AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೋದ್ಯಮಗಳು ದೇಶದ ಬೆನ್ನೆಲುಬಾಗುತ್ತಿವೆ, ಜ.16ರಂದು ರಾಷ್ಟ್ರೀಯ ಸ್ಟಾರ್ಟ್​ ಅಪ್​ ದಿನ ಆಚರಣೆ: ಪ್ರಧಾನಿ ಮೋದಿ

ಸ್ಟಾರ್ಟ್​ ಅಪ್​ ಇಂಡಿಯಾ ಉಪಕ್ರಮದ 6ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ ಜನವರಿ 10 ರಿಂದ 16ರವರೆಗೆ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ನವೋದ್ಯಮಗಳು ದೇಶದ ಬೆನ್ನೆಲುಬಾಗುತ್ತಿವೆ, ಜ.16ರಂದು ರಾಷ್ಟ್ರೀಯ ಸ್ಟಾರ್ಟ್​ ಅಪ್​ ದಿನ ಆಚರಣೆ: ಪ್ರಧಾನಿ ಮೋದಿ
ಪ್ರಧಾನಿ ಮೋದಿ
TV9 Web
| Edited By: |

Updated on:Jan 15, 2022 | 5:41 PM

Share

ಆಜಾದಿ ಕಾ ಅಮೃತ್​ ಮಹೋತ್ಸವ್​ ಆಚರಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ 150ಕ್ಕೂ ಹೆಚ್ಚು ನವೋದ್ಯಮಿಗಳ (Start Ups)ಜತೆ ಇಂದು ಸಂವಾದ ನಡೆಸಿದರು. ಇದೇ ವೇಳೆ, ಜನವರಿ 16ನ್ನು ಇನ್ನುಮುಂದೆ ರಾಷ್ಟ್ರೀಯ ಸ್ಟಾರ್ಟ್​ ಅಪ್​ ದಿನವನ್ನಾಗಿ ಆಚರಿಸುವುದಾಗಿ ಘೋಷಣೆ ಮಾಡಿದರು.  ಇದೇ ವೇಳೆ ಮಾತನಾಡಿದ ಅವರು, ಈಗ ನವೋದ್ಯಮಗಳು ಹೊಸ ಭಾರತದ ಬೆನ್ನೆಲುಬಾಗಿ ರೂಪುಗೊಳ್ಳುತ್ತಿವೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 100ವರ್ಷಗಳಾಗುವ ಹೊತ್ತಿಗೆ ಈ ಸ್ಟಾರ್ಟ್ ಅಪ್​ಗಳೂ ಕೂಡ ಇನ್ನಷ್ಟು ಮಹತ್ವದ ಪಾತ್ರ ವಹಿಸಲಿವೆ. ಇಲ್ಲಿನ ನವೋದ್ಯಮಿಗಳು ನಮ್ಮ ದೇಶದ ಗೌರವ, ಹೆಮ್ಮೆಯನ್ನು ಜಾಗತಿಕವಾಗಿ ಹೆಚ್ಚಿಸಿವೆ ಎಂದು ಹೇಳಿದರು. 

ಈ ದಶಕವನ್ನು ಭಾರತದ ಟೆಚಾಡೆ ಎಂದು ಕರೆಯಲಾಗುವುದು. ನಾವೀನ್ಯತೆ, ಉದ್ಯಮಶೀಲತೆಯನ್ನು ಅಭಿವೃದ್ಧಿಗೊಳಿಸುವುದನ್ನು ಒಳಗೊಂಡಿದೆ. ಈಗ ಭಾರತದ ಸ್ಟಾರ್ಟ್​ ಅಪ್​ಗಳು 55 ವಿವಿಧ ಉದ್ಯಮಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. 5 ವರ್ಷಗಳ ಹಿಂದೆ ನಮ್ಮಲ್ಲಿ 500 ಸ್ಟಾರ್ಟ್​ ಅಪ್​ಗಳೂ ಕೂಡ ಇರಲಿಲ್ಲ. ಆದರೆ ಆ ಸಂಖ್ಯೆಯೀಗ 60 ಸಾವಿರ ದಾಟಿದೆ ಎಂದು ಪ್ರಧಾನಮಂತ್ರಿ ಮೋದಿ ತಿಳಿಸಿದರು. ಹಾಗೇ, ಯುವಕರ ಸೃಜನಾತ್ಮಕತೆಯ ಮೇಲೆ ಭಾರತಕ್ಕೆ ನಂಬಿಕೆಯಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಸ್ಟಾರ್ಟ್​ ಅಪ್​ ಇಂಡಿಯಾ ಉಪಕ್ರಮದ 6ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ ಜನವರಿ 10 ರಿಂದ 16ರವರೆಗೆ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಅದರ ಭಾಗವಾಗಿ ಇಂದು ಪಿಎಂ ಮೋದಿ 150 ಸ್ಟಾರ್ಟ್​-ಅಪ್​ಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ.  ಸ್ಟಾರ್ಟ್ ಅಪ್​​ಗಳು ರಾಷ್ಟ್ರದ ಬೆಳವಣಿಗೆಗೆ ಗಮನಾರ್ಹವಾಗಿ ಕೊಡುಗೆಗಳನ್ನು ನೀಡುತ್ತವೆ ಎಂದು ಪ್ರಧಾನಿ ಮೋದಿ ದೃಢವಾಗಿ ನಂಬಿಕೆ ಹೊಂದಿದ್ದಾರೆ.  ಭಾರತದಲ್ಲಿ 2016ರಲ್ಲಿ ಸ್ಟಾರ್ಟ್ ಅಪ್​ ಇಂಡಿಯಾ ಉಪಕ್ರಮ ಶುರು ಮಾಡಲಾಯಿತು. ಅವುಗಳ ಬೆಳವಣಿಗೆ, ಉತ್ತೇಜನಕ್ಕೆ ಅವಕಾಶ ಕಲ್ಪಿಸಿಕೊಡಲು ಸರ್ಕಾರ ಕೆಲಸ ಮಾಡುತ್ತಿದೆ ಎಂದೂ ಪಿಎಂಒ ಮಾಹಿತಿ ನೀಡಿದೆ.

ಇದನ್ನೂ ಓದಿ: ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ಸಹ ಪ್ರಯಾಣಿಕರ ಸಹಕಾರಕ್ಕೆ ಭಾರೀ ಮೆಚ್ಚುಗೆ

Published On - 5:39 pm, Sat, 15 January 22

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​