AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಒಂದು ತಾಸು ಮಾತುಕತೆ ನಡೆಸಿದ ಶರದ್​ ಪವಾರ್​..

ರಾಜ್ಯಸಭೆ ಸದಸ್ಯರೂ ಆಗಿರುವ ಶರದ್​ ಪವಾರ್​, 2022ರಲ್ಲಿ ನಡೆಯಲಿರುವ ರಾಷ್ಟ್ರಪತಿ ಆಯ್ಕೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪರ ಅಭ್ಯರ್ಥಿ ಎಂಬ ಊಹೆಯೊಂದು ಎದ್ದಿದೆ. ಆದರೆ ಶರದ್​ ಪವಾರ್ ಆ ವರದಿಯನ್ನು ಅಲ್ಲಗಳೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಒಂದು ತಾಸು ಮಾತುಕತೆ ನಡೆಸಿದ ಶರದ್​ ಪವಾರ್​..
ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಎನ್​ಸಿಪಿ ಮುಖ್ಯಸ್ಥ
TV9 Web
| Updated By: Lakshmi Hegde|

Updated on: Jul 17, 2021 | 1:31 PM

Share

ಇನ್ನೇನು ಎರಡು ದಿನಗಳಲ್ಲಿ ಪ್ರಾರಂಭವಾಗಲಿರುವಸಂಸತ್ತಿನ ಮುಂಗಾರು ಅಧಿವೇಶನ (Monsoon session of Parliament) ಬೆನ್ನಲ್ಲೇ ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್ (Sharad Pawar) ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಯವರನ್ನು ಭೇಟಿಯಾಗಿದ್ದಾರೆ ಇವರಿಬ್ಬರ ಭೇಟಿಯ ಫೋಟೋವನ್ನು ಪ್ರಧಾನಿ ಕಚೇರಿ (PMO) ಯೂ ಸಹ ಹಂಚಿಕೊಂಡಿದೆ. ಪ್ರಧಾನಿ ಮೋದಿ ಮತ್ತು ಶರದ್​ ಪವಾರ್​ ನಡುವೆ ಸುಮಾರು ಒಂದು ತಾಸುಗಳ ಚರ್ಚೆ ನಡೆದಿದೆ ಎಂದೂ ಮೂಲಗಳು ತಿಳಿಸಿವೆ.

ಎನ್​ಸಿಪಿ, ಮಹಾರಾಷ್ಟ್ರದ ಮೈತ್ರಿ ಸರ್ಕಾರದ ಒಂದು ಪಕ್ಷವಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ಗುರುವಾರ ಶರದ್​ ಪವಾರ್​​ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರನ್ನು ಭೇಟಿ ಮಾಡಿ, ಸಭೆ ನಡೆಸಿದ್ದರು. ಈ ಮಧ್ಯೆ ಕಾಂಗ್ರೆಸ್​​ನ ನಾನಾ ಪಟೋಲೆ ಪದೇಪದೆ ಮೈತ್ರಿಗೆ ಮುಳ್ಳಾಗುವ ಮಾತುಗಳನ್ನು ಆಡುತ್ತಿದ್ದಾರೆ. ಮುಂದಿನ ಯಾವ ಚುನಾವಣೆಯಲ್ಲೂ ಕಾಂಗ್ರೆಸ್​ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ನಾನೂ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ. ಇದನ್ನೆಲ್ಲ ಚರ್ಚಿಸುವ ಸಂಬಂಧ ಹಿರಿಯ ನಾಯಕ ಶರದ್​ ಪವಾರ್ ಮಹಾ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದರು.

ರಾಜ್ಯಸಭೆ ಸದಸ್ಯರೂ ಆಗಿರುವ ಶರದ್​ ಪವಾರ್​, 2022ರಲ್ಲಿ ನಡೆಯಲಿರುವ ರಾಷ್ಟ್ರಪತಿ ಆಯ್ಕೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪರ ಅಭ್ಯರ್ಥಿ ಎಂಬ ಊಹೆಯೊಂದು ಎದ್ದಿದೆ. ಆದರೆ ಶರದ್​ ಪವಾರ್ ಆ ವರದಿಯನ್ನು ಅಲ್ಲಗಳೆದಿದ್ದಾರೆ. ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್​ ಇತ್ತೀಚೆಗೆ ಶರದ್​ ಪವಾರ್​ ಹಾಗೂ ಕಾಂಗ್ರೆಸ್​ ನಾಯಕರಾದ ಸೋನಿಯಾ ಗಾಂಧಿ, ರಾಹುಲ್​ ಗಾಂಧಿಯವರೊಟ್ಟಿಗೆ ಹಲವು ಸುತ್ತಿನ ಸಭೆ ನಡೆಸಿದ ಬೆನ್ನಲ್ಲೇ ಇಂಥದ್ದೊಂದು ಮಾತು ಕೇಳಿಬಂದಿತ್ತು.

ಇದನ್ನೂ ಓದಿ: Bihar Hooch Tragedy: ಬಿಹಾರದಲ್ಲಿ 16 ಜನರ ನಿಗೂಢ ಸಾವು; ದುರಂತದ ಹಿಂದೆ ಕಳ್ಳಭಟ್ಟಿ ದಂಧೆಯ ಕೈವಾಡದ ಶಂಕೆ

NCP chief Sharad Pawar meets PM Narendra Modi Amid of monsoon session of Parliament

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?