AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢದಲ್ಲಿ ನಕ್ಸಲ್ ನಾಯಕ ಸೇರಿ 10 ನಕ್ಸಲರ ಎನ್​ಕೌಂಟರ್

ಛತ್ತಿಸ್ ಗಢದಲ್ಲಿ ಹಿರಿಯ ನಕ್ಸಲ್ ನಾಯಕ ಸೇರಿದಂತೆ 10 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯ ಮೈನ್​​ಪುರ ಬಳಿ ನಡೆದ ಪ್ರಮುಖ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್ ಮಾಡಲಾಗಿದೆ. ನಕ್ಸಲರ ಹಿರಿಯ ನಾಯಕ ಸೇರಿದಂತೆ 10 ನಕ್ಸಲರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಮೈನ್‌ಪುರ ಅರಣ್ಯ ಪ್ರದೇಶದಲ್ಲಿ ನಕ್ಸಲ್ ಉಪಸ್ಥಿತಿಯ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಲಾಗಿತ್ತು.

ಛತ್ತೀಸ್​ಗಢದಲ್ಲಿ ನಕ್ಸಲ್ ನಾಯಕ ಸೇರಿ 10 ನಕ್ಸಲರ ಎನ್​ಕೌಂಟರ್
Naxal Encounter
ಸುಷ್ಮಾ ಚಕ್ರೆ
|

Updated on: Sep 11, 2025 | 10:25 PM

Share

ರಾಯ್‌ಪುರ, ಸೆಪ್ಟೆಂಬರ್ 11: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹಿರಿಯ ಮಾವೋವಾದಿ ಕಮಾಂಡರ್ ಮೋಡೆಮ್ ಬಾಲಕೃಷ್ಣ ಅಲಿಯಾಸ್ ಮನೋಜ್ ಮತ್ತು ಇತರ 9 ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಕೌಂಟರ್ (Naxal encounter) ಇನ್ನೂ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.

ಈ ಎನ್‌ಕೌಂಟರ್ ಬಗ್ಗೆ ವಿವರ ನೀಡಿದ ರಾಯ್‌ಪುರ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಅಮರೇಶ್ ಮಿಶ್ರಾ, ಈ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಹೇಳಿದರು. “ವಿಶೇಷ ಕಾರ್ಯಪಡೆ (STF), CoBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ – CRPF ನ ಗಣ್ಯ ಘಟಕ) ಮತ್ತು ಇತರ ರಾಜ್ಯ ಪೊಲೀಸ್ ಘಟಕಗಳಿಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ” ಎಂದು ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: Operation Mahadev: ಹೋಗಿ ಮೋದಿಗೆ ಹೇಳು ಎಂದಿದ್ದ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಶಿಮ್ ಮೂಸಾ ಎನ್​ಕೌಂಟರ್

ನಕ್ಸಲೀಯರ ವಿರುದ್ಧ ಕಳೆದ ಕೆಲವು ತಿಂಗಳುಗಳಿಂದ ಭದ್ರತಾ ಪಡೆಗಳು ಅನೇಕ ಕಾರ್ಯಾಚರಣೆಗಳನ್ನು ನಡೆಸಿವೆ. 2026ರ ಮಾರ್ಚ್ 31ರೊಳಗೆ ನಕ್ಸಲ್ ಭಯೋತ್ಪಾದನೆಯನ್ನು ಕೊನೆಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಇದರ ನಡುವೆ, ನಾರಾಯಣಪುರ ಜಿಲ್ಲೆಯಲ್ಲಿ 16 ನಕ್ಸಲೀಯರು ಶರಣಾಗಿದ್ದಾರೆ.

“ನಕ್ಸಲ್ ನಾಯಕರು ನೀರು, ಅರಣ್ಯ ಮತ್ತು ಭೂಮಿ, ಸಮಾನತೆ ಮತ್ತು ನ್ಯಾಯವನ್ನು ರಕ್ಷಿಸುವ ಸುಳ್ಳು ಭರವಸೆಗಳೊಂದಿಗೆ ಸ್ಥಳೀಯರನ್ನು ದಾರಿ ತಪ್ಪಿಸುತ್ತಾರೆ. ಅವರ ಮೇಲೆ ಶೋಷಣೆ ಮಾಡುತ್ತಾರೆ. ಸ್ಥಳೀಯ ಕಾರ್ಯಕರ್ತರು ತೀವ್ರ ಶೋಷಣೆಯನ್ನು ಎದುರಿಸುತ್ತಿದ್ದಾರೆ ಮತ್ತು ಮಹಿಳಾ ಮಾವೋವಾದಿಗಳ ಸ್ಥಿತಿ ಇನ್ನೂ ಕೆಟ್ಟದಾಗಿದೆ” ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ರಾಬಿನ್ಸನ್ ಗುರಿಯಾ ಪಿಟಿಐಗೆ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ