AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೋದ್ಯಮಗಳು ದೇಶದ ಬೆನ್ನೆಲುಬಾಗುತ್ತಿವೆ, ಜ.16ರಂದು ರಾಷ್ಟ್ರೀಯ ಸ್ಟಾರ್ಟ್​ ಅಪ್​ ದಿನ ಆಚರಣೆ: ಪ್ರಧಾನಿ ಮೋದಿ

ಸ್ಟಾರ್ಟ್​ ಅಪ್​ ಇಂಡಿಯಾ ಉಪಕ್ರಮದ 6ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ ಜನವರಿ 10 ರಿಂದ 16ರವರೆಗೆ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ನವೋದ್ಯಮಗಳು ದೇಶದ ಬೆನ್ನೆಲುಬಾಗುತ್ತಿವೆ, ಜ.16ರಂದು ರಾಷ್ಟ್ರೀಯ ಸ್ಟಾರ್ಟ್​ ಅಪ್​ ದಿನ ಆಚರಣೆ: ಪ್ರಧಾನಿ ಮೋದಿ
ಪ್ರಧಾನಿ ಮೋದಿ
TV9 Web
| Edited By: |

Updated on:Jan 15, 2022 | 5:41 PM

Share

ಆಜಾದಿ ಕಾ ಅಮೃತ್​ ಮಹೋತ್ಸವ್​ ಆಚರಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ 150ಕ್ಕೂ ಹೆಚ್ಚು ನವೋದ್ಯಮಿಗಳ (Start Ups)ಜತೆ ಇಂದು ಸಂವಾದ ನಡೆಸಿದರು. ಇದೇ ವೇಳೆ, ಜನವರಿ 16ನ್ನು ಇನ್ನುಮುಂದೆ ರಾಷ್ಟ್ರೀಯ ಸ್ಟಾರ್ಟ್​ ಅಪ್​ ದಿನವನ್ನಾಗಿ ಆಚರಿಸುವುದಾಗಿ ಘೋಷಣೆ ಮಾಡಿದರು.  ಇದೇ ವೇಳೆ ಮಾತನಾಡಿದ ಅವರು, ಈಗ ನವೋದ್ಯಮಗಳು ಹೊಸ ಭಾರತದ ಬೆನ್ನೆಲುಬಾಗಿ ರೂಪುಗೊಳ್ಳುತ್ತಿವೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 100ವರ್ಷಗಳಾಗುವ ಹೊತ್ತಿಗೆ ಈ ಸ್ಟಾರ್ಟ್ ಅಪ್​ಗಳೂ ಕೂಡ ಇನ್ನಷ್ಟು ಮಹತ್ವದ ಪಾತ್ರ ವಹಿಸಲಿವೆ. ಇಲ್ಲಿನ ನವೋದ್ಯಮಿಗಳು ನಮ್ಮ ದೇಶದ ಗೌರವ, ಹೆಮ್ಮೆಯನ್ನು ಜಾಗತಿಕವಾಗಿ ಹೆಚ್ಚಿಸಿವೆ ಎಂದು ಹೇಳಿದರು. 

ಈ ದಶಕವನ್ನು ಭಾರತದ ಟೆಚಾಡೆ ಎಂದು ಕರೆಯಲಾಗುವುದು. ನಾವೀನ್ಯತೆ, ಉದ್ಯಮಶೀಲತೆಯನ್ನು ಅಭಿವೃದ್ಧಿಗೊಳಿಸುವುದನ್ನು ಒಳಗೊಂಡಿದೆ. ಈಗ ಭಾರತದ ಸ್ಟಾರ್ಟ್​ ಅಪ್​ಗಳು 55 ವಿವಿಧ ಉದ್ಯಮಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. 5 ವರ್ಷಗಳ ಹಿಂದೆ ನಮ್ಮಲ್ಲಿ 500 ಸ್ಟಾರ್ಟ್​ ಅಪ್​ಗಳೂ ಕೂಡ ಇರಲಿಲ್ಲ. ಆದರೆ ಆ ಸಂಖ್ಯೆಯೀಗ 60 ಸಾವಿರ ದಾಟಿದೆ ಎಂದು ಪ್ರಧಾನಮಂತ್ರಿ ಮೋದಿ ತಿಳಿಸಿದರು. ಹಾಗೇ, ಯುವಕರ ಸೃಜನಾತ್ಮಕತೆಯ ಮೇಲೆ ಭಾರತಕ್ಕೆ ನಂಬಿಕೆಯಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಸ್ಟಾರ್ಟ್​ ಅಪ್​ ಇಂಡಿಯಾ ಉಪಕ್ರಮದ 6ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ ಜನವರಿ 10 ರಿಂದ 16ರವರೆಗೆ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಅದರ ಭಾಗವಾಗಿ ಇಂದು ಪಿಎಂ ಮೋದಿ 150 ಸ್ಟಾರ್ಟ್​-ಅಪ್​ಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ.  ಸ್ಟಾರ್ಟ್ ಅಪ್​​ಗಳು ರಾಷ್ಟ್ರದ ಬೆಳವಣಿಗೆಗೆ ಗಮನಾರ್ಹವಾಗಿ ಕೊಡುಗೆಗಳನ್ನು ನೀಡುತ್ತವೆ ಎಂದು ಪ್ರಧಾನಿ ಮೋದಿ ದೃಢವಾಗಿ ನಂಬಿಕೆ ಹೊಂದಿದ್ದಾರೆ.  ಭಾರತದಲ್ಲಿ 2016ರಲ್ಲಿ ಸ್ಟಾರ್ಟ್ ಅಪ್​ ಇಂಡಿಯಾ ಉಪಕ್ರಮ ಶುರು ಮಾಡಲಾಯಿತು. ಅವುಗಳ ಬೆಳವಣಿಗೆ, ಉತ್ತೇಜನಕ್ಕೆ ಅವಕಾಶ ಕಲ್ಪಿಸಿಕೊಡಲು ಸರ್ಕಾರ ಕೆಲಸ ಮಾಡುತ್ತಿದೆ ಎಂದೂ ಪಿಎಂಒ ಮಾಹಿತಿ ನೀಡಿದೆ.

ಇದನ್ನೂ ಓದಿ: ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ಸಹ ಪ್ರಯಾಣಿಕರ ಸಹಕಾರಕ್ಕೆ ಭಾರೀ ಮೆಚ್ಚುಗೆ

Published On - 5:39 pm, Sat, 15 January 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ