ಪಾಕಿಸ್ತಾನದಲ್ಲಿ ಕುಳಿತು ಪಹಲ್ಗಾಮ್​ನಲ್ಲಿ ಲಷ್ಕರ್ ಉಗ್ರರು ಭಯೋತ್ಪಾದಕ ದಾಳಿ ನಡೆಸಿದ್ಹೇಗೆ? ಎನ್​ಐಎ ಚಾರ್ಜ್​ಶೀಟ್​​ನಲ್ಲೇನಿದೆ?

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಭೀಕರ ಪ್ರವಾಸಿಗರ ಹತ್ಯಾಕಾಂಡದ ಹಿಂದಿನ ಕರಾಳ ಪಿತೂರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಂಪೂರ್ಣ ಸಾಕ್ಷ್ಯಗಳೊಂದಿಗೆ ಬಯಲಿಗೆಳೆದಿದೆ. ಪಾಕಿಸ್ತಾನದ ಸಂಚು ಹಾಗೂ ಅದಕ್ಕೆ ಭಾರತ ನೀಡಿದ ಪ್ರತ್ಯುತ್ತರದ ಸಂಪೂರ್ಣ ವಿವರ ಇಲ್ಲಿದೆ.ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಮ್​ನಲ್ಲಿ 2025ರ ಏಪ್ರಿಲ್​ನಲ್ಲಿ 26 ಪ್ರವಾಸಿಗರನ್ನು ಬಲಿ ಪಡೆದಿದ್ದ ಭಯೋತ್ಪಾದಕ ದಾಳಿಯನ್ನು ಸಂಪೂರ್ಣವಾಗಿ ಪಾಕಿಸ್ತಾನದಿಂದಲೇ ನಿಯಂತ್ರಿಸಲಾಗಿತ್ತು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯಕ್ಕೆ ಸಲ್ಲಿಸಿರುವ ತನ್ನ ಚಾರ್ಜ್‌ಶೀಟ್‌ನಲ್ಲಿ ಬಹಿರಂಗಪಡಿಸಿದೆ.

ಪಾಕಿಸ್ತಾನದಲ್ಲಿ ಕುಳಿತು ಪಹಲ್ಗಾಮ್​ನಲ್ಲಿ ಲಷ್ಕರ್ ಉಗ್ರರು ಭಯೋತ್ಪಾದಕ ದಾಳಿ ನಡೆಸಿದ್ಹೇಗೆ? ಎನ್​ಐಎ ಚಾರ್ಜ್​ಶೀಟ್​​ನಲ್ಲೇನಿದೆ?
ಪಹಲ್ಗಾಮ್ ದಾಳಿ
Image Credit source: Lowy Institute

Updated on: May 21, 2026 | 7:20 AM

ನವದೆಹಲಿ, ಮೇ 21: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಮ್​(Pahalgam)ನಲ್ಲಿ 2025ರ ಏಪ್ರಿಲ್​ನಲ್ಲಿ 26 ಪ್ರವಾಸಿಗರನ್ನು ಬಲಿ ಪಡೆದಿದ್ದ ಭಯೋತ್ಪಾದಕ ದಾಳಿಯನ್ನು ಸಂಪೂರ್ಣವಾಗಿ ಪಾಕಿಸ್ತಾನದಿಂದಲೇ ನಿಯಂತ್ರಿಸಲಾಗಿತ್ತು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯಕ್ಕೆ ಸಲ್ಲಿಸಿರುವ ತನ್ನ ಚಾರ್ಜ್‌ಶೀಟ್‌ನಲ್ಲಿ ಬಹಿರಂಗಪಡಿಸಿದೆ.

ಲಾಹೋರ್‌ನಿಂದ ರಿಯಲ್-ಟೈಮ್ ಕಮಾಂಡ್ ನೀಡಿದ್ದ ಲಂಗ್ಡಾ
ಲಷ್ಕರ್-ಎ-ತೊಯ್ಬಾ (LeT) ಮತ್ತು ಅದರ ಅಂಗಸಂಸ್ಥೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಸಂಘಟನೆಯ ಮೋಸ್ಟ್ ವಾಂಟೆಡ್ ಉಗ್ರ ಸೈಫುಲ್ಲಾ ಅಲಿಯಾಸ್ ಸಾಜಿದ್ ಜಟ್ ಅಲಿಯಾಸ್ ‘ಲಂಗ್ಡಾ’ ಈ ದಾಳಿಯ ಮಾಸ್ಟರ್‌ಮೈಂಡ್ ಆಗಿದ್ದ.
ಪಾಕಿಸ್ತಾನದ ಲಾಹೋರ್​​ನಲ್ಲಿ ಕುಳಿತುಕೊಂಡು ಈತ ಭಾರತಕ್ಕೆ ನುಸುಳಿದ್ದ ಮೂವರು ಉಗ್ರರಾದ ಫೈಸಲ್ ಜಟ್, ಹಬೀಬ್ ತಾಹಿರ್ ಮತ್ತು ಹಮ್ಜಾ ಅಫ್ಘಾನಿಗೆ ದಾಳಿ ನಡೆಸಲು ಬೈಸರನ್ ಕಣಿವೆಯ ನೈಜ-ಸಮಯದ ಸ್ಥಳ ಮಾಹಿತಿ ಹಾಗೂ ನಿರ್ದೇಶನಗಳನ್ನು ನೀಡುತ್ತಿದ್ದ.

ಇವರಿಗೆ ಪರ್ವೇಜ್ ಮತ್ತು ಬಶೀರ್ ಎಂಬ ಇಬ್ಬರು ಸ್ಥಳೀಯರು ನೆರವಾಗಿದ್ದರು. ತನಿಖೆಯ ವೇಳೆ ಉಗ್ರರಿಂದ ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳನ್ನು ಪಾಕಿಸ್ತಾನದ ಲಾಹೋರ್ ಮತ್ತು ಕರಾಚಿಯಿಂದ ಖರೀದಿಸಿರುವುದು ತಾಂತ್ರಿಕ ತನಿಖೆಯಲ್ಲಿ ಸಾಬೀತಾಗಿದೆ.

ಜಗತ್ತನ್ನು ದಾರಿ ತಪ್ಪಿಸಲು ನೋಡಿದ ಪಾಕಿಸ್ತಾನ

ದಾಳಿಯ ನಂತರ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC) ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದಾಗ, ಪಾಕಿಸ್ತಾನವು ಜಗತ್ತನ್ನು ದಾರಿ ತಪ್ಪಿಸಲು ಹೊಸ ನಾಟಕವಾಡಿತ್ತು. ದಾಳಿಯ ಹೊಣೆ ಹೊತ್ತಿದ್ದ ಟೆಲಿಗ್ರಾಮ್ ಚಾನೆಲ್ ಹ್ಯಾಕ್ ಆಗಿತ್ತೆಂದು ಸುಳ್ಳು ಹೇಳಿ, ಇದು ಭಾರತವೇ ಮಾಡಿದ್ದು ಎಂದು ಸುಳ್ಳಿನ ಕತೆ ಹೆಣೆಯಲು ಯತ್ನಿಸಿತು. ಆದರೆ, ಎನ್‌ಐಎ ನಡೆಸಿದ ತಾಂತ್ರಿಕ ತನಿಖೆಯಲ್ಲಿ ಈ ಟೆಲಿಗ್ರಾಮ್ ಚಾನೆಲ್‌ಗಳು ಪಾಕಿಸ್ತಾನದ ರಾವಲ್ಪಿಂಡಿ ಮತ್ತು ಖೈಬರ್ ಪಖ್ತುಂಖ್ವಾದಿಂದಲೇ ಕಾರ್ಯನಿರ್ವಹಿಸುತ್ತಿದ್ದವು ಎಂಬುದು ಪತ್ತೆಯಾಗಿದೆ.

ಮತ್ತಷ್ಟು ಓದಿ: Pahalgam Attack: ಹಸಿರು ಕಣಿವೆಯಲ್ಲಿ ಹರಿಯಿತು ಅಮಾಯಕರ ರಕ್ತ: ವರ್ಷ ಕಳೆದರೂ ಚೇತರಿಸಿಕೊಳ್ಳದ ಪಹಲ್ಗಾಮ್ ಸಂತ್ರಸ್ತ ಕುಟುಂಬಗಳು

ಭಾರತದ ದಿಟ್ಟ ಪ್ರತಿಕಾರ: ಆಪರೇಷನ್ ಸಿಂಧೂರ್
ಈ ಭೀಕರ ಪ್ರವಾಸಿಗರ ಹತ್ಯಾಕಾಂಡಕ್ಕೆ ಭಾರತ ಸುಮ್ಮನೆ ಕುಳಿತುಕೊಳ್ಳಲಿಲ್ಲ. ಈ ದಾಳಿಯು ಭಾರತದ ಅತ್ಯಂತ ರಹಸ್ಯ ಹಾಗೂ ನಿರ್ಣಾಯಕ ಮಿಲಿಟರಿ ಕಾರ್ಯಾಚರಣೆ ‘ಆಪರೇಷನ್ ಸಿಂಧೂರ್’ ಅನ್ನು ಪ್ರಚೋದಿಸಿತು. ಭಾರತೀಯ ವಾಯುಪಡೆಯು (IAF) ಅತ್ಯಾಧುನಿಕ ಗ್ಲೈಡ್ ಬಾಂಬ್‌ಗಳು, ಡ್ರೋನ್‌ಗಳು ಮತ್ತು ಅತ್ಯಂತ ಶಕ್ತಿಶಾಲಿ ‘ಬ್ರಹ್ಮೋಸ್’ ಕ್ರೂಸ್ ಕ್ಷಿಪಣಿಗಳ ಮೂಲಕ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಲಷ್ಕರ್-ಎ-ತೊಯ್ಬಾದ ಉಡಾವಣಾ ನೆಲೆಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿತು. ಈ ಮೂಲಕ ಪಾಕಿಸ್ತಾನದ ವಾಯು ರಕ್ಷಣೆ ಮತ್ತು ಪ್ರಮುಖ ಮಿಲಿಟರಿ ಮೂಲಸೌಕರ್ಯಗಳನ್ನು ಭಾರತೀಯ ಸೇನೆ ಯಶಸ್ವಿಯಾಗಿ ದುರ್ಬಲಗೊಳಿಸಿ, ತಕ್ಕ ಪಾಠ ಕಲಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us