AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ದಾಳಿ ಬೆನ್ನಲ್ಲೇ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಪುನಾರಚನೆ; ಅಧ್ಯಕ್ಷರಾಗಿ ಅಲೋಕ್ ಜೋಶಿ ನೇಮಕ

ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಅಧ್ಯಕ್ಷರಾಗಿ ಮಾಜಿ RAW ಮುಖ್ಯಸ್ಥ ಅಲೋಕ್ ಜೋಶಿ ಅವರನ್ನು ನೇಮಕ ಮಾಡಲಾಗಿದೆ. ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಹೊಸದಾಗಿ 6 ಸದಸ್ಯರು ಭದ್ರತಾ ಸಲಹಾ ಮಂಡಳಿಗೆ ಸೇರ್ಪಡೆಯಾಗಿದ್ದಾರೆ. ಮಾಜಿ ಏರ್ ಮಾರ್ಷಲ್ ಪಿ.ಎಂ.ಸಿನ್ಹಾ, ಲೆಫ್ಟಿನೆಂಟ್ ಜನರಲ್ ಎ.ಕೆ.ಸಿಂಗ್, ನಿವೃತ್ತ ಸೇನಾ ಅಧಿಕಾರಿ ರಿಯರ್ ಅಡ್ಮಿರಲ್ ಮಾಂಟಿ ಖನ್ನಾ, ರಾಜೀವ್ ರಂಜನ್ ವರ್ಮಾ, ನಿವೃತ್ತ IPS ಅಧಿಕಾರಿ ಮನಮೋಹನ್ ಸಿಂಗ್, ನಿವೃತ್ತ IFS ಅಧಿಕಾರಿ ಬಿ.ವೆಂಕಟೇಶ್ ವರ್ಮಾ ಸಲಹಾ ಮಂಡಳಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಉಗ್ರರ ದಾಳಿ ಬೆನ್ನಲ್ಲೇ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಪುನಾರಚನೆ; ಅಧ್ಯಕ್ಷರಾಗಿ ಅಲೋಕ್ ಜೋಶಿ ನೇಮಕ
Alok Joshi
ಸುಷ್ಮಾ ಚಕ್ರೆ
|

Updated on:Apr 30, 2025 | 3:20 PM

Share

ನವದೆಹಲಿ, ಏಪ್ರಿಲ್ 30: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Terror Attack) ನಂತರ ಮತ್ತು ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ನಡುವೆ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು ಪುನರ್ರಚಿಸುವ ಕ್ರಮ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ನೂತನ ಮುಖ್ಯಸ್ಥರಾಗಿ ಮಾಜಿ ರಾ ಮತ್ತು ಎಡಬ್ಲ್ಯೂ ಮುಖ್ಯಸ್ಥ ಅಲೋಕ್ ಜೋಶಿ (Alok Joshi) ನೇಮಕಗೊಂಡಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ ಮೋದಿ ಸರ್ಕಾರ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು (ಎನ್‌ಎಸ್‌ಎಬಿ) ಪುನರ್ ರಚಿಸಿದೆ. ಮಾಜಿ ರಾ ಮುಖ್ಯಸ್ಥ ಅಲೋಕ್ ಜೋಶಿ ಇದರ ನೇತೃತ್ವ ವಹಿಸಲಿದ್ದಾರೆ.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಸುಂದರವಾದ ಬೈಸರನ್ ಕಣಿವೆಯಲ್ಲಿ 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಎನ್‌ಎಸ್‌ಎಬಿಯನ್ನು ಪುನರ್ರಚಿಸುವ ಕ್ರಮ ಕೈಗೊಳ್ಳಲಾಗಿದೆ. ಎನ್‌ಎಸ್‌ಎಬಿ ಈಗ 6 ಸದಸ್ಯರನ್ನು ಹೊಂದಿರುತ್ತದೆ. ಇದರಲ್ಲಿ ಮೂವರು ಮಿಲಿಟರಿ ಹಿನ್ನೆಲೆಯವರು, ಇಬ್ಬರು ಐಪಿಎಸ್ ಅಧಿಕಾರಿಗಳು ಮತ್ತು ಒಬ್ಬ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಸಿಬ್ಬಂದಿ ಸೇರಿದ್ದಾರೆ. ಸೇನೆಯಿಂದ, ಮಾಜಿ ದಕ್ಷಿಣ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಎ.ಕೆ ಸಿಂಗ್, ಮಾಜಿ ಪಶ್ಚಿಮ ವಾಯು ಕಮಾಂಡರ್ ಏರ್ ಮಾರ್ಷಲ್ ಪಿ.ಎಂ ಸಿನ್ಹಾ ಮತ್ತು ರಿಯರ್ ಅಡ್ಮಿರಲ್ ಮಾಂಟಿ ಖನ್ನಾ ಅವರನ್ನು ನೇಮಿಸಲಾಗಿದೆ. ನಿವೃತ್ತ ಐಪಿಎಸ್ ಅಧಿಕಾರಿಗಳಾದ ರಾಜೀವ್ ರಂಜನ್ ವರ್ಮಾ, ಮನಮೋಹನ್ ಸಿಂಗ್ ಮತ್ತು ನಿವೃತ್ತ ಐಎಫ್‌ಎಸ್ ಅಧಿಕಾರಿ ಬಿ. ವೆಂಕಟೇಶ್ ವರ್ಮಾ ಸೇರಿ 6 ಸದಸ್ಯರ ಮಂಡಳಿಯನ್ನು ರಚಿಸಲಾಗಿದೆ.

ಇದನ್ನೂ ಓದಿ
Image
ಮತ ಚಲಾಯಿಸಿದ್ದೇನೆ, ರೇಷನ್​ ಕಾರ್ಡ್​ ಇದೆ ಇಲ್ಲೇ ಇರ್ತೀನಿ ಎಂದ ಪಾಕ್ ಪ್ರಜೆ
Image
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಸಂಪುಟ ಸಮಿತಿಗಳ ಸಭೆ
Image
ಆಂಧ್ರಪ್ರದೇಶ, ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು
Image
ಪಾಕ್​ನಿಂದ ಗಡಿಯಲ್ಲಿ ಗುಂಡಿನ ದಾಳಿ, ಭಾರತೀಯ ಸೇನೆಯಿಂದ ಪ್ರತಿದಾಳಿ

ಇದನ್ನೂ ಓದಿ: ಉಗ್ರರ ಹುಟ್ಟಡಗಿಸಲು ಸಶಸ್ತ್ರ ಪಡೆಗಳಿಗೆ ಪೂರ್ತಿ ಸ್ವಾತಂತ್ರ್ಯ ನೀಡಿದ ಪ್ರಧಾನಿ ಮೋದಿ

ಡಿಸೆಂಬರ್ 1998ರಲ್ಲಿ ಮೊದಲು ರಚನೆಯಾದ NSAB ರಾಷ್ಟ್ರೀಯ ಭದ್ರತಾ ಮಂಡಳಿಗೆ (NSC) ರಾಷ್ಟ್ರೀಯ ಭದ್ರತಾ ವಿಷಯಗಳ ಕುರಿತು ದೃಷ್ಟಿಕೋನಗಳನ್ನು ಒದಗಿಸಲು ಮತ್ತು ನೀತಿ ಆಯ್ಕೆಗಳನ್ನು ಶಿಫಾರಸು ಮಾಡಲು ದೀರ್ಘಾವಧಿಯ ವಿಶ್ಲೇಷಣೆಯನ್ನು ಕೈಗೊಳ್ಳುತ್ತದೆ. 2018ರಲ್ಲಿ ರಚನೆಯಾದ ಕೊನೆಯ ಮಂಡಳಿಯಲ್ಲಿ ರಷ್ಯಾದಲ್ಲಿ ಮಾಜಿ ಭಾರತೀಯ ರಾಯಭಾರಿ (2014–16) ಪಿ.ಎಸ್. ರಾಘವನ್ ಮುಖ್ಯಸ್ಥರಾಗಿದ್ದರು. ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ನಂತರ ಭಾರತ ನೆರೆಯ ದೇಶವಾದ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ದಾಳಿಯನ್ನು ಪ್ರಾರಂಭಿಸಿದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಅಲೋಕ್ ಜೋಶಿಯನ್ನು NSAB ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Wed, 30 April 25

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!