AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ದೇಶವಾದ ಕಾಶ್ಮೀರ ಭಾರತಕ್ಕೂ ಸೇರಿದ್ದಲ್ಲ; ವಿವಾದಕ್ಕೆ ಕಾರಣವಾಯ್ತು ಕಾಂಗ್ರೆಸ್ ನಾಯಕನ ಹೇಳಿಕೆ

ಕಾಶ್ಮೀರ ಪ್ರತ್ಯೇಕ ದೇಶ. ಭಾರತ ಹಾಗೂ ಪಾಕಿಸ್ತಾನಗಳೆರಡೂ ಅಕ್ರಮವಾಗಿ ಕಾಶ್ಮೀರದ ಭಾಗವನ್ನು ಆಕ್ರಮಿಸಿಕೊಂಡಿವೆ. ಕಾಶ್ಮೀರ ಕೇವಲ ಕಾಶ್ಮೀರಿಗರಿಗೆ ಸೇರಿದ ದೇಶವಾಗಿದೆ ಎಂದು ನವಜೋತ್ ಸಿಂಗ್ ಸಿಧು ಸಲಹೆಗಾರ ಮಲ್ವಿಂದರ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಪ್ರತ್ಯೇಕ ದೇಶವಾದ ಕಾಶ್ಮೀರ ಭಾರತಕ್ಕೂ ಸೇರಿದ್ದಲ್ಲ; ವಿವಾದಕ್ಕೆ ಕಾರಣವಾಯ್ತು ಕಾಂಗ್ರೆಸ್ ನಾಯಕನ ಹೇಳಿಕೆ
ನವಜೋತ್ ಸಿಂಗ್ ಸಿಧು- ಮಲ್ವಿಂದರ್ ಸಿಂಗ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 19, 2021 | 6:37 PM

ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಪಡಿಸಿ 2 ವರ್ಷಗಳೇ ಕಳೆದಿವೆ. ಈ ನಡುವೆ ಪಂಜಾಬ್​ನ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಸಲಹೆಗಾರರಾದ ಮಲ್ವಿಂದರ್ ಸಿಂಗ್ ಮಾಲಿ ಕಾಶ್ಮೀರ ಪ್ರತ್ಯೇಕ ದೇಶವಾಗಿದ್ದು, ಪಾಕಿಸ್ತಾನ ಹಾಗೂ ಭಾರತ ಎರಡೂ ದೇಶಗಳು ಕಾಶ್ಮೀರವನ್ನು ಅಕ್ರಮವಾಗಿ ಆವರಿಸಿಕೊಂಡಿವೆ ಎನ್ನುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಲ್ವಿಂದರ್ ಸಿಂಗ್ ಮಾಲಿ, ಕಾಶ್ಮೀರ ಯಾವುದೇ ದೇಶಕ್ಕೂ ಸೇರಿದ್ದಲ್ಲ. ಅದೊಂದು ಪ್ರತ್ಯೇಕ ದೇಶ. ಭಾರತ ಹಾಗೂ ಪಾಕಿಸ್ತಾನಗಳೆರಡೂ ಅಕ್ರಮವಾಗಿ ಕಾಶ್ಮೀರದ ಭಾಗವನ್ನು ಆಕ್ರಮಿಸಿಕೊಂಡಿವೆ. ಕಾಶ್ಮೀರ ಕೇವಲ ಅಲ್ಲಿ ವಾಸಿಸುತ್ತಿರುವ ಕಾಶ್ಮೀರಿಗರಿಗೆ ಸೇರಿದ ದೇಶವಾಗಿದೆ. ಅದರ ಮೇಲೆ ಭಾರತಕ್ಕಾಗಲಿ, ಪಾಕಿಸ್ತಾನಕ್ಕಾಗಲಿ ಹಕ್ಕು ಇಲ್ಲ ಎಂದಿದ್ದಾರೆ.

ಈ ಟ್ವೀಟ್​ಗೆ ಭಾರತದ ಬಹುತೇಕ ಪಕ್ಷಗಳ ನಾಯಕರಿಂದ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್ ಪಕ್ಷ ಸೇರಿದಂತೆ ಅನೇಕ ನಾಯಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಲ್ವಿಂದರ್ ಸಿಂಗ್ ಅವರ ಟ್ವೀಟ್ ಬಗ್ಗೆ ಶಿರೋಮಣಿ ಅಕಾಲಿ ದಳದ ನಾಯಕ ಬಿಕ್ರಂ ಮಜಿತಿಯ ಪ್ರತಿಕ್ರಿಯೆ ನೀಡಿದ್ದು, ಇದರಿಂದ ಕಾಶ್ಮೀರವನ್ನು ಉಳಿಸಿಕೊಳ್ಳಬೇಕೆಂದು ತಮ್ಮ ಪ್ರಾಣತ್ಯಾಗ ಮಾಡಿರುವ ಭಾರತದ ನೂರಾರು ಯೋಧರಿಗೆ ಅವಮಾನ ಮಾಡಿದಂತಾಗಿದೆ ಎಂದಿದ್ದಾರೆ.

ಮಲ್ವಿಂದರ್ ಸಿಂಗ್ ಪ್ರತ್ಯೇಕ ದೇಶವಾಗಿದ್ದು, ಕಾಶ್ಮೀರಿಗರಿಗೆ ಮಾತ್ರ ಸೇರಿದ್ದಾಗಿದೆ ಎಂದು ಹೇಳಿದ್ದಾರೆ. ಪಾಕಿಸ್ತಾದಂತೆ ಭಾರತ ಕೂಡ ಅಕ್ರಮವಾಗಿ ಕಾಶ್ಮೀರವನ್ನು ಆಕ್ರಮಿಸಿಕೊಂಡಿದೆ ಎಂದು ಹೇಳಿದ್ದಾರೆ. ಇದು ಭಾರತದ ಹುತಾತ್ಮ ಯೋಧರಿಗೆ ಮಾಡಿರುವ ಅವಮಾನ ಎಂದು ನಿಮಗೆ ಅನಿಸುವುದಿಲ್ಲವೇ? ಎಂದು ರಾಹುಲ್ ಗಾಂಧಿ ಅವರಿಗೆ ವಿಕ್ರಂ ಪ್ರಶ್ನಿಸಿದ್ದಾರೆ.

ಒಂದುವೇಳೆ ಮಲ್ವಿಂದರ್ ಸಿಂಗ್ ಹೇಳಿದ್ದರಲ್ಲಿ ಯಾವ ತಪ್ಪೂ ಇಲ್ಲ ಎಂದು ರಾಹುಲ್ ಗಾಂಧಿ ಸಮರ್ಥನೆ ಮಾಡಿಕೊಂಡರೆ ಅವರ ನಿಜವಾದ ಮುಖ ಬಯಲಾದಂತಾಗುತ್ತದೆ. ಒಂದುವೇಳೆ ಅವರು ಹುತಾತ್ಮರ ಪ್ರಾಣತ್ಯಾಗಕ್ಕೆ ಬೆಲೆ ಕೊಡುವುದಾದರೆ ಕಾಂಗ್ರೆಸ್​ನಿಂದ ಮಲ್ವಿಂದರ್ ಸಿಂಗ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕು. ಇದುವರೆಗೂ ಯಾವ ಕ್ರಮ ತೆಗೆದುಕೊಂಡಿದ್ದಾರೆ? ಇದು ಏನನ್ನು ಸೂಚಿಸುತ್ತದೆ? ಎಂದು ಬಿಕ್ರಂ ವಾದಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಪಂಜಾಬ್​ನಲ್ಲಿ ಪಾಕಿಸ್ತಾನ ಶಾಂತಿ ಕದಡುತ್ತಿದೆ ಎಂದು ಆಕ್ರೋಶ ಹೊರಹಾಕುತ್ತಿದ್ದರೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮಾತ್ರ ಪಾಕಿಸ್ತಾನದ ಸೇನೆಯ ಮುಖ್ಯಸ್ಥ ಖಾಮರ್ ಜಾವೇದ್ ಬಾಜ್ವಾ ಅವರನ್ನು ತಬ್ಬಿಕೊಂಡು ಫೋಟೋ ತೆಗೆಸಿಕೊಳ್ಳುತ್ತಾರೆ. ಇದು ಯಾವ ಸಂದೇಶವನ್ನು ರವಾನಿಸುತ್ತದೆ? ಎಂದು ವಿಪಕ್ಷಗಳು ಅಸಮಾಧಾನ ಹೊರಹಾಕಿವೆ.

ಇದನ್ನೂ ಓದಿ: ಅಫ್ಘಾನಿಸ್ತಾನದ 4 ಕಮಾಂಡರ್​ಗಳನ್ನು ಜನರೆದುರೇ ನೇಣಿಗೇರಿಸಿದ ತಾಲಿಬಾನ್; ಇದೇನಾ ಶಾಂತಿ ಸ್ಥಾಪನೆ?

ನರಕವಾಗಿದೆ ಅಫ್ಘಾನಿಸ್ತಾನ; ಆಟವಾಡುವ ಮಕ್ಕಳೂ ಇಲ್ಲಿ ತಾಲಿಬಾನ್ ಉಗ್ರರ ಲೈಂಗಿಕ ಕ್ರಿಯೆಗೆ ಮೀಸಲು!

(Navjot Singh Sidhu advisor says Kashmir is separate country India is Illegal Occupant sparks controversy)

Published On - 3:52 pm, Thu, 19 August 21

ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್