AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Unity Day 2021: ರಾಷ್ಟ್ರೀಯ ಏಕತಾ ದಿವಸ್​​ ಆಚರಣೆ; ಸರ್ದಾರ್​ ವಲ್ಲಭಭಾಯಿ ಪಟೇಲ್​ ಪ್ರತಿಮೆಗೆ ಅಮಿತ್​ ಶಾರಿಂದ ಮಾಲಾರ್ಪಣೆ

ಸರ್ದಾರ್ ವಲ್ಲಭಭಾಯಿ ಪಟೇಲ್​ ಜನ್ಮದಿನ ಕಾರ್ಯಕ್ರಮವನ್ನು ಇಂದು ಗುಜರಾತ್​ನ ಕೇವಾಡಿಯಾದಲ್ಲಿರುವ 182 ಮೀಟರ್​ ಎತ್ತರದ ಏಕತಾ ಪ್ರತಿಮೆ ಸಮೀಪವೇ ನಡೆಸಲಾಗುವುದು. ಈ ಮೊದಲು ಪ್ರಧಾನಿ ನರೇಂದ್ರ ಮೋದಿಯವರೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಗುಜರಾತ್​ ಮುಖ್ಯಮಂತ್ರಿ ಕಚೇರಿ ತಿಳಿಸಿತ್ತು.

National Unity Day 2021: ರಾಷ್ಟ್ರೀಯ ಏಕತಾ ದಿವಸ್​​ ಆಚರಣೆ; ಸರ್ದಾರ್​ ವಲ್ಲಭಭಾಯಿ ಪಟೇಲ್​ ಪ್ರತಿಮೆಗೆ ಅಮಿತ್​ ಶಾರಿಂದ ಮಾಲಾರ್ಪಣೆ
ಕೇವಾಡಿಯಾದಲ್ಲಿ ರಾಷ್ಟ್ರೀಯ ಏಕತಾ ದಿನದ ಸಂಭ್ರಮ
Follow us
TV9 Web
| Updated By: Lakshmi Hegde

Updated on: Oct 31, 2021 | 12:39 PM

ಇಂದು ಸರ್ದಾರ್​ ವಲ್ಲಭಭಾಯಿ ಪಟೇಲ್​​ ಅವರ 146ನೇ ಜನ್ಮಜಯಂತಿ. ದೇಶಾದ್ಯಂತ ರಾಷ್ಟ್ರೀಯ ಏಕತಾ ದಿನ (National Unity Day)  ಆಚರಿಸಲಾಗುತ್ತಿದೆ. ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿರುವ ಪಟೇಲ್​ ಜಿ ಜನ್ಮದಿನ (ಅಕ್ಟೋಬರ್​ 31)ವನ್ನು 2014ರಿಂದಲೂ ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ತಿಂಗಳ ಕಾರ್ಯಕ್ರಮ ಮನ್​ ಕೀ ಬಾತ್​​ನಲ್ಲಿ ಕೂಡ ರಾಷ್ಟ್ರೀಯ ಏಕತಾ ದಿನ ಆಚರಣೆಯನ್ನು ನೆನಪಿಸಿದ್ದರು. ಸದ್ಯ ರೋಮ್​ ಪ್ರವಾಸದಲ್ಲಿರುವ ಅವರು, ಬೆಳಗ್ಗೆ ಟ್ವೀಟ್​ ಮಾಡಿ ಸರ್ದಾರ್​ ವಲ್ಲಭಭಾಯಿ ಅವರ ಜೀವನದ ಬಗ್ಗೆ ತಾವು ಮಾತನಾಡಿದ ವಿಡಿಯೋವೊಂದನ್ನು ಶೇರ್ ಮಾಡಿಕೊಂಡು ಗೌರವ ಸಲ್ಲಿಸಿದ್ದಾರೆ. 

ಪ್ರಧಾನಮಂತ್ರಿ ನರೇಂದ್ರ ಮೋದಿ ಅನುಪಸ್ಥಿತಿಯಲ್ಲಿ ಇಂದು ಗೃಹ ಸಚಿವ ಅಮಿತ್​ ಶಾ ಇಂದು ಗುಜರಾತ್​​ನ ಕೇವಾಡಿಯಾದಲ್ಲಿರುವ ವಲ್ಲಭಭಾಯಿಯವರ 182 ಮೀಟರ್​ ಎತ್ತರದ ಏಕತಾ ಮೂರ್ತಿಯ ಬಳಿ ತೆರಳಿ ಗೌರವ ಸಲ್ಲಿಸಿದ್ದಾರೆ. ರಾಷ್ಟ್ರೀಯ ಏಕತಾ ದಿನ ಸಮಾರಂಭ ಆಚರಣೆಗೆ ಅಮಿತ್​ ಶಾ ಇಂದು ಮುಖ್ಯ ಅತಿಥಿಯಾಗಿದ್ದಾರೆ. ಸರ್ದಾರ್​ ವಲ್ಲಭಭಾಯಿ ಅವರ ಬಗ್ಗೆ ಇಂದು ವಿಡಿಯೋ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ನಮ್ಮ ರಾಷ್ಟ್ರದ ಹಿರೋ ಸರ್ದಾರ್​ ವಲ್ಲಭಭಾಯಿ ಪಟೇಲ್​​ರಿಗೆ ಇಂದು ಇಡೀ ರಾಷ್ಟ್ರ ಗೌರವ ಸಲ್ಲಿಸುತ್ತಿದೆ. ಅವರು ತಮ್ಮ ಜೀವನದ ಪ್ರತಿ ಕ್ಷಣವನ್ನೂ ಏಕ್​ ಭಾರತ್​, ಶ್ರೇಷ್ಠ ಭಾರತಕ್ಕಾಗಿ ಮುಡಿಪಾಗಿಟ್ಟಿದದರು. ಇವತ್ತಿಗೂ ಕೋಟ್ಯಂತರ ಭಾರತೀಯರ ಹೃದಯದಲ್ಲಿ ಅವರಿಗೆ ವಿಶೇಷ ಸ್ಥಾನವಿದೆ ಎಂದು ಹೇಳಿದ್ದಾರೆ. ಹಾಗೇ ಇಂದು ರಾಷ್ಟ್ರಪತಿ ರಾಮನಾಥ ಕೋವಿಂದ್​,  ಸಚಿವರಾದ ನಿತಿನ್​ ಗಡ್ಕರಿ, ರಾಜನಾಥ್​ ಸಿಂಗ್​ ಮತ್ತಿತರ ಗಣ್ಯರು ಸರ್ದಾರ್​ ವಲ್ಲಭಭಾಯಿ ಅವರಿಗೆ ಟ್ವೀಟ್​ ಮೂಲಕ ಗೌರವ ಸಲ್ಲಿಸಿದ್ದಾರೆ.

ಏಕತಾ ಮೂರ್ತಿ ಸಮೀಪವೇ ಕಾರ್ಯಕ್ರಮ ಸರ್ದಾರ್ ವಲ್ಲಭಭಾಯಿ ಪಟೇಲ್​ ಜನ್ಮದಿನ ಕಾರ್ಯಕ್ರಮವನ್ನು ಇಂದು ಗುಜರಾತ್​ನ ಕೇವಾಡಿಯಾದಲ್ಲಿರುವ 182 ಮೀಟರ್​ ಎತ್ತರದ ಏಕತಾ ಪ್ರತಿಮೆ ಸಮೀಪವೇ ನಡೆಸಲಾಗುವುದು. ಈ ಮೊದಲು ಪ್ರಧಾನಿ ನರೇಂದ್ರ ಮೋದಿಯವರೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಗುಜರಾತ್​ ಮುಖ್ಯಮಂತ್ರಿ ಕಚೇರಿ ತಿಳಿಸಿತ್ತು. ಆದರೆ ಅವರು ರೋಮ್​ನಲ್ಲಿ ಇರುವ ಕಾರಣ ಅಮಿತ್​ ಶಾ ಆಗಮಿಸಿದ್ದಾರೆ.  ಇಂದು ಅಮಿತ್​ ಶಾ ಅವರು ಮೊದಲು ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ. ಅದರ ಹೊರತಾಗಿ ಐಟಿಬಿಪಿ, ಎಸ್​ಎಸ್​ಬಿ, ಸಿಐಎಸ್​ಎಫ್​​, ಸಿಆರ್​ಪಿಎಫ್​​ ಮತ್ತು ಬಿಎಸ್​ಎಫ್​​ನ 75 ಸೈಕ್ಲಿಸ್ಟ್​ಗಳು, ತ್ರಿಪುರ, ತಮಿಳುನಾಡು, ಜಮ್ಮು-ಕಾಶ್ಮೀರ, ಗುಜರಾತ್​ ಪೊಲೀಸ್​ ಪಡೆಗಳ 101 ಮೋಟರ್​ಸೈಕಲಿಸ್ಟ್​ಗಳು ಪರೇಡ್​​ನಲ್ಲಿ ಭಾಗವಹಿಸಲಿದ್ದಾರೆ.

2014ರಿಂದಲೂ ಆಚರಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2014ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರತಿವರ್ಷ ಅಕ್ಟೋಬರ್​ 31ರಂದು ಸರ್ದಾರ್​ ವಲ್ಲಭಭಾಯಿ ಪಟೇಲ್​​ ಅವರ ಜನ್ಮದಿನವನ್ನು ಏಕತಾ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಈ ಸಮಾರಂಭದ ಭಾಗವಾಗಿ ಪ್ರತಿವರ್ಷ ರಾಷ್ಟ್ರಮಟ್ಟದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ದೇಶಾದ್ಯಂತ ಪೊಲೀಸ್ ಸಿಬ್ಬಂದಿ ಏಕತಾ ಪರೇಡ್​ ನಡೆಸುತ್ತಾರೆ. ಹೀಗೆ ವಿವಿಧ ರಾಜ್ಯಗಳ ಪೊಲೀಸರು ಸೈಕ್ಲಿಂಗ್​, ಮೋಟರ್​ ಸೈಕ್ಲಿಂಗ್​​ಗಳನ್ನು ನಡೆಸಿ, ಏಕತಾ ದಿನದಂದು ಕೇವಾಡಿಯಾಕ್ಕೆ ಆಗಮಿಸುತ್ತಾರೆ.

ಇದನ್ನೂ ಓದಿ: ಮಂತ್ರಾಲಯದಲ್ಲಿ ಪುನೀತ್ ಬಂದಾಗ ತೊಟ್ಟಿಲು ಅಲುಗಾಡಿದ ವಿಡಿಯೋ ವೈರಲ್; ಪೀಠಾಧಿಪತಿಗಳಿಂದ ಸ್ಪಷ್ಟನೆ

Viral Video: ಅಬ್ಬಬ್ಬಾ! ದೈತ್ಯ ಹೆಬ್ಬಾವಿನ ಎದುರು ಮಲಗಿರುವ ವ್ಯಕ್ತಿ ನೋಡಿ; ವಿಡಿಯೊ ವೈರಲ್​

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ