AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sidhu Road rage Case ವಿಳಂಬವಾದರೂ ನಮಗೆ ನ್ಯಾಯ ಸಿಕ್ಕಿದೆ: ಗುರ್ನಾಮ್ ಸಿಂಗ್ ಕುಟುಂಬ

ಘಟನೆ ನಡೆದಾಗ ಸಿಧು ಅಂತಾರಾಷ್ಟ್ರೀಯ ಕ್ರಿಕೆಟಿಗರಾಗಿದ್ದರು.  ಅವರ ಸ್ನೇಹಿತ ರೂಪಿಂದರ್ ಸಿಂಗ್ ಸಂಧು ಮತ್ತು ಅವರು ಕಾರ್ ಪಾರ್ಕಿಂಗ್ ಬಗ್ಗೆ ಜಗಳ ಮಾಡಿ ಗುರ್ನಾಮ್ ಸಿಂಗ್ ಅವರನ್ನು ಥಳಿಸಿದ್ದಾರೆ.

Sidhu Road rage Case ವಿಳಂಬವಾದರೂ ನಮಗೆ ನ್ಯಾಯ ಸಿಕ್ಕಿದೆ: ಗುರ್ನಾಮ್ ಸಿಂಗ್ ಕುಟುಂಬ
ನವಜೋತ್ ಸಿಂಗ್ ಸಿಧು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 19, 2022 | 8:00 PM

Share

ಪಟಿಯಾಲದಲ್ಲಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು (Navjot Singh Sidhu)ಅವರೊಂದಿಗಿನ ರಸ್ತೆ ಜಗಳ ಘಟನೆಯಲ್ಲಿ 34 ವರ್ಷಗಳ ಹಿಂದೆ ಪ್ರಾಣ ಕಳೆದುಕೊಂಡ ಗುರ್ನಾಮ್ ಸಿಂಗ್ (65) ಅವರ ಕುಟುಂಬ ಸದಸ್ಯರು ಸುಪ್ರೀಂಕೋರ್ಟ್ ತಮ್ಮ ಪರ ಆದೇಶ ನೀಡಿದಕ್ಕಾಗಿ ಸರ್ವಶಕ್ತನಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ. 34 ವರ್ಷಗಳ ನಂತರ ನ್ಯಾಯ ದೊರಕಿದೆ, ನಾನು ದೇವರ ಮುಂದೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಸುದೀರ್ಘ ಕಾನೂನು ಹೋರಾಟ ಕೊನೆಗೊಂಡ ನಂತರ ಗುರ್ನಾಮ್ ಸಿಂಗ್ (Gurnam Singh)ಅವರ ಮಗ ನರ್ವೇದಿಂದರ್ ಸಿಂಗ್ ಹೇಳಿದ್ದಾರೆ. 2018ರಲ್ಲಿ ಸುಪ್ರೀಂಕೋರ್ಟ್ (Supreme Court) ಕೇವಲ ₹ 1,000 ದಂಡವನ್ನು ವಿಧಿಸುವ ಮೂಲಕ ಸಿಧುವನ್ನು ಬಿಡುಗಡೆ ಮಾಡಿದಾಗ ನನಗೆ ನಿರಾಶೆಯಾಗಿದೆ ಎಂದಿದ್ದಾರೆ ನರ್ವೇದಿಂದರ್. ಆದರೆ ಕುಟುಂಬವು ಈ ನಿರ್ಧಾರವನ್ನು ದೇವರ ನಿರ್ಧಾರವೆಂದು ಒಪ್ಪಿಕೊಂಡಿದೆ ಎಂದಿದ್ದರು. ನಂತರ ಅವರು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದು, “ನನಗೆ ನ್ಯಾಯಾಂಗದಲ್ಲಿ ನಂಬಿಕೆ ಇದೆ” ಎಂದು ಹೇಳಿದರು. ಗುರುವಾರ ಇದೇ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನವಜೋತ್ ಸಿಂಗ್ ಸಿಧುಗೆ ಜೈಲು ಶಿಕ್ಷೆ ವಿಧಿಸಿದೆ. ಈ ಆದೇಶಕ್ಕೆ ಪ್ರತಿಕ್ರಿಯಿಸಿದ ಗುರ್ನಾಮ್ ಸಿಂಗ್ ಅವರ ಮೊಮ್ಮಗ ಸಾಬ್ಬಿ, “ವಿಳಂಬವಾಗಬಹುದು ಆದರೆ ದೇವರು ಯಾವಾಗಲೂ ನ್ಯಾಯವನ್ನು ನೀಡುತ್ತಾನೆ. ನಾವು ದೇವರಿಗೆ ಮಾತ್ರವಲ್ಲದೆ ನಮ್ಮ ಸುದೀರ್ಘ ಕಾನೂನು ಹೋರಾಟದಲ್ಲಿ ನಮ್ಮೊಂದಿಗೆ ನಿಂತ ಪ್ರತಿಯೊಬ್ಬರಿಗೂ ನಾವು ಧನ್ಯವಾದ ಹೇಳುತ್ತೇವೆ. ಈ ಸಮಯದಲ್ಲಿ ನಾವು ಅನೇಕ ಒತ್ತಡಗಳನ್ನು ಅನುಭವಿಸಿದ್ದೇವೆ ಎಂದಿದ್ದಾರೆ. ಆರೋಪ ಮುಕ್ತರಾದಾಗ ಸಿಧು ತೀವ್ರವಾಗಿ ಪ್ರತಿಕ್ರಿಯಿಸಿದ್ದರು. ನಾವು ದೇವರಿಗೆ ಕೃತಜ್ಞರಾಗಿರುತ್ತೇವೆ ಎಂದು ಮಾತ್ರ ಹೇಳಬಹುದು ಎಂದಿದ್ದಾರೆ ಸಾಬ್ಬಿ.

ತೀರ್ಪಿನ ಒಂದು ದಿನ ಮೊದಲು ಕುಟುಂಬವು ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿತ್ತು ಎಂದು ಅವರು ಹೇಳಿದರು. ಗುರ್ನಾಮ್ ಸಿಂಗ್ ಅವರ ಸೊಸೆ ಪರ್ವೀನ್ ಕೌರ್ ಕೂಡ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಘಟನೆ ನಡೆದಾಗ ಸಿಧು ಅಂತಾರಾಷ್ಟ್ರೀಯ ಕ್ರಿಕೆಟಿಗರಾಗಿದ್ದರು.  ಅವರ ಸ್ನೇಹಿತ ರೂಪಿಂದರ್ ಸಿಂಗ್ ಸಂಧು ಮತ್ತು ಅವರು ಕಾರ್ ಪಾರ್ಕಿಂಗ್ ಬಗ್ಗೆ ಜಗಳ ಮಾಡಿ ಗುರ್ನಾಮ್ ಸಿಂಗ್ ಅವರನ್ನು ಥಳಿಸಿದ್ದಾರೆ. ಗುರ್ನಾಮ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಸಿಧು ಮತ್ತು ಸಂಧು ವಿರುದ್ಧ ಇತರ ಆರೋಪಗಳ ಜೊತೆಗೆ ಅಪರಾಧಿ ನರಹತ್ಯೆಗಾಗಿ ಪ್ರಕರಣ ದಾಖಲಿಸಲಾಗಿದೆ. ಸಂಧು ಅವರನ್ನು ಸುಪ್ರೀಂಕೋರ್ಟ್ ಖುಲಾಸೆಗೊಳಿಸಿದೆ.

ಇದನ್ನೂ ಓದಿ
Image
Navjot Singh Sidhu 1988ರ ರಸ್ತೆ ಜಗಳ ಪ್ರಕರಣ: ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ
Image
ನವಜೋತ್​ ಸಿಂಗ್ ಸಿಧು ಬಿಟ್ಟು ಹೋದ ಜಾಗವನ್ನು ಇಮ್ರಾನ್ ಖಾನ್​ ತುಂಬಲಿ; ಪಾಕ್​ ಮಾಜಿ ಪ್ರಧಾನಿಯ ಮಾಜಿ ಪತ್ನಿಯಿಂದ ವ್ಯಂಗ್ಯ
Image
ರಾಜೀನಾಮೆ ಕೊಟ್ಟ ಬೆನ್ನಲ್ಲೇ ಕಾಂಗ್ರೆಸ್​​ಗೆ ಮುಜುಗರ ಉಂಟು ಮಾಡಿದ ನವಜೋತ್ ಸಿಂಗ್ ಸಿಧು; ಏನಿದು ಟ್ವೀಟ್ ಅರ್ಥ?
Image
ಸೋತಿದ್ದು ದೇವರ ಇಚ್ಛೆ ಎಂದಿದ್ದ ನವಜೋತ್​ ಸಿಂಗ್​ ಸಿಧು; ಪಂಜಾಬ್​ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ

ಸಿಧು ಮತ್ತು ಅಕಾಲಿಗಳ ನಡುವಿನ ರಾಜಕೀಯ ಯುದ್ಧವು ತೀವ್ರಗೊಂಡ ಸಮಯದಲ್ಲಿಯೂ ಸಹ, ನರ್ವೇದಿಂದರ್ ಅವರು ರಾಜಕೀಯದಿಂದ ದೂರವೇ ಉಳಿದಿದ್ದು ಮಾಧ್ಯಮಗಳೊಂದಿಗೆ ಸಂವಹನ ನಡೆಸುವುದಕ್ಕೆ ನಿರಾಕರಿಸಿದ್ದರು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 7:54 pm, Thu, 19 May 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್