

ಇದನ್ನೂ ಓದಿ: ಕುಡಿದು ಸ್ಕೂಟಿ ಓಡಿಸುತ್ತಿದ್ದ ಆಕೆ ಕಾರಿನಡಿ ಸಿಲುಕಿದ್ದು ಗೊತ್ತಾದರೂ ಕಾರು ನಿಲ್ಲಿಸಲಿಲ್ಲ; ಕರಾಳ ರಾತ್ರಿಯ ಘಟನೆ ಬಿಚ್ಚಿಟ್ಟ ದೆಹಲಿ ಯುವತಿಯ ಗೆಳತಿ

ಈ ದುರಂತ ಘಟನೆಗೆ ಕಾರಣರಾದ ಕರ್ತವ್ಯಲೋಪ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮದ ಬಗ್ಗೆಯೂ ಮಾಹಿತಿ ನೀಡುವಂತೆ ಮಾನವ ಹಕ್ಕುಗಳ ಆಯೋಗ ಒತ್ತಾಯಿಸಿದೆ. ಈ ಪ್ರದೇಶದಲ್ಲಿ ಮ್ಯಾನ್‌ಹೋಲ್ ಮುಚ್ಚಳಗಳು ಮತ್ತು ಗ್ರಿಲ್‌ಗಳನ್ನು ಕದಿಯದಂತೆ ಮಾಡಲು ತೆಗೆದುಕೊಂಡ ಅಥವಾ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿಯನ್ನು ನೀಡಬೇಕೆಂದು ಮಾನವ ಹಕ್ಕುಗಳ ಆಯೋಗ ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ