Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡಾಯ ನಂತರ 3 ನಾಯಕರನ್ನು ಉಚ್ಚಾಟಿಸಿದ ಎನ್‌ಸಿಪಿ; ಸಂಸದ ಸ್ಥಾನದಿಂದ ಪ್ರಫುಲ್ ಪಟೇಲ್​​ನ್ನು ಅನರ್ಹಗೊಳಿಸಲು ಒತ್ತಾಯ

ಮುಂಬೈ ವಿಭಾಗೀಯ ಎನ್‌ಸಿಪಿ ಮುಖ್ಯಸ್ಥ ನರೇಂದ್ರ ರಾಥೋಡ್, ಅಕೋಲಾ ನಗರ ಜಿಲ್ಲಾ ಮುಖ್ಯಸ್ಥ ವಿಜಯ್ ದೇಶಮುಖ್ ಮತ್ತು ರಾಜ್ಯ ಸಚಿವ ಶಿವಾಜಿರಾವ್ ಗರ್ಜೆ ಅವರನ್ನು ಉಚ್ಚಾಟಿಸಲಾಗಿದ್ದು, ಮೂವರೂ ಅಜಿತ್ ಪವಾರ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಬಂಡಾಯ ನಂತರ 3 ನಾಯಕರನ್ನು ಉಚ್ಚಾಟಿಸಿದ ಎನ್‌ಸಿಪಿ; ಸಂಸದ ಸ್ಥಾನದಿಂದ ಪ್ರಫುಲ್ ಪಟೇಲ್​​ನ್ನು ಅನರ್ಹಗೊಳಿಸಲು ಒತ್ತಾಯ
ಶರದ್ ಪವಾರ್
Follow us
ರಶ್ಮಿ ಕಲ್ಲಕಟ್ಟ
|

Updated on: Jul 03, 2023 | 4:49 PM

ಮುಂಬೈ: ಮಹಾರಾಷ್ಟ್ರದ (Maharashtra) ಉಪಮುಖ್ಯಮಂತ್ರಿಯಾಗಿ ತಮ್ಮಸೋದರಳಿಯ ಅಜಿತ್ ಪವಾರ್ (Ajit Pawar) ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಮುಖ್ಯಸ್ಥ ಶರದ್ ಪವಾರ್ ಪಕ್ಷದ ಮೂವರು ನಾಯಕರನ್ನು ಉಚ್ಚಾಟಿಸಿದ್ದಾರೆ. ಅದೇ ವೇಳೆ ಪಕ್ಷಾಂತರಕ್ಕಾಗಿ ರಹಸ್ಯವಾಗಿ ಕೆಲಸ ಮಾಡಿ ಆರೋಪದಲ್ಲಿ ಸಂಸದರಾದ ಪ್ರಫುಲ್ ಪಟೇಲ್ ಮತ್ತು ಸುನೀಲ್ ತಟ್ಕರೆ ಅವರನ್ನು ಅನರ್ಹಗೊಳಿಸಬೇಕೆಂದು ಪಕ್ಷದ ಲೋಕಸಭಾ ಸಂಸದೆ ಸುಪ್ರಿಯಾ ಸುಳೆ ಒತ್ತಾಯಿಸಿದ್ದಾರೆ. ಮೂವರು ನಾಯಕರ ವಿರುದ್ಧ ಎನ್‌ಸಿಪಿ ಕ್ರಮ ಮತ್ತು ಇಬ್ಬರು ಸಂಸದರನ್ನು ಅನರ್ಹಗೊಳಿಸುವ ಕರೆ ಬಂಡಾಯಕ್ಕೆ ನೇತೃತ್ವ ವಹಿಸಿದ ಅಜಿತ್ ಪವಾರ್ ಅವರನ್ನು ಬೆಂಬಲಿಸಿದವರಿಗೆ ನೀಡುವ ಶಿಕ್ಷೆಯಾಗಿದೆ.

ಮುಂಬೈ ವಿಭಾಗೀಯ ಎನ್‌ಸಿಪಿ ಮುಖ್ಯಸ್ಥ ನರೇಂದ್ರ ರಾಥೋಡ್, ಅಕೋಲಾ ನಗರ ಜಿಲ್ಲಾ ಮುಖ್ಯಸ್ಥ ವಿಜಯ್ ದೇಶಮುಖ್ ಮತ್ತು ರಾಜ್ಯ ಸಚಿವ ಶಿವಾಜಿರಾವ್ ಗರ್ಜೆ ಅವರನ್ನು ಉಚ್ಚಾಟಿಸಲಾಗಿದ್ದು, ಮೂವರೂ ಅಜಿತ್ ಪವಾರ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಎನ್‌ಸಿಪಿಯ ಇಬ್ಬರು ಸಂಸದರಾದ ಪ್ರಫುಲ್ ಪಟೇಲ್ ಮತ್ತು ಸುನೀಲ್ ತಟ್ಕರೆ ಅವರು ನಮ್ಮ ಸಂವಿಧಾನ, ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಾರೆ. 9 ಶಾಸಕರ ಪ್ರಮಾಣ ವಚನ ಸಮಾರಂಭವನ್ನು ಸುಗಮಗೊಳಿಸುವ ಮತ್ತು ಮುನ್ನಡೆಸುವ ಮೂಲಕ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ತಿಳಿಸಲು ನಾನು ನಿಮಗೆ ಅತ್ಯಂತ ತುರ್ತಾಗಿ ಪತ್ರ ಬರೆಯುತ್ತಿದ್ದೇನೆ ಎಂಜು ಸುಳೆ ಅವರು ಶರದ್ ಪವಾರ್ ಅವರಿಗೆ ಪತ್ರ ಬರೆದಿದ್ದಾರೆ.

ಪಕ್ಷದ ಅಧ್ಯಕ್ಷರ ತಿಳುವಳಿಕೆ ಅಥವಾ ಒಪ್ಪಿಗೆಯಿಲ್ಲದೆ ಈ ಪಕ್ಷಾಂತರಗಳನ್ನು ರಹಸ್ಯವಾಗಿ ನಡೆಸಲಾಗಿದೆ, ಇದಕ್ಕಾಗಿ ಅನರ್ಹ ಮಾಡಬೇಕು. ಇಲ್ಲಿ ಹೇಳಲಾದ ಸಂಸದರು ಇನ್ನು ಮುಂದೆ NCP ಯ ಗುರಿಗಳು ಮತ್ತು ಸಿದ್ಧಾಂತದೊಂದಿಗೆ ಹೋಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಸುಳೆ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಿವಸೇನಾ ಮೈತ್ರಿಕೂಟ ಸೇರಿದ ಅಜಿತ್ ಪವಾರ್ ತಂಡದಲ್ಲಿ ಭ್ರಷ್ಟಾಚಾರ ಆರೋಪ ಹೊತ್ತಿರುವವರು ಎಷ್ಟು ಮಂದಿ?

ಎನ್‌ಸಿಪಿಯ ಶಿಸ್ತು ಸಮಿತಿಯು ಅಜಿತ್ ಪವಾರ್ ಆಡಳಿತಾರೂಢ ಶಿವಸೇನೆ-ಬಿಜೆಪಿ ಮೈತ್ರಿಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳಲು ಅಜಿತ್ ಪವಾರ್ ಅವರನ್ನು ಬೆಂಬಲಿಸಿದ 9 ಶಾಸಕರನ್ನು ಅನರ್ಹಗೊಳಿಸುವಂತೆ ಕರೆ ನೀಡಿದೆ. 9 ಶಾಸಕರನ್ನು ತಕ್ಷಣ ಅನರ್ಹಗೊಳಿಸಬೇಕು. ಅವರನ್ನು ಸದಸ್ಯರಾಗಿ ಮುಂದುವರಿಯಲು ಅವಕಾಶ ನೀಡಿದರೆ, ಅವರು ಪಕ್ಷದ ಹಿತಾಸಕ್ತಿಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸುವುದನ್ನು ಮುಂದುವರೆಸುವ ನಿಜವಾದ ಸಾಧ್ಯತೆಯಿದೆ ಎಂದು ಎನ್‌ಸಿಪಿಯ ಶಿಸ್ತು ಸಮಿತಿ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್