AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naxals Attack: ಛತ್ತೀಸ್​ಗಢದಲ್ಲಿ ನಕ್ಸಲರಿಂದ ಎಸ್​ಯುವಿ ಕಾರು ಸ್ಫೋಟ; ಓರ್ವ ಸಾವು, 11 ಜನರಿಗೆ ಗಾಯ

Chhattisgarh Naxal Attack: ಛತ್ತೀಸ್​ಗಢದ ದಂತೇವಾಡದಲ್ಲಿ ಇಂದು ಮುಂಜಾನೆ ನಕ್ಸಲರು ಎಸ್​ಯುವಿ ಕಾರನ್ನು ಸ್ಫೋಟಿಸಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಇನ್ನೂ 11 ಜನರಿಗೆ ಗಂಭೀರವಾದ ಗಾಯಗಳಾಗಿವೆ.

Naxals Attack: ಛತ್ತೀಸ್​ಗಢದಲ್ಲಿ ನಕ್ಸಲರಿಂದ ಎಸ್​ಯುವಿ ಕಾರು ಸ್ಫೋಟ; ಓರ್ವ ಸಾವು, 11 ಜನರಿಗೆ ಗಾಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 05, 2021 | 1:40 PM

Share

ನವದೆಹಲಿ: ಛತ್ತೀಸ್​ಗಢದಲ್ಲಿ ನಕ್ಸಲರು ಮತ್ತೆ ಅಟ್ಟಹಾಸ ಮುಂದುವರೆಸಿದ್ದು, ದಂತೇವಾಡ ಜಿಲ್ಲೆಯಲ್ಲಿ ಎಸ್​ಯುವಿ ವಾಹನವೊಂದನ್ನು ಸ್ಫೋಟಿಸಿದ್ದಾರೆ. ಈ ದುರಂತದಲ್ಲಿ ಒಬ್ಬರು ಸಾವನ್ನಪ್ಪಿದ್ದು, 11 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಛತ್ತೀಸ್​ಗಢದ ದಂತೇವಾಡ ಜಿಲ್ಲೆಯ ರಸ್ತೆಯಲ್ಲಿ ಸ್ಫೋಟಕಗಳನ್ನು ಬಳಸಿ ಎಸ್​ಯುವಿ ವಾಹನವೊಂದನ್ನು ಸ್ಫೋಟಿಸಲಾಗಿದೆ. ಮಾಲೇವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 7.30ರ ವೇಳೆಗೆ ಈ ಘಟನೆ ನಡೆದಿದೆ. ನಾರಾಯಣಪುರದಿಂದ ದಂತೇವಾಡಕ್ಕೆ ರಸ್ತೆ ಮಾರ್ಗದ ಕಾಮಗಾರಿ ನಡೆಯುತ್ತಿತ್ತು. ಈ ಮಾರ್ಗದಲ್ಲಿಯೇ ಎಸ್​ಯುವಿ ಕಾರನ್ನು ಸ್ಫೋಟ ಮಾಡಲಾಗಿದೆ.

ಗಂಭೀರವಾಗಿ ಗಾಯಗೊಂಡ 11 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇತ್ತೀಚೆಗೆ ದಂತೇವಾಡದ ಸುತ್ತಮುತ್ತಲೂ ನಕ್ಸಲರ ಹಾವಳಿ ಹೆಚ್ಚಾಗಿದೆ. ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಕ್ಸಲರು ಈ ದಾಳಿ ನಡೆಸಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಭದ್ರತಾ ಸಿಬ್ಬಂದಿಯ ವಾಹನದ ಬದಲಾಗಿ ಸಾರ್ವಜನಿಕರ ಕಾರನ್ನು ಸ್ಫೋಟಿಸಿರುವ ಸಾಧ್ಯತೆಯಿದೆ.

ಸಾವನ್ನಪ್ಪಿರುವ ವ್ಯಕ್ತಿ ತಮ್ಮ ಊರಾದ ತೆಲಂಗಾಣಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಆ ವೇಳೆ ಅವರ ಕಾರು ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ 11 ಜನರಲ್ಲಿ ಮಹಿಳೆಯೂ ಸೇರಿದ್ದು ಇಬ್ಬರ ಪರಿಸ್ಥಿತಿ ತುಂಬ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Jammu Kashmir: ಕಾಶ್ಮೀರದ ಪೊಲೀಸರಿಂದ 10 ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿ ಬಿಡುಗಡೆ

Pulwama Encounter: ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಪುಲ್ವಾಮಾ ದಾಳಿಯ ಮೋಸ್ಟ್ ವಾಂಟೆಡ್ ಉಗ್ರನ ಹತ್ಯೆ

(Naxals Attack: 1 Killed 11 Injured as Naxal Blast SUV in Chhattisgarh Dantewada on Today Morning)

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ