AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಬ್ಬ ಡ್ರಗ್ ಸಪ್ಲೈಯರ್​ ಅರೆಸ್ಟ್​.. ಬಾಲಿವುಡ್​ ಗಣ್ಯರಿಗೆ ನಡುಕ ಶುರು

ಬಾಲಿವುಡ್​ ಡ್ರಗ್ಸ್ ಲಿಂಕ್​ ಸಂಬಂಧಪಟ್ಟಂತೆ ಎನ್​ಸಿಬಿ ಹಲವರನ್ನು ವಿಚಾರಣೆಗೆ ಒಳಪಡಿಸಿದೆ..ಬಂಧಿಸಿದೆ. ಈಗ ಬಂಧಿತನಾಗಿರುವ ರೆಗೆಲ್ ಕೂಡ ಬಾಲಿವುಡ್​ನ ಹಲವು ಗಣ್ಯರೊಂದಿಗೆ ಸಂಪರ್ಕದಲ್ಲಿದ್ದ ಎಂದು ತನಿಖಾ ದಳದ ಮೂಲಗಳು ತಿಳಿಸಿವೆ

ಮತ್ತೊಬ್ಬ ಡ್ರಗ್ ಸಪ್ಲೈಯರ್​ ಅರೆಸ್ಟ್​.. ಬಾಲಿವುಡ್​ ಗಣ್ಯರಿಗೆ ನಡುಕ ಶುರು
ಡ್ರಗ್ಸ್ ಪೆಡ್ಲರ್​ ರೆಗೆಲ್​ ಮಹಾಕಾಲ್​
Lakshmi Hegde
| Edited By: |

Updated on: Dec 09, 2020 | 3:59 PM

Share

ಮುಂಬೈ: ನಟ ಸುಶಾಂತ್​ ಸಿಂಗ್ ಸಾವಿನೊಂದಿಗೆ ತಳುಕು ಹಾಕಿಕೊಂಡಿರುವ ಡ್ರಗ್ಸ್ ಕೇಸ್​ಗೆ ಸಂಬಂಧಪಟ್ಟಂತೆ ಎನ್​ಸಿಬಿ ಮುಂಬೈನ ಐಷಾರಾಮಿ ಪ್ರದೇಶವಾದ ಅಂಧೇರಿ ಪಶ್ಚಿಮದಲ್ಲಿ ದಾಳಿ ನಡೆಸಿದ್ದು, ಸುಮಾರು 2.5 ಕೋಟಿ ರೂ.ಮೌಲ್ಯದ 5 ಕೆಜಿ ಹಶೀಶ್​ ಸೇರಿ ಹಲವು ವಿಧದ ಡ್ರಗ್ಸ್​ ವಶಪಡಿಸಿಕೊಂಡಿದೆ.

ಸುಶಾಂತ್ ಸಿಂಗ್​ ಮೃತಪಟ್ಟ ಬಳಿಕ ವಿವಿಧ ಆಯಾಮಗಳಲ್ಲಿ ತನಿಖೆ ಶುರುವಾಗಿತ್ತು. ಡ್ರಗ್ಸ್​ ಲಿಂಕ್​ಗೆ ಸಂಬಂಧಪಟ್ಟಂತೆ ತನಿಖೆ ಕೈಗೊಂಡಿದ್ದ ಎನ್​ಸಿಬಿ, ಹಲವು ಕಡೆಗಳಲ್ಲಿ ಈಗಾಗಲೇ ದಾಳಿ ನಡೆಸಿದೆ. ಈ ಬಾರಿ ಅಂಧೇರಿ ಪಶ್ಚಿಮದಲ್ಲಿ ರೇಡ್​ ಮಾಡಿದ್ದ ಎನ್​ಸಿಬಿ, ನಾಪತ್ತೆಯಾಗಿದ್ದ ಡ್ರಗ್ಸ್ ಪೆಡ್ಲರ್​ ರೆಗೆಲ್​ ಮಹಾಕಾಲ್​ ಎಂಬಾತನನ್ನು ಬಂಧಿಸಿದೆ. ಹಶಿಶ್​ ಜತೆಗೆ ಸ್ವಲ್ಪ ಪ್ರಮಾಣದಲ್ಲಿ ಎಂಡಿಎಂಎ ಮತ್ತು ಒಪಿಯಾಡ್​ಗಳನ್ನೂ ವಶಪಡಿಸಿಕೊಂಡಿದೆ.

2 ದಿನ NCB ಕಸ್ಟಡಿ​ಗೆ

ರೆಗೆಲ್ ಮಹಾಕಾಲ್​ನನ್ನು ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಆತನನ್ನು ಎರಡು ದಿನಗಳ ಎನ್​ಸಿಬಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ. ಆದರೆ ಈತ ರಿಯಾ ಚಕ್ರವರ್ತಿ ಮತ್ತು ಶೌವಿಕ್​​ನೊಂದಿಗೆ ಸಂಪರ್ಕದಲ್ಲಿದ್ದ ಬಗ್ಗೆ ಯಾವುದೇ ಮಾಹಿತಿಯನ್ನೂ ನಾವು ನೀಡುವುದಿಲ್ಲ ಎಂದು ಎನ್​ಸಿಬಿಯ ವಲಯ ನಿರ್ದೇಶಕ ಸಮೀರ್​ ವಾಂಖೆಡೆ ತಿಳಿಸಿದ್ದಾರೆ.

ಬಂಧಿತ ರೆಗೆಲ್​ ಮಹಾಕಾಲಾ ಇನ್ನೋರ್ವ ಆರೋಪಿ ಅನುಜ್ ಕೇಶ್ವಾನಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ. ಅನುಜ್ ಕೇಶ್ವಾನಿ, ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಮತ್ತು ಸುಶಾಂತ್​ಸಿಂಗ್ ರಜಪೂತ್​ಗೆ ಡ್ರಗ್ಸ್​ ನೀಡುತ್ತಿದ್ದ ಆರೋಪದಡಿ ಸೆಪ್ಟೆಂಬರ್​ನಲ್ಲಿಯೇ ಬಂಧಿತನಾಗಿದ್ದಾನೆ. ಇನ್ನು ರಿಯಾ ಮತ್ತು ಆಕೆಯ ಸಹೋದರ್​ ಶೌವಿಕ್​ರನ್ನು ಕೂಡ ಎನ್​ಸಿಬಿ ಬಂಧಿಸಿತ್ತು. ಅವರು ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಬಂದಿದ್ದಾರೆ.

ಬಾಲಿವುಡ್​ ಡ್ರಗ್ಸ್ ಲಿಂಕ್​ ಸಂಬಂಧಪಟ್ಟಂತೆ ಎನ್​ಸಿಬಿ ಹಲವರನ್ನು ವಿಚಾರಣೆಗೆ ಒಳಪಡಿಸಿದೆ..ಬಂಧಿಸಿದೆ. ಈಗ ಬಂಧಿತನಾಗಿರುವ ರೆಗೆಲ್ ಕೂಡ ಬಾಲಿವುಡ್​ನ ಹಲವು ಗಣ್ಯರೊಂದಿಗೆ ಸಂಪರ್ಕದಲ್ಲಿದ್ದ ಎಂದು ತನಿಖಾ ದಳದ ಮೂಲಗಳು ತಿಳಿಸಿವೆ. ಈತನಿಂದಾಗಿ ಇನ್ನಷ್ಟು ಜನರ ಸತ್ಯ ಹೊರಬೀಳುವ ಸಾಧ್ಯತೆ ಹೆಚ್ಚಾಗಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್