AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್ ಖಾನ್ ಆರೋಪಿಯಾಗಿರುವ ಕ್ರೂಸ್​ ರೇವ್ ಪಾರ್ಟಿ ತನಿಖೆ ಸಮೀರ್ ವಾಂಖೆಡೆಯಿಂದಲೇ ಮುಂದುವರಿಕೆ: ಎನ್​ಸಿಬಿ

ವಾಂಖಡೆ ಅಕ್ರಮ ನಡೆಸಿದ್ದಾರೆ ಎಂಬ ಬಗ್ಗೆ ಗಮನಾರ್ಹ ಮತ್ತು ವಿಶ್ವಾಸಾರ್ಹ ದಾಖಲೆಗಳು ಲಭ್ಯವಾಗುವವರೆಗೂ ಈ ಪ್ರಕರಣದ ತನಿಖೆಯನ್ನು ಅವರೇ ನಿರ್ವಹಿಸಲಿದ್ದಾರೆ ಎಂದು ಎನ್​ಸಿಬಿ ತಿಳಿಸಿದೆ.

ಆರ್ಯನ್ ಖಾನ್ ಆರೋಪಿಯಾಗಿರುವ ಕ್ರೂಸ್​ ರೇವ್ ಪಾರ್ಟಿ ತನಿಖೆ ಸಮೀರ್ ವಾಂಖೆಡೆಯಿಂದಲೇ ಮುಂದುವರಿಕೆ: ಎನ್​ಸಿಬಿ
ಎನ್​ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮತ್ತು ಡ್ರಗ್ಸ್​​ ಪ್ರಕರಣದ ಆರೋಪಿ ಆರ್ಯನ್ ಖಾನ್
TV9 Web
| Edited By: |

Updated on:Oct 27, 2021 | 8:56 PM

Share

ದೆಹಲಿ: ಕ್ರೂಸ್ ರೇವ್ ಪಾರ್ಟಿ ಪ್ರಕರಣದ ತನಿಖೆಯನ್ನು ಮಾದಕ ವಸ್ತು ನಿಯಂತ್ರಣ ದಳದ (Narcotics Control Bureau – NCB) ಮುಂಬೈ ವಲಯದ ಮುಖ್ಯಸ್ಥರಾದ ಸಮೀರ್ ವಾಂಖೆಡೆಯೇ ಮುಂದುವರಿಸಲಿದ್ದಾರೆ ಎಂದು ಎನ್​ಸಿಬಿಯ ಮಹಾನಿರ್ದೇಶಕ ಜ್ಞಾನೇಶ್ವರ ಸಿಂಗ್ ಬುಧವಾರ ಸ್ಪಷ್ಟಪಡಿಸಿದ್ದಾರೆ. ವಾಂಖಡೆ ಅಕ್ರಮ ನಡೆಸಿದ್ದಾರೆ ಎಂಬ ಬಗ್ಗೆ ಗಮನಾರ್ಹ ಮತ್ತು ವಿಶ್ವಾಸಾರ್ಹ ದಾಖಲೆಗಳು ಲಭ್ಯವಾಗುವವರೆಗೂ ಈ ಪ್ರಕರಣದ ತನಿಖೆಯನ್ನು ಅವರೇ ನಿರ್ವಹಿಸಲಿದ್ದಾರೆ ಎಂದು ಎನ್​ಸಿಬಿ ತಿಳಿಸಿದೆ.

ವಾಂಖಡೆ ವಿರುದ್ಧ ಕೇಳಿ ಬಂದಿರುವ ಆರೋಪಗಳ ಬಗ್ಗೆ ತನಿಖೆ ನಡೆಸಲು ಎನ್​ಸಿಬಿ ಜಾಗೃತ ದಳದ ಐವರು ಸದಸ್ಯರ ತಂಡ ಮುಂಬೈಗೆ ಬುಧವಾರ ತಲುಪಿದ್ದು, ಎನ್​ಸಿಬಿಯ ಮುಂಬೈ ಕಚೇರಿಯಿಂದ ಹಲವು ದಾಖಲೆಗಳು ಮತ್ತು ರೆಕಾರ್ಡಿಂಗ್​ಗಳನ್ನು ಸಂಗ್ರಹಿಸಿದೆ. ವಾಂಖೆಡೆ ಅವರ ಹೇಳಿಕೆಯನ್ನೂ ದಾಖಲಿಸಿಕೊಳ್ಳಲಾಗಿದೆ. ಇದೊಂದು ಸೂಕ್ಷ್ಮ ವಿಚಾರವಾಗಿದ್ದು ಎಲ್ಲ ವಿಚಾರಗಳನ್ನೂ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲು ಆಗುವುದಿಲ್ಲ ಎಂದು ಜ್ಞಾನೇಶ್ವರ ಸಿಂಗ್ ಹೇಳಿದ್ದಾರೆ.

ಮಾದಕ ವಸ್ತು ದಾಸ್ತಾನು, ಸೇವನೆಗೆ ಸಂಬಂಧಿಸಿದಂತೆ ಖ್ಯಾನ ನಟ ಶಾರೂಖ್​ ಖಾನ್ ಮಗ ಆರ್ಯನ್ ಖಾನ್ ವಿರುದ್ಧ ನಡೆಯುತ್ತಿರುವ ವಿಚಾರಣೆ ಇಡೀ ದೇಶದ ಗಮನ ಸೆಳೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನಿಂದ ಖಾಲಿ ಹಾಳೆಯ ಮೇಲೆ ಸಹಿ ಹಾಕಿಸಿಕೊಳ್ಳಲಾಯಿತು ಎಂದು ಪ್ರಭಾಕರ್ ಸೈಲ್ ಎನ್ನುವವರು ಆರೋಪ ಮಾಡಿದ್ದರು. ಎನ್​ಸಿಬಿಯ ಕೆಲ ಅಧಿಕಾರಿಗಳು ₹ 25 ಕೋಟಿ ಲಂಚ ಪಡೆಯಲು ಬೇಡಿಕೆಯಿಟ್ಟಿದ್ದರು. ಇದರಲ್ಲಿ ಒಂದಿಷ್ಟು ಮೊತ್ತವನ್ನು ವಾಂಖೆಡೆ ಪಡೆದುಕೊಳ್ಳಲು ಉದ್ದೇಶಿಸಿದ್ದರು. ಅವರು ಪರಸ್ಪರ ಮಾತಾಡಿಕೊಳ್ಳುತ್ತಿದ್ದಾಗ ಈ ವಿಚಾರ ನನ್ನ ಕಿವಿಗೆ ಬಿದ್ದಿತ್ತು ಎಂದು ಪ್ರಭಾಕರ್ ಸೈಲ್ ಹೇಳಿದ್ದರು.

ತನಿಖಾ ತಂಡದ ಪ್ರತಿಕ್ರಿಯೆ ಹೈಪ್ರೊಫೈಲ್ ಡ್ರಗ್ಸ್ ಪಾರ್ಟಿ ಮೇಲೆ ಎನ್‌ಸಿಬಿ ದಾಳಿ ಪ್ರಕರಣದ ತನಿಖಾಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಕೇಳಿ ಬಂದಿರುವ ಆರೋಪಗಳ ಬಗ್ಗೆ ವಾಂಖೆಡೆ​ ಹೇಳಿಕೆ ಪಡೆದಿದ್ದೇವೆ ಎಂದು ಎನ್​ಸಿಬಿ ಜಾಗೃತ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಕಾಲ ಹೇಳಿಕೆ ದಾಖಲಿಸಿದ್ದೇವೆ. ವಿಚಾರಣೆ ವೇಳೆ ಸಮೀರ್ ಹಲವಾರು ಮಾಹಿತಿ ಬಿಚ್ಚಿಟ್ಟಿದ್ದಾರೆ. ಅಗತ್ಯಬಿದ್ದರೆ ಸಮೀರ್​​​ರನ್ನು ಮತ್ತೆ ವಿಚಾರಣೆಗೆ ಕರೆಯಲಾಗುತ್ತದೆ ಎಂದು ಎನ್​ಸಿಬಿ ಡಿಡಿಜಿ ಜ್ಞಾನೇಶ್ವರ ಸಿಂಗ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Ananya Pandey: ಆರ್ಯನ್ ಖಾನ್ ಬಂಧನ ಪ್ರಕರಣ; ಎನ್​ಸಿಬಿ ವಿಚಾರಣೆ ವೇಳೆ ಭಯಗೊಂಡು ಕಣ್ಣೀರಿಟ್ಟಿದ್ದ ಅನನ್ಯಾ ಪಾಂಡೆ ಇದನ್ನೂ ಓದಿ: ಸಮೀರ್ ವಾಂಖೆಡೆ ವಾಟ್ಸಪ್ ಚಾಟ್ ಪರಿಶೀಲಿಸಿದರೆ ನಕಲಿ ಎನ್​ಸಿಬಿ ಕೇಸ್ ಪತ್ತೆಯಾಗುತ್ತದೆ: ನವಾಬ್ ಮಲ್ಲಿಕ್

Published On - 8:21 pm, Wed, 27 October 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು