AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢದಲ್ಲಿ ನಕ್ಸಲ್ ನಾಯಕ ಸೇರಿ 10 ನಕ್ಸಲರ ಎನ್​ಕೌಂಟರ್

ಛತ್ತಿಸ್ ಗಢದಲ್ಲಿ ಹಿರಿಯ ನಕ್ಸಲ್ ನಾಯಕ ಸೇರಿದಂತೆ 10 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯ ಮೈನ್​​ಪುರ ಬಳಿ ನಡೆದ ಪ್ರಮುಖ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್ ಮಾಡಲಾಗಿದೆ. ನಕ್ಸಲರ ಹಿರಿಯ ನಾಯಕ ಸೇರಿದಂತೆ 10 ನಕ್ಸಲರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಮೈನ್‌ಪುರ ಅರಣ್ಯ ಪ್ರದೇಶದಲ್ಲಿ ನಕ್ಸಲ್ ಉಪಸ್ಥಿತಿಯ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಲಾಗಿತ್ತು.

ಛತ್ತೀಸ್​ಗಢದಲ್ಲಿ ನಕ್ಸಲ್ ನಾಯಕ ಸೇರಿ 10 ನಕ್ಸಲರ ಎನ್​ಕೌಂಟರ್
Naxal Encounter
ಸುಷ್ಮಾ ಚಕ್ರೆ
|

Updated on: Sep 11, 2025 | 10:25 PM

Share

ರಾಯ್‌ಪುರ, ಸೆಪ್ಟೆಂಬರ್ 11: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹಿರಿಯ ಮಾವೋವಾದಿ ಕಮಾಂಡರ್ ಮೋಡೆಮ್ ಬಾಲಕೃಷ್ಣ ಅಲಿಯಾಸ್ ಮನೋಜ್ ಮತ್ತು ಇತರ 9 ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಕೌಂಟರ್ (Naxal encounter) ಇನ್ನೂ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.

ಈ ಎನ್‌ಕೌಂಟರ್ ಬಗ್ಗೆ ವಿವರ ನೀಡಿದ ರಾಯ್‌ಪುರ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಅಮರೇಶ್ ಮಿಶ್ರಾ, ಈ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಹೇಳಿದರು. “ವಿಶೇಷ ಕಾರ್ಯಪಡೆ (STF), CoBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ – CRPF ನ ಗಣ್ಯ ಘಟಕ) ಮತ್ತು ಇತರ ರಾಜ್ಯ ಪೊಲೀಸ್ ಘಟಕಗಳಿಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ” ಎಂದು ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: Operation Mahadev: ಹೋಗಿ ಮೋದಿಗೆ ಹೇಳು ಎಂದಿದ್ದ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಶಿಮ್ ಮೂಸಾ ಎನ್​ಕೌಂಟರ್

ನಕ್ಸಲೀಯರ ವಿರುದ್ಧ ಕಳೆದ ಕೆಲವು ತಿಂಗಳುಗಳಿಂದ ಭದ್ರತಾ ಪಡೆಗಳು ಅನೇಕ ಕಾರ್ಯಾಚರಣೆಗಳನ್ನು ನಡೆಸಿವೆ. 2026ರ ಮಾರ್ಚ್ 31ರೊಳಗೆ ನಕ್ಸಲ್ ಭಯೋತ್ಪಾದನೆಯನ್ನು ಕೊನೆಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಇದರ ನಡುವೆ, ನಾರಾಯಣಪುರ ಜಿಲ್ಲೆಯಲ್ಲಿ 16 ನಕ್ಸಲೀಯರು ಶರಣಾಗಿದ್ದಾರೆ.

“ನಕ್ಸಲ್ ನಾಯಕರು ನೀರು, ಅರಣ್ಯ ಮತ್ತು ಭೂಮಿ, ಸಮಾನತೆ ಮತ್ತು ನ್ಯಾಯವನ್ನು ರಕ್ಷಿಸುವ ಸುಳ್ಳು ಭರವಸೆಗಳೊಂದಿಗೆ ಸ್ಥಳೀಯರನ್ನು ದಾರಿ ತಪ್ಪಿಸುತ್ತಾರೆ. ಅವರ ಮೇಲೆ ಶೋಷಣೆ ಮಾಡುತ್ತಾರೆ. ಸ್ಥಳೀಯ ಕಾರ್ಯಕರ್ತರು ತೀವ್ರ ಶೋಷಣೆಯನ್ನು ಎದುರಿಸುತ್ತಿದ್ದಾರೆ ಮತ್ತು ಮಹಿಳಾ ಮಾವೋವಾದಿಗಳ ಸ್ಥಿತಿ ಇನ್ನೂ ಕೆಟ್ಟದಾಗಿದೆ” ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ರಾಬಿನ್ಸನ್ ಗುರಿಯಾ ಪಿಟಿಐಗೆ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ