AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೆ 8 ದಿನ ಇರುವಾಗಲೇ ನಕ್ಸಲ್‌ ದಾಳಿ, ನಾಲ್ವರು ಪೊಲೀಸರು ಹುತಾತ್ಮ

ನಕ್ಸಲ್ ಪೀಡಿತ ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಬಾಕಿ ಇರುವಾಗಲೇ ನಕ್ಸಲೀಯರು ದಾಳಿ ನಡೆಸಿದ್ದಾರೆ. ಪೊಲೀಸ್ ಗಸ್ತು ಸಿಬ್ಬಂದಿಯ ಮೇಲೆ ದಾಳಿ ಮಾಡಿದ್ದು, ನಾಲ್ವರು ಪೊಲೀಸರು ಹುತಾತ್ಮರಾಗಿದ್ದಾರೆ. ರಾಂಚಿ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಗುಂಡಿನ ದಾಳಿ ನಡೆಸಿದ್ದಾರೆ. ಉದ್ಧವ್ ಠಾಕ್ರೆಯೇ ‘ಮಹಾ’ ಸಿಎಂ..! ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳಲು ಎನ್​ಸಿಪಿ ಹಾಗೂ ಕಾಂಗ್ರೆಸ್​ ಗ್ರೀನ್​ ಸಿಗ್ನಲ್​ ಕೊಟ್ಟಿವೆ. ಜೊತೆಗೆ ಶಿವಸೇನೆ ಮುಖ್ಯಸ್ಥ ಉದ್ಧವ್​ ಠಾಕ್ರೆಯೇ 5 ವರ್ಷ ಅವಧಿಗೆ ಸಿಎಂ ಆಗಲು […]

ಚುನಾವಣೆಗೆ 8 ದಿನ ಇರುವಾಗಲೇ ನಕ್ಸಲ್‌ ದಾಳಿ, ನಾಲ್ವರು ಪೊಲೀಸರು ಹುತಾತ್ಮ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Nov 23, 2019 | 7:09 AM

Share

ನಕ್ಸಲ್ ಪೀಡಿತ ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಬಾಕಿ ಇರುವಾಗಲೇ ನಕ್ಸಲೀಯರು ದಾಳಿ ನಡೆಸಿದ್ದಾರೆ. ಪೊಲೀಸ್ ಗಸ್ತು ಸಿಬ್ಬಂದಿಯ ಮೇಲೆ ದಾಳಿ ಮಾಡಿದ್ದು, ನಾಲ್ವರು ಪೊಲೀಸರು ಹುತಾತ್ಮರಾಗಿದ್ದಾರೆ. ರಾಂಚಿ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಗುಂಡಿನ ದಾಳಿ ನಡೆಸಿದ್ದಾರೆ.

ಉದ್ಧವ್ ಠಾಕ್ರೆಯೇ ‘ಮಹಾ’ ಸಿಎಂ..! ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳಲು ಎನ್​ಸಿಪಿ ಹಾಗೂ ಕಾಂಗ್ರೆಸ್​ ಗ್ರೀನ್​ ಸಿಗ್ನಲ್​ ಕೊಟ್ಟಿವೆ. ಜೊತೆಗೆ ಶಿವಸೇನೆ ಮುಖ್ಯಸ್ಥ ಉದ್ಧವ್​ ಠಾಕ್ರೆಯೇ 5 ವರ್ಷ ಅವಧಿಗೆ ಸಿಎಂ ಆಗಲು ಒಪ್ಪಿಕೊಂಡಿವೆ. ಇಂದು ಕೊನೇ ಹಂತದ ಮಾತುಕತೆ ನಡೆಯಲಿದ್ದು ಅಧಿಕೃತ ಘೋಷಣೆ ಹೊರಬೀಳಲಿದೆ.

ಜೆಸಿಬಿ ಹಿಡಿದು ಪ್ರತಿಯೋಧ: ರಾಜಸ್ಥಾನದ ಜಲೋರ್ನನಲ್ಲಿ ಅಕ್ರಮ ಕಟ್ಟಡವನ್ನ ತೆರವು ಮಾಡಲು ಬಂದಾಗ ಮಹಿಳೆಯೊಬ್ಬಳು ತನ್ನ ಪ್ರಾಣದ ಹಂಗು ತೊರೆದು ಪ್ರತಿರೋಧ ಒಡ್ಡಿದ್ದಾಳೆ. ರೇಖಾ ದೇವಿ ಎಂಬ ಮಹಿಳೆ ಕಟ್ಟಡ ತೆರವು ಮಾಡಲು ಬಂದ ಜೆಸಿಬಿ ಬಕೆಟ್‌ಗೆ ಹಿಡಿದು ಹತ್ತಲು ಯತ್ನಿಸಿ, ಕಟ್ಟಡ ತೆರವು ಮಾಡದಂತೆ ಆಗ್ರಹಿಸಿದ್ದಾರೆ.

ಆಸ್ಪತ್ರೆಯಲ್ಲಿ ‘ಹೊಗೆ’ ಬಿಟ್ಟ ಎಸ್‌ಪಿ ಶಾಸಕ: ಎಸ್‌ಪಿ ಶಾಸಕ ಹಾಜಿ ಇಕ್ರಂ ಖುರೇಷಿ ಜಿಲ್ಲಾಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಿಸಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ. ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಜನ್ಮದಿನದ ಅಂಗವಾಗಿ ಜಿಲ್ಲಾಸ್ಪತ್ರೆಗೆ ಹಣ್ಣು ವಿತರಿಸಲು ಹೋದಾಗ ಆಸ್ಪತ್ರೆ ಆವರಣದಲ್ಲಿ ನಿಂತು ಸಿಗರೇಟು ಸೇದಿದ್ದಾರೆ. ಈ ದೃಶ್ಯ ವೈರಲ್​ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಐಬಿಟಿಪಿ ಕಚೇರಿಗೆ ಮುಂದಿನ ವಾರ ಶಾ ಭೇಟಿ: ಇಂಡೋ-ಟಿಬೆಟ್ ಗಡಿ ಪೊಲೀಸ್ ಕಚೇರಿಗೆ ಗೃಹ ಸಚಿವ ಅಮಿತ್ ಶಾ ಮುಂದಿನ ವಾರ ಭೇಟಿ ನೀಡಲಿದ್ದಾರೆ. ನ. 26 ರಂದು ಲೋಧಿ ರಸ್ತೆಯಲ್ಲಿರುವ ಐಬಿಟಿಪಿ ಗೃಹ ಕಚೇರಿಗೆ ಶಾ ಭೇಟಿ ನೀಡಿ, ಎಲ್‌ಎಸಿಯಲ್ಲಿನ ಕಾರ್ಯಾಚರಣೆ ಸಿದ್ಧತೆಯನ್ನ ಪರಿಶೀಲನೆ ನಡೆಸಲಿದ್ದಾರೆ.

Follow Us
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ