AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಾತ್ಮಕ ಹೇಳಿಕೆ ನೀಡಿದ ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನ ಸಿಗಬೇಕೆಂದರೆ "500 ಕೋಟಿ" ರೂ. ಕೊಡಬೇಕು ಎಂದು ಹೇಳಿಕೆ ನೀಡಿದ ಬಳಿಕ ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಅವರು ಸ್ಪಷ್ಟೀಕರಣ ನೀಡಿದ್ದರೂ ಅದು ಕಾಂಗ್ರೆಸ್​​ಗೆ ಸಮಾಧಾನ ತರಲಿಲ್ಲ. 

ವಿವಾದಾತ್ಮಕ ಹೇಳಿಕೆ ನೀಡಿದ ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
Navjot Kaur
ಸುಷ್ಮಾ ಚಕ್ರೆ
|

Updated on: Dec 08, 2025 | 8:13 PM

Share

ಚಂಡೀಗಢ, ಡಿಸೆಂಬರ್ 8: ಕ್ರಿಕೆಟಿಗ-ರಾಜಕಾರಣಿ, ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು (Navjot Singh Sidhu) ಅವರ ಪತ್ನಿ ನವಜೋತ್ ಕೌರ್ ಸಿಧು ಸಿಎಂ ಸ್ಥಾನಕ್ಕೆ “500 ಕೋಟಿ ರೂ.ಗಳ ಸೂಟ್‌ಕೇಸ್” ನೀಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್ ಹೈಕಮಾಂಡ್​​ಗೆ ಮುಜುಗರ ತಂದಿದ್ದರು. ಅವರ ವಿವಾದಾತ್ಮಕ ಹೇಳಿಕೆಯ ಬಳಿಕ ಕಾಂಗ್ರೆಸ್ ಪಕ್ಷ ಅವರನ್ನು ಅಮಾನತುಗೊಳಿಸಿದೆ.

“500 ಕೋಟಿ ರೂ. ಸೂಟ್‌ಕೇಸ್ ನೀಡುವವರು ಮುಖ್ಯಮಂತ್ರಿಯಾಗುತ್ತಾರೆ” ಎಂಬ ಅವರ ಹೇಳಿಕೆಯಿಂದ ನವಜೋತ್ ಕೌರ್ ಭಾರಿ ವಿವಾದಕ್ಕೀಡಾಗಿದ್ದರು. ಇದರಿಂದ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ಆರೋಪಗಳನ್ನು ಮಾಡಿತ್ತು. ಆಮ್ ಆದ್ಮಿ ಪಕ್ಷ ಕೂಡ ಕಾಂಗ್ರೆಸ್ ವಿರುದ್ಧ ಈ ಹೇಳಿಕೆಯನ್ನು ದಾಳವಾಗಿಸಿಕೊಂಡಿತ್ತು.

ಇದನ್ನೂ ಓದಿ: ವಿವಾದಕ್ಕೀಡಾದ ನವಜೋತ್ ಸಿಂಗ್ ಸಿಧು ಪತ್ನಿಯ ಸಿಎಂ ಸ್ಥಾನಕ್ಕೆ 500 ಕೋಟಿ ರೂ. ಹೇಳಿಕೆ; ಬಿಜೆಪಿ ಆಕ್ರೋಶ

ತನ್ನ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಸ್ಪಷ್ಟನೆ ನೀಡಿದ್ದ ಕಾಂಗ್ರೆಸ್ ನಾಯಕಿಯೂ ಆಗಿರುವ ನವಜೋತ್ ಕೌರ್, “ನಮ್ಮ ಕಾಂಗ್ರೆಸ್ ಪಕ್ಷವು ನಮ್ಮಿಂದ ಎಂದಿಗೂ ಏನನ್ನೂ ಬೇಡಿಕೆ ಇಟ್ಟಿಲ್ಲ. ಬೇರೆ ಪಕ್ಷದಿಂದ ನಮಗೆ ಸಿಎಂ ಸ್ಥಾನದ ಆಮಿಷವಿದೆಯೇ ಎಂದು ಕೇಳಿದಾಗ ನಾನು ಸಿಎಂ ಹುದ್ದೆಗೆ ನೀಡಲು ನಮ್ಮಲ್ಲಿ 500 ಕೋಟಿ ರೂ. ಹಣವಿಲ್ಲ ಎಂದು ಹೇಳಿದ್ದೆ. ನಮ್ಮ ಪಕ್ಷದ ಬಗ್ಗೆ ನಾನು ಮಾತಾಡಿಲ್ಲ, ಬೇರೆ ಪಕ್ಷಕ್ಕೆ ಆ ಮಾತು ಹೇಳಿದ್ದೆ” ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ವಂದೇ ಮಾತರಂ ಕುರಿತ ನೆಹರು ಪತ್ರ ಓದಿದ ಪ್ರಿಯಾಂಕಾ ಗಾಂಧಿ, ಬಿಜೆಪಿಗೆ ತರಾಟೆ

ಸಾಮಾಜಿಕ ಮಾಧ್ಯಮದಲ್ಲಿ ಅವರು ಸ್ಪಷ್ಟೀಕರಣ ನೀಡಿದ್ದರೂ ಅದು ಕಾಂಗ್ರೆಸ್​​ಗೆ ಸಮಾಧಾನ ತರಲಿಲ್ಲ. ಅವರ ಹೇಳಿಕೆಯಿಂದ ಕಾಂಗ್ರೆಸ್ ಹೈಕಮಾಂಡ್​ ಮುಜುಗರಕ್ಕೀಡಾಗಿದ್ದರಿಂದ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು