AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಇನ್ನೂ ಮುಗಿದಿಲ್ಲ ಆಟ: ಪಿಕ್ಚರ್​ ಅಭೀ ಬಾಕಿ ಹೈ!

ಮುಂಬೈ: ನಿನ್ನೆ ರಾತ್ರಿ ಬಿಜೆಪಿ ಹೈಕಮಾಂಡ್​ ನಡೆಸಿರುವ ಸರ್ಜಿಕಲ್​ ಸ್ಟ್ರೈಕ್​ ನಿಂದ ಎನ್​ಸಿಪಿ- ಶಿವಸೇನೆ ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದಿದೆ. ಈ ಮಧ್ಯೆ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ದೇವೇಂದ್ರ ಫಡ್ನವೀಸ್ ಅವ್ರು ಎನ್‌ಸಿಪಿ ಶಾಸಕರ ಬೆಂಬಲವಿರುವ ಸಹಿಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ. ಶರದ್ ಪವಾರ್​ ಫ್ಯಾಮಿಲಿ, ಪಕ್ಷ ಇಬ್ಭಾಗ, ಶಾಸಕರ ಉಚ್ಛಾಟನೆಯಾದ್ರೆ ಮುಂದೇನು? ಆದ್ರೆ ಅತ್ತ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ ಕೆಂಡಾಮಂಡಲಗೊಂಡಿದ್ದಾರೆ. ಹೊಸ ಸರ್ಕಾರಕ್ಕೆ ಸುತರಾಂ ಸಮ್ಮತಿಯಿಲ್ಲ ಎಂದು ಕಿಡಿಕಾರಿದ್ದಾರೆ. ಜೊತೆಗೆ, ಶಿವಸೇನೆ ಮತ್ತು ಕಾಂಗ್ರೆಸ್​ ಜೊತೆಗೂಡಿ ಸರ್ಕಾರ […]

ಮಹಾರಾಷ್ಟ್ರದಲ್ಲಿ ಇನ್ನೂ ಮುಗಿದಿಲ್ಲ ಆಟ: ಪಿಕ್ಚರ್​ ಅಭೀ ಬಾಕಿ ಹೈ!
ಶರದ್ ಪವಾರ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on: Nov 23, 2019 | 11:26 AM

Share

ಮುಂಬೈ: ನಿನ್ನೆ ರಾತ್ರಿ ಬಿಜೆಪಿ ಹೈಕಮಾಂಡ್​ ನಡೆಸಿರುವ ಸರ್ಜಿಕಲ್​ ಸ್ಟ್ರೈಕ್​ ನಿಂದ ಎನ್​ಸಿಪಿ- ಶಿವಸೇನೆ ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದಿದೆ. ಈ ಮಧ್ಯೆ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ದೇವೇಂದ್ರ ಫಡ್ನವೀಸ್ ಅವ್ರು ಎನ್‌ಸಿಪಿ ಶಾಸಕರ ಬೆಂಬಲವಿರುವ ಸಹಿಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ.

ಶರದ್ ಪವಾರ್​ ಫ್ಯಾಮಿಲಿ, ಪಕ್ಷ ಇಬ್ಭಾಗ, ಶಾಸಕರ ಉಚ್ಛಾಟನೆಯಾದ್ರೆ ಮುಂದೇನು? ಆದ್ರೆ ಅತ್ತ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ ಕೆಂಡಾಮಂಡಲಗೊಂಡಿದ್ದಾರೆ. ಹೊಸ ಸರ್ಕಾರಕ್ಕೆ ಸುತರಾಂ ಸಮ್ಮತಿಯಿಲ್ಲ ಎಂದು ಕಿಡಿಕಾರಿದ್ದಾರೆ. ಜೊತೆಗೆ, ಶಿವಸೇನೆ ಮತ್ತು ಕಾಂಗ್ರೆಸ್​ ಜೊತೆಗೂಡಿ ಸರ್ಕಾರ ರಚಿಸುವ ಈ ಹಿಂದಿನ ತೀರ್ಮಾನಕ್ಕೆ ವಿರುದ್ಧವಾಗಿ ಎನ್‌ಸಿಪಿ ಶಾಸಕರೇನಾದ್ರೂ ಬಿಜೆಪಿಗೆ ಬೆಂಬಲ ನೀಡಿದರೆ ಅಂತಹವರನ್ನು ಪಕ್ಷದಿಂದ ಉಚ್ಛಾಟಿಸುವ ಅಸ್ತ್ರ ಝಳಪಿಸಿದ್ದಾರೆ, ಶರದ್ ಪವಾರ್‌.

ಹಾಗಾಗಿ ಇಂದು ಸಂಜೆ 4.30ಕ್ಕೆ ಎನ್‌ಸಿಪಿ ಶಾಸಕರ ತುರ್ತು ಸಭೆ ಕರೆದಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯ ನಂತರ ಇಂದು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಅಜಿತ್ ಪವಾರ್‌ ಅವರನ್ನ ಉಚ್ಚಾಟನೆ ಮಾಡುವ ಸಾಧ್ಯತೆಯಿದೆ.

ಅದಕ್ಕೂ ಮೊದಲು ಇನ್ನೇನು ಕೆಲವೇ ಕ್ಷಣಗಳಲ್ಲಿ ಶರದ್ ಪವಾರ್‌ ಮತ್ತು ಶಿವ ಸೇನೆ ಮುಖ್ಯಸ್ಥ ಉದ್ಧವ್​ ಠಾಕ್ರೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಅದರಲ್ಲಿ ಪಕ್ಷದ ನಿಲುವುಗಳನ್ನು ಸ್ಪಷ್ಟಪಡಿಸುವ ಸಾಧ್ಯತೆಯಿದೆ. ಇದೇ ವೇಳೆ, ಕಾಂಗ್ರೆಸ್​ ಸಹ ತುರ್ತು ಸಭೆ ಕರೆದಿದ್ದು, ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್​ ಅವರನ್ನು ಸಭೆಯಲ್ಲಿ ಹಾಜರಿರುವಂತೆ ಸೂಚಿಸಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!