AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೋದ್ಯಮಗಳು ದೇಶದ ಬೆನ್ನೆಲುಬಾಗುತ್ತಿವೆ, ಜ.16ರಂದು ರಾಷ್ಟ್ರೀಯ ಸ್ಟಾರ್ಟ್​ ಅಪ್​ ದಿನ ಆಚರಣೆ: ಪ್ರಧಾನಿ ಮೋದಿ

ಸ್ಟಾರ್ಟ್​ ಅಪ್​ ಇಂಡಿಯಾ ಉಪಕ್ರಮದ 6ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ ಜನವರಿ 10 ರಿಂದ 16ರವರೆಗೆ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ನವೋದ್ಯಮಗಳು ದೇಶದ ಬೆನ್ನೆಲುಬಾಗುತ್ತಿವೆ, ಜ.16ರಂದು ರಾಷ್ಟ್ರೀಯ ಸ್ಟಾರ್ಟ್​ ಅಪ್​ ದಿನ ಆಚರಣೆ: ಪ್ರಧಾನಿ ಮೋದಿ
ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:Jan 15, 2022 | 5:41 PM

ಆಜಾದಿ ಕಾ ಅಮೃತ್​ ಮಹೋತ್ಸವ್​ ಆಚರಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ 150ಕ್ಕೂ ಹೆಚ್ಚು ನವೋದ್ಯಮಿಗಳ (Start Ups)ಜತೆ ಇಂದು ಸಂವಾದ ನಡೆಸಿದರು. ಇದೇ ವೇಳೆ, ಜನವರಿ 16ನ್ನು ಇನ್ನುಮುಂದೆ ರಾಷ್ಟ್ರೀಯ ಸ್ಟಾರ್ಟ್​ ಅಪ್​ ದಿನವನ್ನಾಗಿ ಆಚರಿಸುವುದಾಗಿ ಘೋಷಣೆ ಮಾಡಿದರು.  ಇದೇ ವೇಳೆ ಮಾತನಾಡಿದ ಅವರು, ಈಗ ನವೋದ್ಯಮಗಳು ಹೊಸ ಭಾರತದ ಬೆನ್ನೆಲುಬಾಗಿ ರೂಪುಗೊಳ್ಳುತ್ತಿವೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 100ವರ್ಷಗಳಾಗುವ ಹೊತ್ತಿಗೆ ಈ ಸ್ಟಾರ್ಟ್ ಅಪ್​ಗಳೂ ಕೂಡ ಇನ್ನಷ್ಟು ಮಹತ್ವದ ಪಾತ್ರ ವಹಿಸಲಿವೆ. ಇಲ್ಲಿನ ನವೋದ್ಯಮಿಗಳು ನಮ್ಮ ದೇಶದ ಗೌರವ, ಹೆಮ್ಮೆಯನ್ನು ಜಾಗತಿಕವಾಗಿ ಹೆಚ್ಚಿಸಿವೆ ಎಂದು ಹೇಳಿದರು. 

ಈ ದಶಕವನ್ನು ಭಾರತದ ಟೆಚಾಡೆ ಎಂದು ಕರೆಯಲಾಗುವುದು. ನಾವೀನ್ಯತೆ, ಉದ್ಯಮಶೀಲತೆಯನ್ನು ಅಭಿವೃದ್ಧಿಗೊಳಿಸುವುದನ್ನು ಒಳಗೊಂಡಿದೆ. ಈಗ ಭಾರತದ ಸ್ಟಾರ್ಟ್​ ಅಪ್​ಗಳು 55 ವಿವಿಧ ಉದ್ಯಮಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. 5 ವರ್ಷಗಳ ಹಿಂದೆ ನಮ್ಮಲ್ಲಿ 500 ಸ್ಟಾರ್ಟ್​ ಅಪ್​ಗಳೂ ಕೂಡ ಇರಲಿಲ್ಲ. ಆದರೆ ಆ ಸಂಖ್ಯೆಯೀಗ 60 ಸಾವಿರ ದಾಟಿದೆ ಎಂದು ಪ್ರಧಾನಮಂತ್ರಿ ಮೋದಿ ತಿಳಿಸಿದರು. ಹಾಗೇ, ಯುವಕರ ಸೃಜನಾತ್ಮಕತೆಯ ಮೇಲೆ ಭಾರತಕ್ಕೆ ನಂಬಿಕೆಯಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಸ್ಟಾರ್ಟ್​ ಅಪ್​ ಇಂಡಿಯಾ ಉಪಕ್ರಮದ 6ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ ಜನವರಿ 10 ರಿಂದ 16ರವರೆಗೆ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಅದರ ಭಾಗವಾಗಿ ಇಂದು ಪಿಎಂ ಮೋದಿ 150 ಸ್ಟಾರ್ಟ್​-ಅಪ್​ಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ.  ಸ್ಟಾರ್ಟ್ ಅಪ್​​ಗಳು ರಾಷ್ಟ್ರದ ಬೆಳವಣಿಗೆಗೆ ಗಮನಾರ್ಹವಾಗಿ ಕೊಡುಗೆಗಳನ್ನು ನೀಡುತ್ತವೆ ಎಂದು ಪ್ರಧಾನಿ ಮೋದಿ ದೃಢವಾಗಿ ನಂಬಿಕೆ ಹೊಂದಿದ್ದಾರೆ.  ಭಾರತದಲ್ಲಿ 2016ರಲ್ಲಿ ಸ್ಟಾರ್ಟ್ ಅಪ್​ ಇಂಡಿಯಾ ಉಪಕ್ರಮ ಶುರು ಮಾಡಲಾಯಿತು. ಅವುಗಳ ಬೆಳವಣಿಗೆ, ಉತ್ತೇಜನಕ್ಕೆ ಅವಕಾಶ ಕಲ್ಪಿಸಿಕೊಡಲು ಸರ್ಕಾರ ಕೆಲಸ ಮಾಡುತ್ತಿದೆ ಎಂದೂ ಪಿಎಂಒ ಮಾಹಿತಿ ನೀಡಿದೆ.

ಇದನ್ನೂ ಓದಿ: ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ಸಹ ಪ್ರಯಾಣಿಕರ ಸಹಕಾರಕ್ಕೆ ಭಾರೀ ಮೆಚ್ಚುಗೆ

Published On - 5:39 pm, Sat, 15 January 22

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ