AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ ಪಡೆಗಳ 2 ಡ್ರೋನ್​ ಹೊಡೆದುರುಳಿಸಿದ್ದಾಗಿ ಆಡಿಯೋ  ಬಿಡುಗಡೆ ಮಾಡಿದ ನಕ್ಸಲರು; ಅವರಲ್ಲಿ ಭಯ ಶುರುವಾಗಿದೆ ಎಂದ ಐಜಿ

ರಕ್ಷಣಾ ಪಡೆಗಳ ಡ್ರೋಣ್​ ವಿರುದ್ಧ ಏಪ್ರಿಲ್​ 19ರಂದು ನಾವು ಏರ್​​ಸ್ಟ್ರೈಕ್​ ಮಾಡಿದ್ದೇವೆ ಎಂದು ಹೇಳಿಕೊಂಡಿರುವ ನಕ್ಸಲರು, ಈ ಡ್ರೋಣ್​ಗಳನ್ನು ನಮ್ಮ ಮೇಲೆ ಅಟ್ಯಾಕ್​ ಮಾಡಲೆಂದೇ ಸಿದ್ಧಪಡಿಸಲಾಗಿತ್ತು ಎಂದು ಪ್ರತಿಪಾದಿಸಿದ್ದಾರೆ.

ರಕ್ಷಣಾ ಪಡೆಗಳ 2 ಡ್ರೋನ್​ ಹೊಡೆದುರುಳಿಸಿದ್ದಾಗಿ ಆಡಿಯೋ  ಬಿಡುಗಡೆ ಮಾಡಿದ ನಕ್ಸಲರು; ಅವರಲ್ಲಿ ಭಯ ಶುರುವಾಗಿದೆ ಎಂದ ಐಜಿ
ನಕ್ಸಲರು ಬಿಡುಗಡೆ ಮಾಡಿದ ಡ್ರೋನ್​ ಫೋಟೋ (ಕೃಪೆ-ಇಂಡಿಯಾ ಟುಡೆ)
Lakshmi Hegde
|

Updated on:Apr 22, 2021 | 4:52 PM

Share

ಚತ್ತೀಸ್​ಗಡ್​: ಇತ್ತೀಚೆಗಷ್ಟೇ 22 ಯೋಧರನ್ನು ಹತ್ಯೆ ಮಾಡಿದ್ದ ಚತ್ತೀಸ್​ಗಡ್​ ನಕ್ಸಲರು ಈಗೊಂದು ಹೇಳಿಕೆ ಬಿಡುಗಡೆ ಮಾಡಿದ್ದು, ತಾವು ರಕ್ಷಣಾ ಪಡೆಗೆ ಸೇರಿದ ಎರಡು ಡ್ರೋನ್​​ಗಳನ್ನು ಹೊಡೆದುರುಳಿಸಿದ್ದಾಗಿ ತಿಳಿಸಿದ್ದಾರೆ. ಅಲ್ಲದೆ, ಆ ಫೋಟೋವನ್ನೂ ಬಿಡುಗಡೆ ಮಾಡಿದ್ದಾರೆ. ತಾವು ಹೊಡೆದುರುಳಿಸಿದ್ದೇವೆ ಎಂದು ಹೇಳಿರುವ ಕ್ವಾಡ್​ಕಾಪ್ಟರ್​​ನ ಫೋಟೋದೊಂದಿಗೆ ಆಡಿಯೋ ಸಂದೇಶವನ್ನೊಂದನ್ನು ಬಿಡುಗಡೆ ಮಾಡಿರುವ ನಕ್ಸಲರ ದಂಡಕಾರಣ್ಯ ವಿಶೇಷ ವಲಯ ಸಮಿತಿ ಪೊಲೀಸರಿಗೆ, ರಕ್ಷಣಾ ಸಿಬ್ಬಂದಿಗೆ ಸವಾಲನ್ನೂ ಹಾಕಿದೆ.

ಬಾಂಬ್​ ಸ್ಫೋಟಿಸಿ ಡ್ರೋಣ್​​ನ್ನು ಕೆಡವಲಾಗಿದೆ. ಈ ಸ್ಥಳಕ್ಕೆ ಬಸ್ತಾರಾದ ಐಜಿ, ಪೊಲೀಸ್ ಸಿಬ್ಬಂದಿಯನ್ನು ಕಳಿಸಿ ಪರಿಶೀಲನೆ ಮಾಡಬೇಕು. ಅದು ರಕ್ಷಣಾ ಪಡೆಯ ಡ್ರೋನ್​​ ಹೌದೋ, ಅಲ್ಲವೋ ಎಂಬುದನ್ನು ದೃಢೀಕರಿಸಬೇಕು ಎಂದು ನಕ್ಸಲ್​ ಮುಖಂಡರು ಹೇಳಿದ್ದು ಆಡಿಯೋದಲ್ಲಿ ಕೇಳುತ್ತದೆ. ಇನ್ನು, ಕೇಂದ್ರೀಯ ಮತ್ತು ರಾಜ್ಯ ರಕ್ಷಣಾ ಪಡೆಗಳು ಜಂಟಿಯಾಗಿ ನಮ್ಮ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಈ ಪ್ರಯತ್ನದ ಭಾಗವಾಗಿ ಬಿಜಾಪುರ ಜಿಲ್ಲೆಯ ಎರಡು ಹಳ್ಳಿಗಳ ಸಮೀಪ ಬಾಂಬ್​ ಹಾಕಿವೆ ಎಂದು ನಕ್ಸಲರು ಹೇಳಿಕೊಂಡಿದ್ದಾರೆ. ಆದರೆ ಇದನ್ನು ಪೊಲೀಸ್ ಇಲಾಖೆ ಅಲ್ಲಗಳೆದಿದೆ.

ರಕ್ಷಣಾ ಪಡೆಗಳ ಡ್ರೋಣ್​ ವಿರುದ್ಧ ಏಪ್ರಿಲ್​ 19ರಂದು ನಾವು ಏರ್​​ಸ್ಟ್ರೈಕ್​ ಮಾಡಿದ್ದೇವೆ ಎಂದು ಹೇಳಿಕೊಂಡಿರುವ ನಕ್ಸಲರು, ಈ ಡ್ರೋಣ್​ಗಳನ್ನು ನಮ್ಮ ಮೇಲೆ ಅಟ್ಯಾಕ್​ ಮಾಡಲೆಂದೇ ಸಿದ್ಧಪಡಿಸಲಾಗಿತ್ತು ಎಂದು ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದರುವ ಬಸ್ತಾರ್​ ವಲಯದ ಐಜಿ ಸುಂದರ್ ರಾಜ್​ ಪಿ, ನಕ್ಸಲರು ಡ್ರೋಣ್​​ಗಳನ್ನು ಹೊಡೆದಿದ್ದೇವೆ ಎಂದು ಹೇಳುತ್ತಿರುವುದು ಸುಳ್ಳು. ಅವರಲ್ಲಿ ಭಯ ಕಾಡುತ್ತಿದೆ. ಹಾಗಾಗಿ ಇಂಥ ಹೇಳಿಕೆಗಳನ್ನು ಬಿಡುಗಡೆ ಮಾಡುತ್ತಿದ್ದಾರೆ ಎಂದಿದ್ದಾರೆ.

ನಕ್ಸಲಪೀಡಿತ ಚತ್ತೀಸ್​ಗಡ್​ದಲ್ಲಿ ಇದುವರೆಗೆ ನಕ್ಸಲರ ದಾಳಿಗೆ ಅದೆಷ್ಟೋ ಮುಗ್ಧ ಜೀವಗಳು ಬಲಿಯಾಗಿವೆ. ಪೊಲೀಸ್​ ಸಿಬ್ಬಂದಿ, ಯೋಧರ ಪ್ರಾಣ ಹೋಗಿದೆ. ಇತ್ತೀಚೆಗಷ್ಟೇ ಸುಕ್ಮಾದಲ್ಲಿ ನಡೆದ ಎನ್​​ಕೌಂಟರ್​​ನಲ್ಲಿ 22ಕ್ಕೂ ಹೆಚ್ಚು ಸಿಆರ್​ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.

ಇದನ್ನೂ ಓದಿ: ವೇಗವಾಗಿ ಆಕ್ಸಿಜನ್ ಪೂರೈಕೆ ಮಾಡುವಂತೆ ಉನ್ನತ ಮಟ್ಟದ ಸಭೆಯಲ್ಲಿ ಸೂಚನೆ ನೀಡಿದ ಪ್ರಧಾನಿ ಮೋದಿ

ಈ ಮೋದಿ ಸರ್ಕಾರ ಸರಿ ಇಲ್ಲ, ಕಾಮನ್​ ಮ್ಯಾನ್ ಜೀವನ ನೋಡಿ ಅಂತಾ ಸರ್ಕಾರದ ವಿರುದ್ಧ ಜನ ಕಿಡಿ

Naxals in Chhattisgarh claim that they shoot down police drones

Published On - 4:52 pm, Thu, 22 April 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ