AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ವ ಧರ್ಮ ಸಮನ್ವಯ ಸಭೆ: ಪಿಎಫ್​ಐ ನಿಷೇಧಕ್ಕೆ AISSC ಮುಖ್ಯಸ್ಥ ನಾಸಿರುದ್ದೀನ್ ಚಿಸ್ತಿ ಒತ್ತಾಯ

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕರೆದಿದ್ದ ಸರ್ವಧರ್ಮ ಸಮನ್ವಯ ಸಭೆಯಲ್ಲಿ ಅಖಿಲ ಭಾರತ ಸೂಫಿ ಸಜ್ಜದನ್ಶಿನ್ ಕೌನ್ಸಿಲ್ (ಎಐಎಸ್‌ಎಸ್‌ಸಿ) ಮುಖ್ಯಸ್ಥ ನಾಸಿರುದ್ದೀನ್ ಚಿಶ್ತಿ ಅವರು ಪಿಎಫ್‌ಐ ನಿಷೇಧಕ್ಕೆ ಒತ್ತಾಯಿಸಿದ್ದಾರೆ.

ಸರ್ವ ಧರ್ಮ ಸಮನ್ವಯ ಸಭೆ: ಪಿಎಫ್​ಐ ನಿಷೇಧಕ್ಕೆ AISSC ಮುಖ್ಯಸ್ಥ ನಾಸಿರುದ್ದೀನ್ ಚಿಸ್ತಿ ಒತ್ತಾಯ
MeetingImage Credit source: Hindustan Times
TV9 Web
| Edited By: |

Updated on:Jul 30, 2022 | 6:12 PM

Share

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕರೆದಿದ್ದ ಸರ್ವಧರ್ಮ ಸಮನ್ವಯ ಸಭೆಯಲ್ಲಿ ಅಖಿಲ ಭಾರತ ಸೂಫಿ ಸಜ್ಜದನ್ಶಿನ್ ಕೌನ್ಸಿಲ್ (ಎಐಎಸ್‌ಎಸ್‌ಸಿ) ಮುಖ್ಯಸ್ಥ ನಾಸಿರುದ್ದೀನ್ ಚಿಶ್ತಿ ಅವರು ಪಿಎಫ್‌ಐ ನಿಷೇಧಕ್ಕೆ ಒತ್ತಾಯಿಸಿದ್ದಾರೆ. ಯಾವುದೇ ಆಮೂಲಾಗ್ರ ಸಂಘಟನೆಯಾಗಿರಲಿ, ಅವರ ವಿರುದ್ಧ ಪುರಾವೆಗಳಿದ್ದರೆ ಅವುಗಳನ್ನು ನಿಷೇಧಿಸಬೇಕು ಎಂದು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಾಗ ನಾವು ಅದನ್ನು ಖಂಡಿಸುತ್ತೇವೆ. ಏನಾದರೂ ಮಾಡುವ ಸಮಯ ಬಂದಿದೆ. ಆಮೂಲಾಗ್ರ ಸಂಘಟನೆಗಳನ್ನು ನಿಯಂತ್ರಿಸುವುದು ಮತ್ತು ನಿಷೇಧಿಸುವ ಸಮಯ ಸನ್ನಿಹಿತವಾಗಿದೆ ಎಂದರು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಸರ್ವಧರ್ಮ ಸಮನ್ವಯತೆ ಕಾಪಾಡುವ ನಿಟ್ಟಿನಲ್ಲಿ ಸರ್ವಧರ್ಮ ಸಭೆ ಕರೆದಿದ್ದು, ವಿವಿಧ ಧರ್ಮಗಳ ಧಾರ್ಮಿಕ ಮುಖಂಡರು ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.

ಎಐಎಸ್‌ಎಸ್‌ಸಿ ಮುಖ್ಯಸ್ಥ ನಾಸಿರುದ್ದೀನ್ ಚಿಸ್ತಿ ಮಾತನಾಡಿ, ಕಳೆದ ಕೆಲವು ದಿನಗಳಿಂದ ಧರ್ಮದ ಬದಲು ಅಧರ್ಮ ನಡೆಯುತ್ತಿದೆ. ಇಂದು ನಮ್ಮ ದೇಶದಲ್ಲಿ ಯುವಕರು ಮೂಲಭೂತವಾದಿಗಳಾಗಿದ್ದಾರೆ. ಇಂತಹ ಮೂಲಭೂತ ಶಕ್ತಿಗಳಿಂದ ನಾವು ಧಾರ್ಮಿಕ ಮುಖಂಡರು ದೇಶವನ್ನು ಉಳಿಸಬೇಕಾಗಿದೆ.

ಹಿಂದೂಸ್ತಾನವು ಒಂದು ಪುಷ್ಪಗುಚ್ಛವಾಗಿದೆ. ಇದರಲ್ಲಿ ಎಲ್ಲಾ ಧರ್ಮ ಮತ್ತು ಪಂಗಡಗಳ ಜನರು ವಾಸಿಸುತ್ತಾರೆ. ಈಗ ನಾವು ಈ ನೆಲಕ್ಕಾಗಿ ಕೆಲಸ ಮಾಡುತ್ತಿದ್ದೇವೆ, ದೇಶದ ಶಾಂತಿ ಸೌಹಾರ್ದತೆ ಕಾಪಾಡಲು ಪ್ರತಿ ರಾಜ್ಯದಲ್ಲೂ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದರು.

ಬಿಜೆಪಿ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರ ಹೇಳಿಕೆಯನ್ನು ಬೆಂಬಲಿಸಿ ಪೋಸ್ಟ್​ ಮಾಡಿದ್ದಕ್ಕೆ ಉದಯಪುರದಲ್ಲಿ ಟೈಲರ್ ಓರ್ವನನ್ನು ಹತ್ಯೆ ಮಾಡಿ ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಮಹಾರಾಷ್ಟ್ರದಲ್ಲೂ ಇದೇ ಮಾದರಿಯ ಘಟನೆ ವರದಿಯಾಗಿತ್ತು. ಮಹಾರಾಷ್ಟ್ರದ ಅಮರಾವತಿಯಲ್ಲಿ ಇದೇ ರೀತಿಯ ದ್ವೇಷದ ಹತ್ಯೆ ನಡೆದಿದ್ದು, ಉಮೇಶ್ ಕೋಲ್ಹೆ ಎಂಬ ಔಷಧಿಕಾರನನ್ನು ಹತ್ಯೆ ಮಾಡಲಾಗಿದೆ.

ಪಿಎಫ್​ಐ ಸೇರಿ ಇತರೆ ಸಂಘಟನೆಗಳ ನಿಷೇಧದ ಕುರಿತು ಕರ್ನಾಟಕ ಸೇರಿದಂತೆ ಹಲವು ಭಾಗಗಳಲ್ಲಿ ಚರ್ಚೆ ಎದ್ದಿದೆ.

Published On - 5:59 pm, Sat, 30 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ