AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಒಂದು ತಾಸು ಮಾತುಕತೆ ನಡೆಸಿದ ಶರದ್​ ಪವಾರ್​..

ರಾಜ್ಯಸಭೆ ಸದಸ್ಯರೂ ಆಗಿರುವ ಶರದ್​ ಪವಾರ್​, 2022ರಲ್ಲಿ ನಡೆಯಲಿರುವ ರಾಷ್ಟ್ರಪತಿ ಆಯ್ಕೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪರ ಅಭ್ಯರ್ಥಿ ಎಂಬ ಊಹೆಯೊಂದು ಎದ್ದಿದೆ. ಆದರೆ ಶರದ್​ ಪವಾರ್ ಆ ವರದಿಯನ್ನು ಅಲ್ಲಗಳೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಒಂದು ತಾಸು ಮಾತುಕತೆ ನಡೆಸಿದ ಶರದ್​ ಪವಾರ್​..
ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಎನ್​ಸಿಪಿ ಮುಖ್ಯಸ್ಥ
TV9 Web
| Edited By: |

Updated on: Jul 17, 2021 | 1:31 PM

Share

ಇನ್ನೇನು ಎರಡು ದಿನಗಳಲ್ಲಿ ಪ್ರಾರಂಭವಾಗಲಿರುವಸಂಸತ್ತಿನ ಮುಂಗಾರು ಅಧಿವೇಶನ (Monsoon session of Parliament) ಬೆನ್ನಲ್ಲೇ ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್ (Sharad Pawar) ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಯವರನ್ನು ಭೇಟಿಯಾಗಿದ್ದಾರೆ ಇವರಿಬ್ಬರ ಭೇಟಿಯ ಫೋಟೋವನ್ನು ಪ್ರಧಾನಿ ಕಚೇರಿ (PMO) ಯೂ ಸಹ ಹಂಚಿಕೊಂಡಿದೆ. ಪ್ರಧಾನಿ ಮೋದಿ ಮತ್ತು ಶರದ್​ ಪವಾರ್​ ನಡುವೆ ಸುಮಾರು ಒಂದು ತಾಸುಗಳ ಚರ್ಚೆ ನಡೆದಿದೆ ಎಂದೂ ಮೂಲಗಳು ತಿಳಿಸಿವೆ.

ಎನ್​ಸಿಪಿ, ಮಹಾರಾಷ್ಟ್ರದ ಮೈತ್ರಿ ಸರ್ಕಾರದ ಒಂದು ಪಕ್ಷವಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ಗುರುವಾರ ಶರದ್​ ಪವಾರ್​​ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರನ್ನು ಭೇಟಿ ಮಾಡಿ, ಸಭೆ ನಡೆಸಿದ್ದರು. ಈ ಮಧ್ಯೆ ಕಾಂಗ್ರೆಸ್​​ನ ನಾನಾ ಪಟೋಲೆ ಪದೇಪದೆ ಮೈತ್ರಿಗೆ ಮುಳ್ಳಾಗುವ ಮಾತುಗಳನ್ನು ಆಡುತ್ತಿದ್ದಾರೆ. ಮುಂದಿನ ಯಾವ ಚುನಾವಣೆಯಲ್ಲೂ ಕಾಂಗ್ರೆಸ್​ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ನಾನೂ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ. ಇದನ್ನೆಲ್ಲ ಚರ್ಚಿಸುವ ಸಂಬಂಧ ಹಿರಿಯ ನಾಯಕ ಶರದ್​ ಪವಾರ್ ಮಹಾ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದರು.

ರಾಜ್ಯಸಭೆ ಸದಸ್ಯರೂ ಆಗಿರುವ ಶರದ್​ ಪವಾರ್​, 2022ರಲ್ಲಿ ನಡೆಯಲಿರುವ ರಾಷ್ಟ್ರಪತಿ ಆಯ್ಕೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪರ ಅಭ್ಯರ್ಥಿ ಎಂಬ ಊಹೆಯೊಂದು ಎದ್ದಿದೆ. ಆದರೆ ಶರದ್​ ಪವಾರ್ ಆ ವರದಿಯನ್ನು ಅಲ್ಲಗಳೆದಿದ್ದಾರೆ. ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್​ ಇತ್ತೀಚೆಗೆ ಶರದ್​ ಪವಾರ್​ ಹಾಗೂ ಕಾಂಗ್ರೆಸ್​ ನಾಯಕರಾದ ಸೋನಿಯಾ ಗಾಂಧಿ, ರಾಹುಲ್​ ಗಾಂಧಿಯವರೊಟ್ಟಿಗೆ ಹಲವು ಸುತ್ತಿನ ಸಭೆ ನಡೆಸಿದ ಬೆನ್ನಲ್ಲೇ ಇಂಥದ್ದೊಂದು ಮಾತು ಕೇಳಿಬಂದಿತ್ತು.

ಇದನ್ನೂ ಓದಿ: Bihar Hooch Tragedy: ಬಿಹಾರದಲ್ಲಿ 16 ಜನರ ನಿಗೂಢ ಸಾವು; ದುರಂತದ ಹಿಂದೆ ಕಳ್ಳಭಟ್ಟಿ ದಂಧೆಯ ಕೈವಾಡದ ಶಂಕೆ

NCP chief Sharad Pawar meets PM Narendra Modi Amid of monsoon session of Parliament

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?