AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಭಜನ್ ಸಿಂಗ್ ಜತೆಗಿರುವ ಫೋಟೊ ಟ್ವೀಟ್ ಮಾಡಿದ ಸಿಧು; ಕಾಂಗ್ರೆಸ್ ಸೇರುತ್ತಿದ್ದಾರಾ ಟರ್ಬನೇಟರ್?

Harbhajan Singh 2019 ರ ಲೋಕಸಭಾ ಚುನಾವಣೆಯ ನಂತರದಿಂದಲೇ ಭಜ್ಜಿ ರಾಜಕೀಯಕ್ಕೆ ಬರಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಬುಧವಾರ ರಾಜ್ಯ ಚುನಾವಣೆಗಾಗಿ ರಚಿಸಲಾಗಿರುವ ಪಂಜಾಬ್ ಕಾಂಗ್ರೆಸ್ ಪ್ರಚಾರ ಸಮಿತಿಯ ಮೊದಲ ಸಭೆಗೂ ಮುನ್ನ ಈ ಬೆಳವಣಿಗೆ ನಡೆದಿದೆ.

ಹರ್ಭಜನ್ ಸಿಂಗ್ ಜತೆಗಿರುವ ಫೋಟೊ ಟ್ವೀಟ್ ಮಾಡಿದ ಸಿಧು; ಕಾಂಗ್ರೆಸ್ ಸೇರುತ್ತಿದ್ದಾರಾ ಟರ್ಬನೇಟರ್?
ನವಜೋತ್ ಸಿಂಗ್ ಸಿಧು - ಹರ್ಭಜನ್ ಸಿಂಗ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 15, 2021 | 6:58 PM

Share

ದೆಹಲಿ: ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗೆ (Punjab Assembly Election) ತಿಂಗಳುಗಳು ಬಾಕಿ ಇರುವಂತೆಯೇ ಸ್ಟಾರ್ ಕ್ರಿಕೆಟಿಗ ಹರ್ಭಜನ್ ಸಿಂಗ್ (Harbhajan Singh) ಅವರು ಪಿಸಿಸಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು(Navjot Singh Sidhu) ಅವರನ್ನು ಭೇಟಿ ಮಾಡಿ ಕಾಂಗ್ರೆಸ್ (Congress) ಸೇರುವ ಸಾಧ್ಯತೆಯ ಬಗ್ಗೆ ಸುಳಿವು ನೀಡಿದ್ದಾರೆ. ಹರ್ಭಜನ್ ಸಿಂಗ್ ಜತೆ ಇರುವ ಫೋಟೊ ಟ್ವೀಟ್ ಮಾಡಿದ ಸಿಧು, ಚಿತ್ರವು ಸಾಧ್ಯತೆಗಳಿಂದ ತುಂಬಿದೆ, ಶೈನಿಂಗ್ ಸ್ಟಾರ್ ಭಜ್ಜಿಯೊಂದಿಗೆ ಎಂದು ಶೀರ್ಷಿಕೆ ನೀಡಿದ್ದಾರೆ. ಮುಂದಿನ ವರ್ಷ ಪಂಜಾಬ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಈ ಭೇಟಿ ನಡೆದಿದೆ. ಚುನಾವಣೆಗೂ ಮುನ್ನ ಕ್ರಿಕೆಟಿಗ ಕಾಂಗ್ರೆಸ್ ಪಕ್ಷಕ್ಕೆ ಸೇರಬಹುದು ಎಂದು ರಾಜಕೀಯ ತಜ್ಞರು ಊಹಿಸಿದ್ದಾರೆ. ಆದರೆ, ಈ ಬಗ್ಗೆ ಕಾಂಗ್ರೆಸ್ ಅಥವಾ ಹರ್ಭಜನ್ ಸಿಂಗ್ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹರ್ಭಜನ್ ಅವರು ಡಿಸೆಂಬರ್ 11 ರಂದು ಬಿಜೆಪಿ ಸೇರುತ್ತಿದ್ದಾರೆ ಎಂಬ ವದಂತಿ ನಿರಾಕರಿಸಿದ ಕೆಲವು ದಿನಗಳ ನಂತರ ಸಿಧು ಅವರನ್ನು ಭೇಟಿ ಮಾಡಿದ್ದಾರೆ. ಭಜ್ಜಿ ಬಿಜೆಪಿಗೆ ಸೇರಲಿದ್ದಾರೆ ಎಂಬ ವರದಿಗೆ ಪ್ರತಿಕ್ರಿಯಿಸಿದ ಹರ್ಭಜನ್ ಅದನ್ನು “ಸುಳ್ಳು ಸುದ್ದಿ” ಎಂದಿದ್ದರು. 2019 ರ ಲೋಕಸಭಾ ಚುನಾವಣೆಯ ನಂತರದಿಂದಲೇ ಭಜ್ಜಿ ರಾಜಕೀಯಕ್ಕೆ ಬರಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಬುಧವಾರ ರಾಜ್ಯ ಚುನಾವಣೆಗಾಗಿ ರಚಿಸಲಾಗಿರುವ ಪಂಜಾಬ್ ಕಾಂಗ್ರೆಸ್ ಪ್ರಚಾರ ಸಮಿತಿಯ ಮೊದಲ ಸಭೆಗೂ ಮುನ್ನ ಈ ಬೆಳವಣಿಗೆ ನಡೆದಿದೆ. ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಸುನಿಲ್ ಜಾಖರ್ ಅವರನ್ನು ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಮತ್ತೊಂದೆಡೆ ಸಿಎಂ ಕುರ್ಚಿಯಿಂದ ಕೆಳಗಿಳಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ವಿಧಾನಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಕೈಜೋಡಿಸಲು ಸಿದ್ಧರಾಗಿದ್ದಾರೆ. ತಮ್ಮ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್‌ನ ಧ್ಯೇಯವೆಂದರೆ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಸೋಲಿಸುವುದು ಮಾತ್ರವಲ್ಲ ಮುಂದಿನ ಸರ್ಕಾರವನ್ನು ರಚಿಸುವುದು ಕೂಡಾ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ:  Worlds Most Admired Men 2021 ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ ಪುರುಷರ ಪಟ್ಟಿಯಲ್ಲಿ ಕೊಹ್ಲಿಗಿಂತ ಮೇಲೆ ತೆಂಡೂಲ್ಕರ್; ಅಗ್ರಸ್ಥಾನದಲ್ಲಿ ಒಬಾಮ, ಎಂಟನೇ ಸ್ಥಾನದಲ್ಲಿ ಮೋದಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ