AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navjot Sidhu: ಶರಣಾಗಲು ಒಂದು ವಾರ ಸಮಯ ಕೇಳಿದ ನವಜೋತ್ ಸಿಂಗ್ ಸಿಧು

ಪಂಜಾಬ್​ನ ಮಾಜಿ ಸಚಿವರೂ ಆಗಿರುವ ಸಿಧು ಹಿಂದೆ ಭಾರತ ಕ್ರಿಕೆಟ್​ ತಂಡದಲ್ಲಿ ಆಡುತ್ತಿದ್ದರು. 1988ರ ಡಿ.27ರಂದು ಪಾಟಿಯಾಲದಲ್ಲಿ ವೃದ್ಧರೊಬ್ಬರ ಮೇಲೆ ಸಿಧು ಹಲ್ಲೆ ನಡೆಸಿದ್ದರು.

Navjot Sidhu: ಶರಣಾಗಲು ಒಂದು ವಾರ ಸಮಯ ಕೇಳಿದ ನವಜೋತ್ ಸಿಂಗ್ ಸಿಧು
ನವಜೋತ್ ಸಿಂಗ್ ಸಿಧು
TV9 Web
| Edited By: |

Updated on:May 20, 2022 | 11:52 AM

Share

ದೆಹಲಿ: ಚಂಡಿಗಡದಲ್ಲಿ 1988ರಲ್ಲಿ ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಬೇಕಾಗಿರುವ ನವಜೋತ್ ಸಿಂಗ್ ಸಿಧು (Navjot Singh Sidhu) ನ್ಯಾಯಾಲಯಕ್ಕೆ ಶರಣಾಗಲು ಒಂದು ವಾರ ಕಾಲಾವಕಾಶ ಬೇಕು ಎಂದು ಸುಪ್ರೀಂಕೋರ್ಟ್​​ಗೆ ವಿನಂತಿಸಿದ್ದಾರೆ. ಪಂಜಾಬ್​ನ ಮಾಜಿ ಸಚಿವರೂ ಆಗಿರುವ ಸಿಧು ಹಿಂದೆ ಭಾರತ ಕ್ರಿಕೆಟ್​ ತಂಡದಲ್ಲಿ ಆಡುತ್ತಿದ್ದರು. 1988ರ ಡಿ.27ರಂದು ಪಾಟಿಯಾಲದಲ್ಲಿ ವೃದ್ಧರೊಬ್ಬರ ಮೇಲೆ ಸಿಧು ಹಲ್ಲೆ ನಡೆಸಿದ್ದರು. ಚಿಕಿತ್ಸೆ ಫಲಿಸದ ಕಾರಣ ವೃದ್ಧರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಧುಗೆ ನಿನ್ನೆ (ಮೇ 19) ಸುಪ್ರೀಂಕೋರ್ಟ್​ ನಿನ್ನೆ ಶಿಕ್ಷೆ ವಿಧಿಸಿತ್ತು.

34 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸುಪ್ರೀಂಕೋರ್ಟ್​ ತೀರ್ಪು ನೀಡಿದೆ. ಶರಣಾಗಲು ಸಮಯಾವಕಾಶ ಕೋರಿದ ನವಜೋತ್ ಸಿಂಗ್​ ಸಿಧುಗೆ ಈ ಬಗ್ಗೆ ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿದೆ. ಕೋರ್ಟ್ ಸೂಚನೆಯ ಮೇರೆಗೆ ಸಿಧು ಪರವಾಗಿ ಅರ್ಜಿ ಸಲ್ಲಿಸಿದ ವಕೀಲ ಅಭಿಷೇಕ್ ಮನುಸಿಂಘ್ವಿ, ನವಜೋತ್ ಸಿಂಗ್ ಸಿಧು ಶರಣಾಗುತ್ತಾರೆ. ಆರೋಗ್ಯ ಸಮಸ್ಯೆ ಇರುವುದರಿಂದ, ಪರಿಹಾರಕ್ಕಾಗಿ ಒಂದು ವಾರ ಕಾಲಾವಕಾಶ ಬೇಕು ಎಂದು ಕೋರಿದರು.

ನ್ಯಾಯಾಲಯದ ಎದುರು ಶರಣಾಗುವುದಾಗಿ ಸಿಧು ನಿನ್ನೆಯಷ್ಟೇ ಟ್ವೀಟ್ ಮಾಡಿದ್ದರು. ಪಂಜಾಬ್​ನ ಪಾಟಿಯಾಲ ನ್ಯಾಯಾಲಯದಲ್ಲಿ ಸಿಧು ಶರಣಾಗಬಹುದು ಎಂದು ಇಂದು ಮುಂಜಾನೆ ಕೆಲ ಮಾಧ್ಯಗಳಲ್ಲಿ ವರದಿಗಳು ಪ್ರಕಟವಾಗಿದ್ದವು.

ತಾಜಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:47 am, Fri, 20 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್