AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NCP ಅಧ್ಯಕ್ಷ ಶರದ್ ಪವಾರ್​ಗೆ 80ರ ಸಂಭ್ರಮ; ಹಿರಿಯ ನಾಯಕನಿಗೆ ಅದೃಷ್ಟ ತರಲಿದೆಯಾ ಈ ಬರ್ತ್​ ಡೇ?

ಇಂದು (ಡಿ.12) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಶರದ್​ ಪವಾರ್​​ಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ದೇವರು ಶರದ್​ ಪವಾರ್ ಅವರಿಗೆ ಆಯುರಾರೋಗ್ಯ ನೀಡಿ, ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ.

NCP ಅಧ್ಯಕ್ಷ ಶರದ್ ಪವಾರ್​ಗೆ 80ರ ಸಂಭ್ರಮ; ಹಿರಿಯ ನಾಯಕನಿಗೆ ಅದೃಷ್ಟ ತರಲಿದೆಯಾ ಈ ಬರ್ತ್​ ಡೇ?
ಶರದ್​ ಪವಾರ್​
Lakshmi Hegde
|

Updated on:Dec 12, 2020 | 10:49 AM

Share

ನವದೆಹಲಿ: ಎನ್​ಸಿಪಿ ಅಧ್ಯಕ್ಷ ಶರದ್ ಪವಾರ್​ಗೆ ಇಂದು 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಇದೊಂದು ವಿಶೇಷವಾದರೆ, ಇನ್ನೊಂದು ವಿಶೇಷ ಕಾರಣಕ್ಕೆ ಅವರು ಕಳೆದ ಎರಡು ದಿನಗಳಿಂದ ಸುದ್ದಿಯಲ್ಲಿದ್ದಾರೆ.

ಯುಪಿಎ ಮೈತ್ರಿಕೂಟದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿರಾಕರಿಸಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಶರದ್ ಪವಾರ್ ಏರಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳಿಬರುತ್ತಿದೆ. ಹೊಸ ಅಧ್ಯಕ್ಷ ಸ್ಥಾನಕ್ಕೆ ಮುಂದಿನ ವರ್ಷ ಆರಂಭದಲ್ಲೇ ಚುನಾವಣೆ ನಡೆಯಲಿದ್ದು, ಈಗಾಗಲೇ ಅನೇಕ ನಾಯಕರು ಶರದ್ ಪವಾರ್​ ಬಗ್ಗೆ ಒಲವು ತೋರಿಸುತ್ತಿದ್ದಾರೆ ಎನ್ನಲಾಗಿದೆ.

ಹಿಂದೆ ಕಾಂಗ್ರೆಸ್​ನಲ್ಲೇ ಇದ್ದ ಶರದ್​ ಪವಾರ್ ಅವರು ಸೋನಿಯಾ ಗಾಂಧಿ ವಿರುದ್ಧವೇ ತೊಡೆತಟ್ಟಿ, ಪ್ರತ್ಯೇಕ ಪಕ್ಷ ಕಟ್ಟಿದವರು. ಮಾಜಿ ಕೇಂದ್ರ ಸಚಿವ, ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸಿ, ರಾಜಕೀಯದಲ್ಲಿ ಅಪಾರ ಅನುಭವ ಹೊಂದಿರುವವರು.

ಇದೀಗ ಮತ್ತೆ ತಮ್ಮ ಪಕ್ಷವನ್ನು ಕಾಂಗ್ರೆಸ್​ ಜತೆ ಸಂಪೂರ್ಣ ವಿಲೀನ ಮಾಡಿ, ಯುಪಿಎ ಮೈತ್ರಿಕೂಟದ ಅಧ್ಯಕ್ಷರಾಗುತ್ತಾರಾ ಎಂಬುದೇ ಪ್ರಶ್ನೆ. ಅದರಲ್ಲೂ 80ನೇ ವರ್ಷದಲ್ಲಿ ಈ ಮಹತ್ತರ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧರಾಗಿದ್ದಾರಾ ಎಂಬ ಕುತೂಹಲಕ್ಕೆ ಶೀಘ್ರವೇ ತೆರೆಬೀಳಲಿದೆ.

ಪ್ರಧಾನಿ ಮೋದಿ ವಿಶ್​ ಇಂದು (ಡಿ. 12) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಶರದ್​ ಪವಾರ್​​ಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ದೇವರು ಶರದ್​ ಪವಾರ್ ಅವರಿಗೆ ಆಯುರಾರೋಗ್ಯ ನೀಡಿ, ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ.

ಯುಪಿಎ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ನಂತರ ಶರದ್ ಪವಾರ್ ಆಯ್ಕೆ ಸಾಧ್ಯತೆ

Published On - 10:46 am, Sat, 12 December 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?