AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nawab Malik: ಸಮೀರ್ ವಾಂಖೆಡೆ ವಿರುದ್ಧದ ಹೇಳಿಕೆಗೆ ಬಾಂಬೆ ಹೈಕೋರ್ಟ್​ಗೆ ಬೇಷರತ್ ಕ್ಷಮೆ ಯಾಚಿಸಿದ ನವಾಬ್ ಮಲಿಕ್

ತಮ್ಮ ಮಗನ ವಿರುದ್ಧ ಮತ್ತೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಸಮೀರ್ ವಾಂಖೆಡೆ ಅವರ ತಂದೆ ಜ್ಞಾನದೇವ್ ವಾಂಖೆಡೆ ನವಾಬ್ ಮಲಿಕ್ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದರು.

Nawab Malik: ಸಮೀರ್ ವಾಂಖೆಡೆ ವಿರುದ್ಧದ ಹೇಳಿಕೆಗೆ ಬಾಂಬೆ ಹೈಕೋರ್ಟ್​ಗೆ ಬೇಷರತ್ ಕ್ಷಮೆ ಯಾಚಿಸಿದ ನವಾಬ್ ಮಲಿಕ್
ನವಾಬ್​ ಮಲ್ಲಿಕ್​
TV9 Web
| Updated By: ಸುಷ್ಮಾ ಚಕ್ರೆ|

Updated on: Dec 10, 2021 | 6:02 PM

Share

ಮುಂಬೈ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ವಿರುದ್ಧ ನೀಡಿದ್ದ ಹೇಳಿಕೆಗೆ ಬಾಂಬೆ ಹೈಕೋರ್ಟ್​ ಮುಂದೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ಇನ್ನು ಮುಂದೆ ಅಂತಹ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಅವರು ಈ ಹಿಂದೆ ಬಾಂಬೆ ಹೈಕೋರ್ಟ್​ಗೆ ಭರವಸೆ ನೀಡಿದ್ದರು. ಆದರೆ, ಮತ್ತೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರಿಂದ ಅವರು ಕ್ಷಮೆ ಯಾಚಿಸಿದ್ದಾರೆ. ಸಮೀರ್ ವಾಂಖೆಡೆ ಅವರ ವಿರುದ್ಧ ಯಾವುದೇ ನೇರ ಅಥವಾ ಪರೋಕ್ಷ ಹೇಳಿಕೆ ನೀಡುವುದಿಲ್ಲ ಎಂದು ನವಾಬ್ ಮಲಿಕ್ ಮತ್ತು ಅವರ ಕುಟುಂಬ ಬಾಂಬೆ ಹೈಕೋರ್ಟ್‌ಗೆ ಭರವಸೆ ನೀಡಿತ್ತು.

ನವಾಬ್ ಮಲಿಕ್ ಅವರು ಉದ್ದೇಶಪೂರ್ವಕವಾಗಿ ತಮ್ಮ ಮಾತನ್ನು ಮೀರಿ, ಕೋರ್ಟ್​ಗೆ ನೀಡಿದ್ದ ಭರವಸೆಯನ್ನು ಉಲ್ಲಂಘಿಸಿದ್ದಾರೆ ಮತ್ತು ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮತ್ತು ಅವರ ಕುಟುಂಬದ ವಿರುದ್ಧ ಮಾತನಾಡಿದ್ದಾರೆ ಎಂದು ನ್ಯಾಯಾಲಯ ತೀರ್ಮಾನಿಸಿದೆ. ತಮ್ಮ ಮಗನ ವಿರುದ್ಧ ಮತ್ತೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಸಮೀರ್ ವಾಂಖೆಡೆ ಅವರ ತಂದೆ ಜ್ಞಾನದೇವ್ ವಾಂಖೆಡೆ ನವಾಬ್ ಮಲಿಕ್ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದರು.

ನವಾಬ್ ಮಲಿಕ್ ಇಂದು ಕೋರ್ಟ್​ ಎದುರು ನೀಡಿರುವ ಹೇಳಿಕೆಯಲ್ಲಿ, ನವೆಂಬರ್ 25 ಮತ್ತು ನವೆಂಬರ್ 29ರ ಆದೇಶಗಳಲ್ಲಿ ದಾಖಲಾಗಿರುವಂತೆ ಈ ನ್ಯಾಯಾಲಯಕ್ಕೆ ನೀಡಲಾದ ನನ್ನ ಒಪ್ಪಂದದ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ನಾನು ಈ ಗೌರವಾನ್ವಿತ ನ್ಯಾಯಾಲಯಕ್ಕೆ ಬೇಷರತ್ ಕ್ಷಮೆ ಯಾಚಿಸುತ್ತೇನೆ. ಇದು ಉದ್ದೇಶಪೂರ್ವಕವಾಗಿ ಮಾಡಿದ ತಪ್ಪಲ್ಲ. ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುವಾಗ ಸಮೀರ್ ವಾಂಖೆಡೆ ವಿರುದ್ಧ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

ಮಾಧ್ಯಮಗಳಿಗೆ ನೀಡಿದ ಸಂದರ್ಶನದ ಸಂದರ್ಭದಲ್ಲಿ ನಾನು ನೀಡಿದ ಪ್ರತಿಕ್ರಿಯೆಗಳು ಈ ನ್ಯಾಯಾಲಯಕ್ಕೆ ನಾನು ನೀಡಿದ ಭರವಸೆಯ ವ್ಯಾಪ್ತಿಯಲ್ಲಿಲ್ಲ ಎಂಬ ನಂಬಿಕೆಯಿಂದ ನಾನು ಈ ಪ್ರತಿಕ್ರಿಯೆಗಳನ್ನು ನೀಡಿದ್ದೆ. ಅದಾದ ನಂತರ ನನಗೆ ಅದು ತಪ್ಪೆಂದು ಗೊತ್ತಾಯಿತು ಎಂದು ನವಾಬ್ ಮಲಿಕ್ ಹೇಳಿದ್ದಾರೆ.

ಇದನ್ನೂ ಓದಿ: ಧ್ಯಾನ್​​ದೇವ್ ವಾಂಖೆಡೆ ಕುಟುಂಬದ ವಿರುದ್ಧ ಡಿಸೆಂಬರ್ 9ರವರೆಗೆ ಸಾರ್ವಜನಿಕವಾಗಿ ಯಾವುದೇ ಪೋಸ್ಟ್ ಮಾಡುವುದಿಲ್ಲ: ನವಾಬ್ ಮಲಿಕ್

ಸಮೀರ್ ವಾಂಖೆಡೆ ವಿರುದ್ಧದ ನವಾಬ್ ಮಲಿಕ್ ಆರೋಪಗಳು ಪ್ರಾಥಮಿಕ ಹಂತದಲ್ಲಿ ಸಂಪೂರ್ಣವಾಗಿ ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ