AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಾತ್ಮಕ ಹೇಳಿಕೆ ನೀಡಿದ ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನ ಸಿಗಬೇಕೆಂದರೆ "500 ಕೋಟಿ" ರೂ. ಕೊಡಬೇಕು ಎಂದು ಹೇಳಿಕೆ ನೀಡಿದ ಬಳಿಕ ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಅವರು ಸ್ಪಷ್ಟೀಕರಣ ನೀಡಿದ್ದರೂ ಅದು ಕಾಂಗ್ರೆಸ್​​ಗೆ ಸಮಾಧಾನ ತರಲಿಲ್ಲ. 

ವಿವಾದಾತ್ಮಕ ಹೇಳಿಕೆ ನೀಡಿದ ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
Navjot Kaur
ಸುಷ್ಮಾ ಚಕ್ರೆ
|

Updated on: Dec 08, 2025 | 8:13 PM

Share

ಚಂಡೀಗಢ, ಡಿಸೆಂಬರ್ 8: ಕ್ರಿಕೆಟಿಗ-ರಾಜಕಾರಣಿ, ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು (Navjot Singh Sidhu) ಅವರ ಪತ್ನಿ ನವಜೋತ್ ಕೌರ್ ಸಿಧು ಸಿಎಂ ಸ್ಥಾನಕ್ಕೆ “500 ಕೋಟಿ ರೂ.ಗಳ ಸೂಟ್‌ಕೇಸ್” ನೀಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್ ಹೈಕಮಾಂಡ್​​ಗೆ ಮುಜುಗರ ತಂದಿದ್ದರು. ಅವರ ವಿವಾದಾತ್ಮಕ ಹೇಳಿಕೆಯ ಬಳಿಕ ಕಾಂಗ್ರೆಸ್ ಪಕ್ಷ ಅವರನ್ನು ಅಮಾನತುಗೊಳಿಸಿದೆ.

“500 ಕೋಟಿ ರೂ. ಸೂಟ್‌ಕೇಸ್ ನೀಡುವವರು ಮುಖ್ಯಮಂತ್ರಿಯಾಗುತ್ತಾರೆ” ಎಂಬ ಅವರ ಹೇಳಿಕೆಯಿಂದ ನವಜೋತ್ ಕೌರ್ ಭಾರಿ ವಿವಾದಕ್ಕೀಡಾಗಿದ್ದರು. ಇದರಿಂದ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ಆರೋಪಗಳನ್ನು ಮಾಡಿತ್ತು. ಆಮ್ ಆದ್ಮಿ ಪಕ್ಷ ಕೂಡ ಕಾಂಗ್ರೆಸ್ ವಿರುದ್ಧ ಈ ಹೇಳಿಕೆಯನ್ನು ದಾಳವಾಗಿಸಿಕೊಂಡಿತ್ತು.

ಇದನ್ನೂ ಓದಿ: ವಿವಾದಕ್ಕೀಡಾದ ನವಜೋತ್ ಸಿಂಗ್ ಸಿಧು ಪತ್ನಿಯ ಸಿಎಂ ಸ್ಥಾನಕ್ಕೆ 500 ಕೋಟಿ ರೂ. ಹೇಳಿಕೆ; ಬಿಜೆಪಿ ಆಕ್ರೋಶ

ತನ್ನ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಸ್ಪಷ್ಟನೆ ನೀಡಿದ್ದ ಕಾಂಗ್ರೆಸ್ ನಾಯಕಿಯೂ ಆಗಿರುವ ನವಜೋತ್ ಕೌರ್, “ನಮ್ಮ ಕಾಂಗ್ರೆಸ್ ಪಕ್ಷವು ನಮ್ಮಿಂದ ಎಂದಿಗೂ ಏನನ್ನೂ ಬೇಡಿಕೆ ಇಟ್ಟಿಲ್ಲ. ಬೇರೆ ಪಕ್ಷದಿಂದ ನಮಗೆ ಸಿಎಂ ಸ್ಥಾನದ ಆಮಿಷವಿದೆಯೇ ಎಂದು ಕೇಳಿದಾಗ ನಾನು ಸಿಎಂ ಹುದ್ದೆಗೆ ನೀಡಲು ನಮ್ಮಲ್ಲಿ 500 ಕೋಟಿ ರೂ. ಹಣವಿಲ್ಲ ಎಂದು ಹೇಳಿದ್ದೆ. ನಮ್ಮ ಪಕ್ಷದ ಬಗ್ಗೆ ನಾನು ಮಾತಾಡಿಲ್ಲ, ಬೇರೆ ಪಕ್ಷಕ್ಕೆ ಆ ಮಾತು ಹೇಳಿದ್ದೆ” ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ವಂದೇ ಮಾತರಂ ಕುರಿತ ನೆಹರು ಪತ್ರ ಓದಿದ ಪ್ರಿಯಾಂಕಾ ಗಾಂಧಿ, ಬಿಜೆಪಿಗೆ ತರಾಟೆ

ಸಾಮಾಜಿಕ ಮಾಧ್ಯಮದಲ್ಲಿ ಅವರು ಸ್ಪಷ್ಟೀಕರಣ ನೀಡಿದ್ದರೂ ಅದು ಕಾಂಗ್ರೆಸ್​​ಗೆ ಸಮಾಧಾನ ತರಲಿಲ್ಲ. ಅವರ ಹೇಳಿಕೆಯಿಂದ ಕಾಂಗ್ರೆಸ್ ಹೈಕಮಾಂಡ್​ ಮುಜುಗರಕ್ಕೀಡಾಗಿದ್ದರಿಂದ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ