AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಜತೆ ಪ್ರಾದೇಶಿಕ ಪಕ್ಷಗಳು ವಿಲೀನ: ಶರದ್ ಪವಾರ್ ಏನಂದ್ರು?

ಸಣ್ಣ ಪಕ್ಷಗಳ ಜತೆ ಪ್ರಾದೇಶಿಕ ಪಕ್ಷಗಳ ವಿಲೀನ ವಿಚಾರ ಕುರಿತು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್​ ಜತೆ ಪ್ರಾದೇಶಿಕ ಪಕ್ಷಗಳು ವಿಲೀನ: ಶರದ್ ಪವಾರ್ ಏನಂದ್ರು?
ಶರದ್ ಪವಾರ್
ನಯನಾ ರಾಜೀವ್
|

Updated on: May 10, 2024 | 10:03 AM

Share

ಲೋಕಸಭಾ ಚುನಾವಣೆ(Lok Sabha Election)ಯ ನಾಲ್ಕನೇ ಹಂತ ಮತದಾನಕ್ಕೂ ಮುನ್ನ ಮಹಾರಾಷ್ಟ್ರ ರಾಜಕೀಯದಲ್ಲಿ ಕಾಂಗ್ರೆಸ್​ ಜತೆ ಪ್ರಾದೇಶಿಕ ಪಕ್ಷಗಳ ವಿಲೀನ ವಿಚಾರ ತೀವ್ರವಾಗಿ ಚರ್ಚೆಯಾಗುತ್ತಿದೆ. ಸಂದರ್ಶನವೊಂದರಲ್ಲಿ ಶರದ್ ಪವಾರ್ ಮುಂದಿನ ಕೆಲವು ವರ್ಷಗಳಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್​ನೊಂದಿಗೆ ವಿಲೀನಗೊಳ್ಲಬಹುದು ಎಂದು ಹೇಳಿದ್ದರು.

ಶರದ್ ಪವಾರ್ ಹೇಳಿಕೆಗೆ ಬಿಜೆಪಿ ಹಾಗೂ ಶಿವಸೇನೆ, ಎನ್​ಸಿಪಿ ವಿರೋಧ ವ್ಯಕ್ತಪಡಿಸಿದರೆ, ಕಾಂಗ್ರೆಸ್​, ಉದ್ಧವ್ ಠಾಕ್ರೆ ಬಣ ಮತ್ತು ಸುಪ್ರಿಯಾ ಸುಳೆ ಶರದ್ ಪವಾರ್(Sharad Pawar) ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಿಮ್ಮ ಪಕ್ಷವೂ ವಿಲೀನಗೊಳ್ಳುವುದೇ ಎಂದು ಕೇಳಿದಾಗ ಕಾಂಗ್ರೆಸ್​ ಹಾಗೂ ನಮ್ಮ ಪಕ್ಷದ ನಡುವೆ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ ಇವರೆಡೂ ನೆಹರೂ ಹಾಗೂ ಗಾಂಧಿ ಸಿದ್ಧಾಂತವನ್ನು ಅನುಸರಿಸುತ್ತವೆ ಎಂದು ಹೇಳಿದ್ದರು.

ಈ ಕುರಿತು ಪೃಥ್ವಿರಾಜ್ ಚವಾಣ್ ಮಾತನಾಡಿ, ಪವಾರ್​ ಅವರು ಈ ಹೇಳಿಕೆ ನೀಡಿದಾಗ ನಾನು ಅಲ್ಲಿದ್ದೆ, ಎಲ್ಲವೂ ಜೂನ್ 4ರಂದು ಚುನಾವಣಾ ಫಲಿತಾಂಶದ ಮೇಲೆ ಅವಲಂಬಿತವಾಗಿದೆ. ಜೂನ್​ 4ರ ನಂತರ ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಇರುತ್ತದೆ. ಅಧಿಕಾರದ ಲಾಭ ಪಡೆಯಲು ಕೆಲವು ಪಕ್ಷಗಳು ಇಂಡಿಯಾ ಬ್ಲಾಕ್​ ಸೇರಬಹುದು ಅಥವಾ ಕಾಂಗ್ರೆಸ್​ನೊಂದಿಗೆ ವಿಲೀನಗೊಳ್ಳಬಹುದು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ:Sharad Pawar: ಶರದ್ ಪವಾರ್ ಬಣಕ್ಕೆ ಹೊಸ ಹೆಸರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಶರದ್ಚಂದ್ರ ಪವಾರ್

ಆದರೆ ಇದೆಲ್ಲಾ ಹೇಳಿಕೆಗಳ ಬಳಿಕ ಶರದ್ ಪವಾರ್ ಉಲ್ಟಾ ಹೊಡೆದಿದ್ದು, ತಮ್ಮ ಪಕ್ಷ ಕಾಂಗ್ರೆಸ್​ ಜತೆಗೆ ವಿಲೀನವಾಗುತ್ತೆ ಎಂದು ನಾನು ಎಂದೂ ಹೇಳಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದರು.

ಎನ್​ಸಿಪಿ ಹಾಗೂ ಕಾಂಗ್ರೆಸ್​ 2001ರಿಂದೀಚೆಗೆ ಜತೆಯಾಗಿ ಕಾರ್ಯ ನಿರ್ವಹಿಸುತ್ತಿವೆ. ರಾಜ್ಯ ಸಚಿವ ಸಂಪುಟದಲ್ಲಿ ಕೂಡ ಜತೆಗಿದ್ದವು. ಜಂಟಿಯಾಗಿ ಚುನಾವಣೆ ಎದುರಿಸಿದ್ದವು ಎಂಬುದು ಗಮನಾರ್ಹ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್