AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naxals Attack: ಛತ್ತೀಸ್​ಗಢದಲ್ಲಿ ನಕ್ಸಲರಿಂದ ಎಸ್​ಯುವಿ ಕಾರು ಸ್ಫೋಟ; ಓರ್ವ ಸಾವು, 11 ಜನರಿಗೆ ಗಾಯ

Chhattisgarh Naxal Attack: ಛತ್ತೀಸ್​ಗಢದ ದಂತೇವಾಡದಲ್ಲಿ ಇಂದು ಮುಂಜಾನೆ ನಕ್ಸಲರು ಎಸ್​ಯುವಿ ಕಾರನ್ನು ಸ್ಫೋಟಿಸಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಇನ್ನೂ 11 ಜನರಿಗೆ ಗಂಭೀರವಾದ ಗಾಯಗಳಾಗಿವೆ.

Naxals Attack: ಛತ್ತೀಸ್​ಗಢದಲ್ಲಿ ನಕ್ಸಲರಿಂದ ಎಸ್​ಯುವಿ ಕಾರು ಸ್ಫೋಟ; ಓರ್ವ ಸಾವು, 11 ಜನರಿಗೆ ಗಾಯ
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 05, 2021 | 1:40 PM

Share

ನವದೆಹಲಿ: ಛತ್ತೀಸ್​ಗಢದಲ್ಲಿ ನಕ್ಸಲರು ಮತ್ತೆ ಅಟ್ಟಹಾಸ ಮುಂದುವರೆಸಿದ್ದು, ದಂತೇವಾಡ ಜಿಲ್ಲೆಯಲ್ಲಿ ಎಸ್​ಯುವಿ ವಾಹನವೊಂದನ್ನು ಸ್ಫೋಟಿಸಿದ್ದಾರೆ. ಈ ದುರಂತದಲ್ಲಿ ಒಬ್ಬರು ಸಾವನ್ನಪ್ಪಿದ್ದು, 11 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಛತ್ತೀಸ್​ಗಢದ ದಂತೇವಾಡ ಜಿಲ್ಲೆಯ ರಸ್ತೆಯಲ್ಲಿ ಸ್ಫೋಟಕಗಳನ್ನು ಬಳಸಿ ಎಸ್​ಯುವಿ ವಾಹನವೊಂದನ್ನು ಸ್ಫೋಟಿಸಲಾಗಿದೆ. ಮಾಲೇವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 7.30ರ ವೇಳೆಗೆ ಈ ಘಟನೆ ನಡೆದಿದೆ. ನಾರಾಯಣಪುರದಿಂದ ದಂತೇವಾಡಕ್ಕೆ ರಸ್ತೆ ಮಾರ್ಗದ ಕಾಮಗಾರಿ ನಡೆಯುತ್ತಿತ್ತು. ಈ ಮಾರ್ಗದಲ್ಲಿಯೇ ಎಸ್​ಯುವಿ ಕಾರನ್ನು ಸ್ಫೋಟ ಮಾಡಲಾಗಿದೆ.

ಗಂಭೀರವಾಗಿ ಗಾಯಗೊಂಡ 11 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇತ್ತೀಚೆಗೆ ದಂತೇವಾಡದ ಸುತ್ತಮುತ್ತಲೂ ನಕ್ಸಲರ ಹಾವಳಿ ಹೆಚ್ಚಾಗಿದೆ. ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಕ್ಸಲರು ಈ ದಾಳಿ ನಡೆಸಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಭದ್ರತಾ ಸಿಬ್ಬಂದಿಯ ವಾಹನದ ಬದಲಾಗಿ ಸಾರ್ವಜನಿಕರ ಕಾರನ್ನು ಸ್ಫೋಟಿಸಿರುವ ಸಾಧ್ಯತೆಯಿದೆ.

ಸಾವನ್ನಪ್ಪಿರುವ ವ್ಯಕ್ತಿ ತಮ್ಮ ಊರಾದ ತೆಲಂಗಾಣಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಆ ವೇಳೆ ಅವರ ಕಾರು ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ 11 ಜನರಲ್ಲಿ ಮಹಿಳೆಯೂ ಸೇರಿದ್ದು ಇಬ್ಬರ ಪರಿಸ್ಥಿತಿ ತುಂಬ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Jammu Kashmir: ಕಾಶ್ಮೀರದ ಪೊಲೀಸರಿಂದ 10 ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿ ಬಿಡುಗಡೆ

Pulwama Encounter: ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಪುಲ್ವಾಮಾ ದಾಳಿಯ ಮೋಸ್ಟ್ ವಾಂಟೆಡ್ ಉಗ್ರನ ಹತ್ಯೆ

(Naxals Attack: 1 Killed 11 Injured as Naxal Blast SUV in Chhattisgarh Dantewada on Today Morning)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ