AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಮೂವರು ಐಸಿಸ್ ಸದಸ್ಯರನ್ನು ಬಂಧಿಸಿದ ಎನ್ಐಎ

ವಾರದ ಹಿಂದೆ ಐಸಿಸ್ ಜತೆ ಸಂಪರ್ಕವಿದೆ ಎಂದು ಮೂವರು ಶಂಕಿತ ಆರೋಪಿಗಳನ್ನು ಎನ್ಐಎ ಕರ್ನಾಟಕದಿಂದ ಬಂಧಿಸಿತ್ತು. ಕಳೆದ ಭಾನುವಾರ ಉಗ್ರ ನಿಗ್ರಹ ದಳ ದೇಶದಾದ್ಯಂತ ದಾಳಿ ನಡೆಸಿತ್ತು. ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ತುಮಕೂರಿನ ಎರಡು ಪ್ರದೇಶಗಳಲ್ಲಿ ಎನ್ಐಎ ದಾಳಿ ನಡೆಸಿ...

ದೆಹಲಿ: ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಮೂವರು ಐಸಿಸ್ ಸದಸ್ಯರನ್ನು ಬಂಧಿಸಿದ ಎನ್ಐಎ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 07, 2022 | 2:12 PM

Share

ಇಸ್ಲಾಮಿಕ್ ಸ್ಟೇಟ್ (ISIS) ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಮೂವರನ್ನು ರಾಷ್ಟೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ನವದೆಹಲಿಯ ಬಾಟ್ಲಾ ಹೌಸ್​​ನಲ್ಲಿ ಶೋಧ ನಡೆಸಿದ ನಂತರ ಇವರನ್ನು ಬಂಧಿಸಲಾಗಿದೆ ಎಂದು ಎನ್ಐಎ ಹೇಳಿದೆ. ಶಂಕಿತ ಆರೋಪಿ ಮೊಹಸಿನ್ ಅಹ್ಮದ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ ಎಂದು ಎನ್ಐಎ ಹೇಳಿದೆ. ತನಿಖಾ ಸಂಸ್ಥೆಯ ಪ್ರಕಾರ, ಅಹ್ಮದ್  ಪಟನಾ ನಿವಾಸಿಯಾಗಿದ್ದು ಈತ ಐಸಿಸ್​​ನ ಸಕ್ರಿಯ ಸದಸ್ಯ. ಭಾರತದಲ್ಲಿ ಮತ್ತು ವಿದೇಶಗಳಿಂದ ಐಸಿಸ್ ಒಲವುಳ್ಳ ಜನರಿಂದ ನಿಧಿ ಸಂಗ್ರಹಿಸುವ ಕಾರ್ಯದಲ್ಲಿ ಈತ ಭಾಗಿಯಾಗಿದ್ದ ಎಂದು ಎನ್ಐಎ ಹೇಳಿದೆ. ಈತ ಈ ಹಣವನ್ನು ಐಸಿಸ್ ಚಟುವಟಿಕೆಗಾಗಿ ಕ್ರಿಪ್ಟೋಕರೆನ್ಸಿ ರೂಪದಲ್ಲಿ ಸಿರಿಯಾ ಮತ್ತು ಇತರ ಪ್ರದೇಶಗಳಿಗೆ ಕಳುಹಿಸುತ್ತಿದ್ದ ಎಂದು ಎನ್ಐಎ ಹೇಳಿದೆ. ಶನಿವಾರ ಆರೋಪಿ ಮೊಹಸಿನ್ ಅಹ್ಮದ್ ಪ್ರಸ್ತುತ ವಾಸಿಸುತ್ತಿರುವ ಬಾಟ್ಲಾ ಹೌಸ್ ಆವರಣದಲ್ಲಿ ಎನ್ಐಎ ಶೋಧ ನಡೆಸಿ ಆತನನ್ನು ಬಂಧಿಸಿತ್ತು. ಈತ ಐಸಿಸ್ ನಲ್ಲಿ ಆನ್ ಲೈನ್ ಮತ್ತು ಆಫ್ ಲೈನ್ ನಲ್ಲಿ ತೊಡಗಿಸಿಕೊಂಡಿದ್ದ. ಜೂನ್ 25ರಂದು ಎನ್ಐಎ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದು, ತನಿಖೆ ಪ್ರಗತಿಯಲ್ಲಿದೆ.

ವಾರದ ಹಿಂದೆ ಐಸಿಸ್ ಜತೆ ಸಂಪರ್ಕವಿದೆ ಎಂದು ಮೂವರು ಶಂಕಿತ ಆರೋಪಿಗಳನ್ನು ಎನ್ಐಎ ಕರ್ನಾಟಕದಿಂದ ಬಂಧಿಸಿತ್ತು. ಕಳೆದ ಭಾನುವಾರ ಉಗ್ರ ನಿಗ್ರಹ ದಳ ದೇಶದಾದ್ಯಂತ ದಾಳಿ ನಡೆಸಿತ್ತು. ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ತುಮಕೂರಿನ ಎರಡು ಪ್ರದೇಶಗಳಲ್ಲಿ ಎನ್ಐಎ ದಾಳಿ ನಡೆಸಿ ಮೂವರನ್ನು ವಶಕ್ಕೆ ತೆಗೆದುಕೊಂಡಿತ್ತು. ಈ ಎರಡು ಪ್ರಕರಣಗಳಲ್ಲಿ ಎನ್ಐಎ ಸ್ಥಳೀಯ ಪೊಲೀಸರ ಸಹಾಯ ಪಡೆದಿತ್ತು ಎಂದು ರಾಜ್ಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಈ ಪೈಕಿ ಸಾಜಿದ್ ಮಕ್ರಾನಿ ಮಹಾರಾಷ್ಟ್ರ ಮೂಲದವನಾಗಿದ್ದು, ತುಮಕೂರಿನಲ್ಲಿರುವ ಯುನಾನಿ ಕಾಲೇಜಿನ ಮೂರನೇ ವರ್ಷ ವಿದ್ಯಾರ್ಥಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಐಸಿಸ್ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮಧ್ಯಪ್ರದೇಶ, ಗುಜರಾತ್, ಬಿಹಾರ ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ಸೇರಿದಂತೆ ಆರು ರಾಜ್ಯಗಳಲ್ಲಿ ಶಂಕಿತರ 13 ಸ್ಥಳಗಳಲ್ಲಿ ಸಂಸ್ಥೆ ಶೋಧ ನಡೆಸಿತ್ತು. ಜೂನ್ 25 ರಂದು ಐಪಿಸಿಯ ಸೆಕ್ಷನ್ 153 ಎ, ಮತ್ತು 153 ಬಿ ಮತ್ತು ಯುಎ (ಪಿ) ಕಾಯ್ದೆಯ ಸೆಕ್ಷನ್ 18, 18 ಬಿ, 38, 39 ಮತ್ತು 40 ಅಡಿಯಲ್ಲಿ ಎನ್‌ಐಎ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದೆ.

ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?