AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾ ಚಕ್ರವರ್ತಿ ಜಾಮೀನು ಪ್ರಕರಣ: ಎನ್​ಸಿಬಿ ಅರ್ಜಿಗೆ ಸುಪ್ರೀಂಕೋರ್ಟ್ ಅಸಮಾಧಾನ

Rhea Chakraborty Bail: ಷರತ್ತುಬದ್ಧ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ಮುಂಬೈ ಬಿಟ್ಟು ಹೊರಹೋಗುವಂತಿಲ್ಲಎಂದು ತಿಳಿಸಿತ್ತು.   1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್, ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ ಠಾಣೆಗೆ ಬಂದು ಹಾಜರಾತಿಗೆ ಸಹಿ ಮಾಡಬೇಕು. ಈ ಜಾಮೀನು ದೊರಕಿದ್ದರಿಂದ ಬರೋಬ್ಬರಿ 28 ದಿನಗಳ ನಂತರ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬಂದಿದ್ದರು.

ರಿಯಾ ಚಕ್ರವರ್ತಿ ಜಾಮೀನು ಪ್ರಕರಣ: ಎನ್​ಸಿಬಿ ಅರ್ಜಿಗೆ ಸುಪ್ರೀಂಕೋರ್ಟ್ ಅಸಮಾಧಾನ
ರಿಯಾ ಚಕ್ರವರ್ತಿ
guruganesh bhat
|

Updated on: Mar 18, 2021 | 7:02 PM

Share

ದೆಹಲಿ: ನಟಿ ರಿಯಾ ಚಕ್ರವರ್ತಿ ಜಾಮೀನು ರದ್ದು ಮಾಡುವಂತೆ ಮನವಿ ಮಾಡುತ್ತಿಲ್ಲ. ಬದಲಿಗೆ ಜಾಮೀನು ನೀಡಲು ನೀಡಿರುವ ಕಾರಣಗಳನ್ನು ತೆಗೆಯಬೇಕು ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಸುಪ್ರೀಂಕೋರ್ಟ್​ಗೆ ಮನವಿ ಮಾಡಿದೆ. ಎನ್​ಸಿಬಿಯ ಈ ಅರ್ಜಿಯ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್,​ ಹೈಕೋರ್ಟ್​ನ ಅಭಿಪ್ರಾಯವನ್ನು ಪ್ರಶ್ನಿಸಲು ಆಗುವುದಿಲ್ಲ. ಆದರೆ ಆದೇಶವನ್ನು ಪ್ರಶ್ನಿಸಬಹುದು. ಹೀಗಾಗಿ ಅರ್ಜಿಯನ್ನ ತಿದ್ದುಪಡಿ ಮಾಡಿ ಸಲ್ಲಿಸಿ ಎಂದು ಎನ್​ಸಿಬಿ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ‌ ಅವರಿಗೆ ಸೂಚಿಸಿದೆ. ಸುಶಾಂತ್ ಸಿಂಗ್ ರಜಪೂರ್ ಸಾವು ಕೊಲೆ ಅಲ್ಲ ಎಂದು ಪರಿಗಣಿಸಿ ಕೋರ್ಟ್ ಜಾಮೀನು ನೀಡಿತ್ತು. ಈ ಅಂಶದ ಆಧಾರದ ಮೇಲೆ ಜಾಮೀನು ನೀಡಿರುವದರಿಂದ ತನಿಖೆ ನಡೆಸಲು ಆಗದು ಎಂದು ಜಾಮೀನು ನೀಡಿರುವ ಕಾರಣ ತೆಗೆಯಬೇಕು ಎಂದು ಇಂದು ಎನ್​ಸಿಬಿ ಮನವಿ ಮಾಡಿದೆ. 

ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಜೈಲು ಪಾಲಾಗಿದ್ದ ಬಾಲಿವುಡ್ ನಟಿ ಹಾಗೂ ನಟ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್‌ ಅಕ್ಟೋಬರ್​ 7ರಂದು ಜಾಮೀನು ನೀಡಿತ್ತು. ಆದರೆ, ಇದಕ್ಕೆ ಕೇಂದ್ರ ಸರ್ಕಾರ​ ಅಪಸ್ವರ ತೆಗೆದಿತ್ತು. ರಿಯಾ ಜಾಮೀನನ್ನು ರದ್ದು ಮಾಡಬೇಕು ಎಂದು ಸುಪ್ರೀಂಕೋರ್ಟ್​ ಬಳಿ ಕೇಂದ್ರ ಸರ್ಕಾರ ಮನವಿ ಮಾಡಿತ್ತು.

ಷರತ್ತುಬದ್ಧ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ಮುಂಬೈ ಬಿಟ್ಟು ಹೊರಹೋಗುವಂತಿಲ್ಲಎಂದು ತಿಳಿಸಿತ್ತು.  1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್, ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ ಠಾಣೆಗೆ ಬಂದು ಹಾಜರಾತಿಗೆ ಸಹಿ ಮಾಡಬೇಕು. ಈ ಜಾಮೀನು ದೊರಕಿದ್ದರಿಂದ ಬರೋಬ್ಬರಿ 28 ದಿನಗಳ ನಂತರ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬಂದಿದ್ದರು. ಪಾಸ್ ಪೋರ್ಟ್ ಹಸ್ತಾಂತರಿಸಬೇಕು, ನ್ಯಾಯಾಲಯದ ಅನುಮತಿಯಿಲ್ಲದೆ ವಿದೇಶಕ್ಕೆ ಪ್ರಯಾಣಿಸಬಾರದು ಮತ್ತು ಮುಂಬೈ ತೊರೆಯಬೇಕಾದರೆ ತನಿಖಾಧಿಕಾರಿಗೆ ತಿಳಿಸಬೇಕು ಎಂದು ನ್ಯಾಯಾಲಯ ಹೇಳಿತ್ತು. ಆದರೆ,  ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಜಾಮೀನು ಅರ್ಜಿ ವಜಾಗೊಂಡಿತ್ತು.

ಇದನ್ನೂ ಓದಿ: Google Search | ಗೂಗಲ್​ನಲ್ಲಿ ಈ ವರ್ಷ ಹೆಚ್ಚು ಜನರು ಹುಡುಕಿದ್ದೇನು?

ಇದನ್ನೂ ಓದಿ: ವಿಶ್ಲೇಷಣೆ | ಅರ್ನಬ್ ವಾಟ್ಸ್​ಆ್ಯಪ್ ಚಾಟ್ ಲೀಕ್; ಏನು ಉದ್ದೇಶ? ಯಾರಿಗೆ ಲಾಭ?

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ