AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಚ್ಚಿಯಲ್ಲಿ ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಪತನ: ನೌಕಾಪಡೆ ಅಧಿಕಾರಿ ಸಾವು

Indian Navy helicopter crash: ಕೊಚ್ಚಿಯ ಸೌತ್ ನೇವಲ್ ಕಮಾಂಡ್ ಪ್ರಧಾನ ಕಚೇರಿಯಲ್ಲಿರುವ ಐಎನ್​ಎಸ್ ಗರುಡ ರನ್ ವೇಯಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಹೆಲಿಕಾಪ್ಟರ್‌ನ ಪೈಲಟ್ ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಗಾಯಾಳುಗಳಿಬ್ಬರನ್ನೂ ನೌಕಾಪಡೆಯ ಪ್ರಧಾನ ಕಚೇರಿಯ ಸಂಜೀವನಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಚ್ಚಿಯಲ್ಲಿ ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಪತನ: ನೌಕಾಪಡೆ ಅಧಿಕಾರಿ ಸಾವು
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Nov 04, 2023 | 4:33 PM

ಕೊಚ್ಚಿ, ನವೆಂಬರ್ 4: ಕೇರಳದ ಕೊಚ್ಚಿಯಲ್ಲಿ (Kochi) ಭಾರತೀಯ ನೌಕಾಪಡೆ (Indian Navy) ಚೇತಕ್ ಹೆಲಿಕಾಪ್ಟರ್ ಪತನಗೊಂಡು (helicopter crash) ನೌಕಾಪಡೆಯ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ಶನಿವಾರ ಮಧ್ಯಾಹ್ನ 2.30ರ ಸುಮಾರಿಗೆ ನಿತ್ಯದ ತರಬೇತಿ ವೇಳೆ ಹೆಲಿಕಾಪ್ಟರ್​​ ಪತನವಾಗಿದ್ದು, ಇದೇ ವೇಳೆ ರನ್‌ವೇಯಲ್ಲಿದ್ದ ನೌಕಾಪಡೆಯ ಅಧಿಕಾರಿ ಹೆಲಿಕಾಪ್ಟರ್​​ನ ರೋಟರ್ ಬ್ಲೇಡ್‌ಗಳಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕೊಚ್ಚಿಯ ಸೌತ್ ನೇವಲ್ ಕಮಾಂಡ್ ಪ್ರಧಾನ ಕಚೇರಿಯಲ್ಲಿರುವ ಐಎನ್​ಎಸ್ ಗರುಡ ರನ್ ವೇಯಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಹೆಲಿಕಾಪ್ಟರ್‌ನ ಪೈಲಟ್ ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಗಾಯಾಳುಗಳಿಬ್ಬರನ್ನೂ ನೌಕಾಪಡೆಯ ಪ್ರಧಾನ ಕಚೇರಿಯ ಸಂಜೀವನಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೆ ಸಂಬಂಧಿಸಿ ಭಾರತೀಯ ನೌಕಾಪಡೆಯಿಂದ ದೃಢೀಕೃತ ಮಾಹಿತಿಗಾಗಿ ಕಾಯಲಾಗುತ್ತಿದೆ. ಅಪಘಾತದ ನಂತರ ಕೊಚ್ಚಿ ಹಾರ್ಬರ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

(ಮಾಹಿತಿ ಅಪ್​ಡೇಟ್ ಆಗುತ್ತಿದೆ)

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!