AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಒಂದು ತಾಸು ಮಾತುಕತೆ ನಡೆಸಿದ ಶರದ್​ ಪವಾರ್​..

ರಾಜ್ಯಸಭೆ ಸದಸ್ಯರೂ ಆಗಿರುವ ಶರದ್​ ಪವಾರ್​, 2022ರಲ್ಲಿ ನಡೆಯಲಿರುವ ರಾಷ್ಟ್ರಪತಿ ಆಯ್ಕೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪರ ಅಭ್ಯರ್ಥಿ ಎಂಬ ಊಹೆಯೊಂದು ಎದ್ದಿದೆ. ಆದರೆ ಶರದ್​ ಪವಾರ್ ಆ ವರದಿಯನ್ನು ಅಲ್ಲಗಳೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಒಂದು ತಾಸು ಮಾತುಕತೆ ನಡೆಸಿದ ಶರದ್​ ಪವಾರ್​..
ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಎನ್​ಸಿಪಿ ಮುಖ್ಯಸ್ಥ
TV9 Web
| Edited By: |

Updated on: Jul 17, 2021 | 1:31 PM

Share

ಇನ್ನೇನು ಎರಡು ದಿನಗಳಲ್ಲಿ ಪ್ರಾರಂಭವಾಗಲಿರುವಸಂಸತ್ತಿನ ಮುಂಗಾರು ಅಧಿವೇಶನ (Monsoon session of Parliament) ಬೆನ್ನಲ್ಲೇ ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್ (Sharad Pawar) ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಯವರನ್ನು ಭೇಟಿಯಾಗಿದ್ದಾರೆ ಇವರಿಬ್ಬರ ಭೇಟಿಯ ಫೋಟೋವನ್ನು ಪ್ರಧಾನಿ ಕಚೇರಿ (PMO) ಯೂ ಸಹ ಹಂಚಿಕೊಂಡಿದೆ. ಪ್ರಧಾನಿ ಮೋದಿ ಮತ್ತು ಶರದ್​ ಪವಾರ್​ ನಡುವೆ ಸುಮಾರು ಒಂದು ತಾಸುಗಳ ಚರ್ಚೆ ನಡೆದಿದೆ ಎಂದೂ ಮೂಲಗಳು ತಿಳಿಸಿವೆ.

ಎನ್​ಸಿಪಿ, ಮಹಾರಾಷ್ಟ್ರದ ಮೈತ್ರಿ ಸರ್ಕಾರದ ಒಂದು ಪಕ್ಷವಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ಗುರುವಾರ ಶರದ್​ ಪವಾರ್​​ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರನ್ನು ಭೇಟಿ ಮಾಡಿ, ಸಭೆ ನಡೆಸಿದ್ದರು. ಈ ಮಧ್ಯೆ ಕಾಂಗ್ರೆಸ್​​ನ ನಾನಾ ಪಟೋಲೆ ಪದೇಪದೆ ಮೈತ್ರಿಗೆ ಮುಳ್ಳಾಗುವ ಮಾತುಗಳನ್ನು ಆಡುತ್ತಿದ್ದಾರೆ. ಮುಂದಿನ ಯಾವ ಚುನಾವಣೆಯಲ್ಲೂ ಕಾಂಗ್ರೆಸ್​ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ನಾನೂ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ. ಇದನ್ನೆಲ್ಲ ಚರ್ಚಿಸುವ ಸಂಬಂಧ ಹಿರಿಯ ನಾಯಕ ಶರದ್​ ಪವಾರ್ ಮಹಾ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದರು.

ರಾಜ್ಯಸಭೆ ಸದಸ್ಯರೂ ಆಗಿರುವ ಶರದ್​ ಪವಾರ್​, 2022ರಲ್ಲಿ ನಡೆಯಲಿರುವ ರಾಷ್ಟ್ರಪತಿ ಆಯ್ಕೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪರ ಅಭ್ಯರ್ಥಿ ಎಂಬ ಊಹೆಯೊಂದು ಎದ್ದಿದೆ. ಆದರೆ ಶರದ್​ ಪವಾರ್ ಆ ವರದಿಯನ್ನು ಅಲ್ಲಗಳೆದಿದ್ದಾರೆ. ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್​ ಇತ್ತೀಚೆಗೆ ಶರದ್​ ಪವಾರ್​ ಹಾಗೂ ಕಾಂಗ್ರೆಸ್​ ನಾಯಕರಾದ ಸೋನಿಯಾ ಗಾಂಧಿ, ರಾಹುಲ್​ ಗಾಂಧಿಯವರೊಟ್ಟಿಗೆ ಹಲವು ಸುತ್ತಿನ ಸಭೆ ನಡೆಸಿದ ಬೆನ್ನಲ್ಲೇ ಇಂಥದ್ದೊಂದು ಮಾತು ಕೇಳಿಬಂದಿತ್ತು.

ಇದನ್ನೂ ಓದಿ: Bihar Hooch Tragedy: ಬಿಹಾರದಲ್ಲಿ 16 ಜನರ ನಿಗೂಢ ಸಾವು; ದುರಂತದ ಹಿಂದೆ ಕಳ್ಳಭಟ್ಟಿ ದಂಧೆಯ ಕೈವಾಡದ ಶಂಕೆ

NCP chief Sharad Pawar meets PM Narendra Modi Amid of monsoon session of Parliament

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ