AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಷನಲ್ ಪೆನ್ಷನ್ ಸಿಸ್ಟಮ್, ಅಟಲ್ ಪೆನ್ಷನ್ ಯೋಜನಾ ಚಂದಾದಾರರ ಸಂಖ್ಯೆ ಶೇ 22ಹೆಚ್ಚಳ

ನ್ಯಾಷನಲ್ ಪೆನ್ಷನ್ ಸ್ಕೀಮ್ ಹಾಗೂ ಅಟಲ್ ಪೆನ್ಷನ್ ಯೋಜನಾದಲ್ಲಿ ಚಂದಾದಾರರ ಸಂಖ್ಯೆಯಲ್ಲಿ 2021ರ ಫೆಬ್ರವರಿ ಕೊನೆ ಹೊತ್ತಿಗೆ ಶೇಕಡಾ 22ರಷ್ಟು ಹೆಚ್ಚಳವಾಗಿದೆ. ಈಗಿರುವ ಒಟ್ಟಾರೆ ಚಂದಾದಾರರ ಸಂಖ್ಯೆ 4.15 ಕೋಟಿ.

ನ್ಯಾಷನಲ್ ಪೆನ್ಷನ್ ಸಿಸ್ಟಮ್, ಅಟಲ್ ಪೆನ್ಷನ್ ಯೋಜನಾ ಚಂದಾದಾರರ ಸಂಖ್ಯೆ ಶೇ 22ಹೆಚ್ಚಳ
ಸಾಂದರ್ಭಿಕ ಚಿತ್ರ
Srinivas Mata
| Updated By: ganapathi bhat|

Updated on:Mar 17, 2021 | 9:35 PM

Share

ನ್ಯಾಷನಲ್ ಪೆನ್ಷನ್ ಸಿಸ್ಟಮ್ ಮತ್ತು ಅಟಲ್ ಪೆನ್ಷನ್ ಯೋಜನಾ ಪಿಂಚಣಿ ಯೋಜನೆಗಳ ಚಂದಾದಾರರ ಸಂಖ್ಯೆಯಲ್ಲಿ 2021ರ ಫೆಬ್ರವರಿ ಕೊನೆಗೆ ಶೇಕಡಾ 22ರಷ್ಟು ಬೆಳವಣಿಗೆ ಕಂಡಿದ್ದು, 4.15 ಕೋಟಿಗೆ ತಲುಪಿದೆ ಎಂಬ ಮಾಹಿತಿಯು ಮಾರ್ಚ್ 17ರ ಸರ್ಕಾರದ ದತ್ತಾಂಶದಿಂದ ಗೊತ್ತಾಗಿದೆ. “ವಿವಿಧ ಯೋಜನೆಗಳಿಗೆ ಚಂದಾದಾರರ ಸಂಖ್ಯೆಯು 2020ರ ಫೆಬ್ರವರಿಯಲ್ಲಿ 340.34 ಲಕ್ಷ ಇದ್ದದ್ದು 2021ರ ಫೆಬ್ರವರಿ ಕೊನೆಗೆ 414.70 ಲಕ್ಷಕ್ಕೆ ಏರಿಕೆಯಾಗಿದೆ. ಆ ಮೂಲಕ ವರ್ಷದಿಂದ ವರ್ಷಕ್ಕೆ ಶೇ 21.85ರಷ್ಟು ಏರಿಕೆಯನ್ನು ತೋರಿಸುತ್ತಿದೆ,” ಎಂದು ಪಿಎಫ್​​ಆರ್​​ಡಿಎ ಹೇಳಿಕೆಯಲ್ಲಿ ತಿಳಿಸಿದೆ. 

ನ್ಯಾಷನಲ್ ಪೆನ್ಷನ್ ಸಿಸ್ಟಮ್ (ಎನ್​ಪಿಎಸ್) ಮತ್ತು ಅಟಲ್ ಪೆನ್ಷನ್ ಯೋಜನಾ (ಎಪಿವೈ) ಅಡಿಯಲ್ಲಿ ವರ್ಷದ ಹಿಂದೆ 3.43 ಕೋಟಿ ಚಂದಾದಾರರಿದ್ದರು. ಫೆಬ್ರವರಿ 28, 2021ಕ್ಕೆ ಒಟ್ಟಾರೆ ಪೆನ್ಷನ್ ಅಸೆಟ್ಸ್ ಅಂಡರ್ ಮ್ಯಾನೇಜ್​ಮೆಂಟ್ ರೂ. 5,59,594 ಕೋಟಿ ಇದ್ದು, ವರ್ಷದಿಂದ ವರ್ಷಕ್ಕೆ ಶೇಕಡಾ 33.09ರಷ್ಟು ಬೆಳವಣಿಗೆ ತೋರಿಸುತ್ತಿದೆ ಎಂದು ಪಿಎಫ್​ಆರ್​ಡಿಎ ತಿಳಿಸಿದೆ.

ಸರ್ಕಾರಿ ನೌಕರರು, ಸ್ವಾಯತ್ತ ಸಂಸ್ಥೆಗಳು ಹಾಗೂ ಕಾರ್ಪೊರೇಟ್ ವಲಯದ ಸಿಬ್ಬಂದಿಗಾಗಿ ಎನ್​ಪಿಎಸ್ ಇದೆ. ಇನ್ನು ದೇಶದ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ವಯಸ್ಸಾದ ಮೇಲೆ ಪಿಂಚಣಿ ಒದಗಿಸುವುದನ್ನೇ ಗುರಿಯಾಗಿ ಇಟ್ಟುಕೊಂಡು ಅಟಲ್ ಪೆನ್ಷನ್ ಯೋಜನೆಯನ್ನು ರೂಪಿಸಲಾಗಿದೆ.

ಇದನ್ನೂ ಓದಿ: Income Tax Rules: ಏಪ್ರಿಲ್ 1ರಿಂದ ಬದಲಾಗಲಿದೆ ಆದಾಯ ತೆರಿಗೆಯ ಈ 5 ನಿಯಮ

Published On - 9:06 pm, Wed, 17 March 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ