AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೋದ್ಯಮಗಳು ದೇಶದ ಬೆನ್ನೆಲುಬಾಗುತ್ತಿವೆ, ಜ.16ರಂದು ರಾಷ್ಟ್ರೀಯ ಸ್ಟಾರ್ಟ್​ ಅಪ್​ ದಿನ ಆಚರಣೆ: ಪ್ರಧಾನಿ ಮೋದಿ

ಸ್ಟಾರ್ಟ್​ ಅಪ್​ ಇಂಡಿಯಾ ಉಪಕ್ರಮದ 6ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ ಜನವರಿ 10 ರಿಂದ 16ರವರೆಗೆ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ನವೋದ್ಯಮಗಳು ದೇಶದ ಬೆನ್ನೆಲುಬಾಗುತ್ತಿವೆ, ಜ.16ರಂದು ರಾಷ್ಟ್ರೀಯ ಸ್ಟಾರ್ಟ್​ ಅಪ್​ ದಿನ ಆಚರಣೆ: ಪ್ರಧಾನಿ ಮೋದಿ
ಪ್ರಧಾನಿ ಮೋದಿ
TV9 Web
| Edited By: |

Updated on:Jan 15, 2022 | 5:41 PM

Share

ಆಜಾದಿ ಕಾ ಅಮೃತ್​ ಮಹೋತ್ಸವ್​ ಆಚರಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ 150ಕ್ಕೂ ಹೆಚ್ಚು ನವೋದ್ಯಮಿಗಳ (Start Ups)ಜತೆ ಇಂದು ಸಂವಾದ ನಡೆಸಿದರು. ಇದೇ ವೇಳೆ, ಜನವರಿ 16ನ್ನು ಇನ್ನುಮುಂದೆ ರಾಷ್ಟ್ರೀಯ ಸ್ಟಾರ್ಟ್​ ಅಪ್​ ದಿನವನ್ನಾಗಿ ಆಚರಿಸುವುದಾಗಿ ಘೋಷಣೆ ಮಾಡಿದರು.  ಇದೇ ವೇಳೆ ಮಾತನಾಡಿದ ಅವರು, ಈಗ ನವೋದ್ಯಮಗಳು ಹೊಸ ಭಾರತದ ಬೆನ್ನೆಲುಬಾಗಿ ರೂಪುಗೊಳ್ಳುತ್ತಿವೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 100ವರ್ಷಗಳಾಗುವ ಹೊತ್ತಿಗೆ ಈ ಸ್ಟಾರ್ಟ್ ಅಪ್​ಗಳೂ ಕೂಡ ಇನ್ನಷ್ಟು ಮಹತ್ವದ ಪಾತ್ರ ವಹಿಸಲಿವೆ. ಇಲ್ಲಿನ ನವೋದ್ಯಮಿಗಳು ನಮ್ಮ ದೇಶದ ಗೌರವ, ಹೆಮ್ಮೆಯನ್ನು ಜಾಗತಿಕವಾಗಿ ಹೆಚ್ಚಿಸಿವೆ ಎಂದು ಹೇಳಿದರು. 

ಈ ದಶಕವನ್ನು ಭಾರತದ ಟೆಚಾಡೆ ಎಂದು ಕರೆಯಲಾಗುವುದು. ನಾವೀನ್ಯತೆ, ಉದ್ಯಮಶೀಲತೆಯನ್ನು ಅಭಿವೃದ್ಧಿಗೊಳಿಸುವುದನ್ನು ಒಳಗೊಂಡಿದೆ. ಈಗ ಭಾರತದ ಸ್ಟಾರ್ಟ್​ ಅಪ್​ಗಳು 55 ವಿವಿಧ ಉದ್ಯಮಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. 5 ವರ್ಷಗಳ ಹಿಂದೆ ನಮ್ಮಲ್ಲಿ 500 ಸ್ಟಾರ್ಟ್​ ಅಪ್​ಗಳೂ ಕೂಡ ಇರಲಿಲ್ಲ. ಆದರೆ ಆ ಸಂಖ್ಯೆಯೀಗ 60 ಸಾವಿರ ದಾಟಿದೆ ಎಂದು ಪ್ರಧಾನಮಂತ್ರಿ ಮೋದಿ ತಿಳಿಸಿದರು. ಹಾಗೇ, ಯುವಕರ ಸೃಜನಾತ್ಮಕತೆಯ ಮೇಲೆ ಭಾರತಕ್ಕೆ ನಂಬಿಕೆಯಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಸ್ಟಾರ್ಟ್​ ಅಪ್​ ಇಂಡಿಯಾ ಉಪಕ್ರಮದ 6ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ ಜನವರಿ 10 ರಿಂದ 16ರವರೆಗೆ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಅದರ ಭಾಗವಾಗಿ ಇಂದು ಪಿಎಂ ಮೋದಿ 150 ಸ್ಟಾರ್ಟ್​-ಅಪ್​ಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ.  ಸ್ಟಾರ್ಟ್ ಅಪ್​​ಗಳು ರಾಷ್ಟ್ರದ ಬೆಳವಣಿಗೆಗೆ ಗಮನಾರ್ಹವಾಗಿ ಕೊಡುಗೆಗಳನ್ನು ನೀಡುತ್ತವೆ ಎಂದು ಪ್ರಧಾನಿ ಮೋದಿ ದೃಢವಾಗಿ ನಂಬಿಕೆ ಹೊಂದಿದ್ದಾರೆ.  ಭಾರತದಲ್ಲಿ 2016ರಲ್ಲಿ ಸ್ಟಾರ್ಟ್ ಅಪ್​ ಇಂಡಿಯಾ ಉಪಕ್ರಮ ಶುರು ಮಾಡಲಾಯಿತು. ಅವುಗಳ ಬೆಳವಣಿಗೆ, ಉತ್ತೇಜನಕ್ಕೆ ಅವಕಾಶ ಕಲ್ಪಿಸಿಕೊಡಲು ಸರ್ಕಾರ ಕೆಲಸ ಮಾಡುತ್ತಿದೆ ಎಂದೂ ಪಿಎಂಒ ಮಾಹಿತಿ ನೀಡಿದೆ.

ಇದನ್ನೂ ಓದಿ: ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ಸಹ ಪ್ರಯಾಣಿಕರ ಸಹಕಾರಕ್ಕೆ ಭಾರೀ ಮೆಚ್ಚುಗೆ

Published On - 5:39 pm, Sat, 15 January 22

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್