AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಜತೆ ಪ್ರಾದೇಶಿಕ ಪಕ್ಷಗಳು ವಿಲೀನ: ಶರದ್ ಪವಾರ್ ಏನಂದ್ರು?

ಸಣ್ಣ ಪಕ್ಷಗಳ ಜತೆ ಪ್ರಾದೇಶಿಕ ಪಕ್ಷಗಳ ವಿಲೀನ ವಿಚಾರ ಕುರಿತು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್​ ಜತೆ ಪ್ರಾದೇಶಿಕ ಪಕ್ಷಗಳು ವಿಲೀನ: ಶರದ್ ಪವಾರ್ ಏನಂದ್ರು?
ಶರದ್ ಪವಾರ್
ನಯನಾ ರಾಜೀವ್
|

Updated on: May 10, 2024 | 10:03 AM

Share

ಲೋಕಸಭಾ ಚುನಾವಣೆ(Lok Sabha Election)ಯ ನಾಲ್ಕನೇ ಹಂತ ಮತದಾನಕ್ಕೂ ಮುನ್ನ ಮಹಾರಾಷ್ಟ್ರ ರಾಜಕೀಯದಲ್ಲಿ ಕಾಂಗ್ರೆಸ್​ ಜತೆ ಪ್ರಾದೇಶಿಕ ಪಕ್ಷಗಳ ವಿಲೀನ ವಿಚಾರ ತೀವ್ರವಾಗಿ ಚರ್ಚೆಯಾಗುತ್ತಿದೆ. ಸಂದರ್ಶನವೊಂದರಲ್ಲಿ ಶರದ್ ಪವಾರ್ ಮುಂದಿನ ಕೆಲವು ವರ್ಷಗಳಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್​ನೊಂದಿಗೆ ವಿಲೀನಗೊಳ್ಲಬಹುದು ಎಂದು ಹೇಳಿದ್ದರು.

ಶರದ್ ಪವಾರ್ ಹೇಳಿಕೆಗೆ ಬಿಜೆಪಿ ಹಾಗೂ ಶಿವಸೇನೆ, ಎನ್​ಸಿಪಿ ವಿರೋಧ ವ್ಯಕ್ತಪಡಿಸಿದರೆ, ಕಾಂಗ್ರೆಸ್​, ಉದ್ಧವ್ ಠಾಕ್ರೆ ಬಣ ಮತ್ತು ಸುಪ್ರಿಯಾ ಸುಳೆ ಶರದ್ ಪವಾರ್(Sharad Pawar) ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಿಮ್ಮ ಪಕ್ಷವೂ ವಿಲೀನಗೊಳ್ಳುವುದೇ ಎಂದು ಕೇಳಿದಾಗ ಕಾಂಗ್ರೆಸ್​ ಹಾಗೂ ನಮ್ಮ ಪಕ್ಷದ ನಡುವೆ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ ಇವರೆಡೂ ನೆಹರೂ ಹಾಗೂ ಗಾಂಧಿ ಸಿದ್ಧಾಂತವನ್ನು ಅನುಸರಿಸುತ್ತವೆ ಎಂದು ಹೇಳಿದ್ದರು.

ಈ ಕುರಿತು ಪೃಥ್ವಿರಾಜ್ ಚವಾಣ್ ಮಾತನಾಡಿ, ಪವಾರ್​ ಅವರು ಈ ಹೇಳಿಕೆ ನೀಡಿದಾಗ ನಾನು ಅಲ್ಲಿದ್ದೆ, ಎಲ್ಲವೂ ಜೂನ್ 4ರಂದು ಚುನಾವಣಾ ಫಲಿತಾಂಶದ ಮೇಲೆ ಅವಲಂಬಿತವಾಗಿದೆ. ಜೂನ್​ 4ರ ನಂತರ ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಇರುತ್ತದೆ. ಅಧಿಕಾರದ ಲಾಭ ಪಡೆಯಲು ಕೆಲವು ಪಕ್ಷಗಳು ಇಂಡಿಯಾ ಬ್ಲಾಕ್​ ಸೇರಬಹುದು ಅಥವಾ ಕಾಂಗ್ರೆಸ್​ನೊಂದಿಗೆ ವಿಲೀನಗೊಳ್ಳಬಹುದು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ:Sharad Pawar: ಶರದ್ ಪವಾರ್ ಬಣಕ್ಕೆ ಹೊಸ ಹೆಸರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಶರದ್ಚಂದ್ರ ಪವಾರ್

ಆದರೆ ಇದೆಲ್ಲಾ ಹೇಳಿಕೆಗಳ ಬಳಿಕ ಶರದ್ ಪವಾರ್ ಉಲ್ಟಾ ಹೊಡೆದಿದ್ದು, ತಮ್ಮ ಪಕ್ಷ ಕಾಂಗ್ರೆಸ್​ ಜತೆಗೆ ವಿಲೀನವಾಗುತ್ತೆ ಎಂದು ನಾನು ಎಂದೂ ಹೇಳಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದರು.

ಎನ್​ಸಿಪಿ ಹಾಗೂ ಕಾಂಗ್ರೆಸ್​ 2001ರಿಂದೀಚೆಗೆ ಜತೆಯಾಗಿ ಕಾರ್ಯ ನಿರ್ವಹಿಸುತ್ತಿವೆ. ರಾಜ್ಯ ಸಚಿವ ಸಂಪುಟದಲ್ಲಿ ಕೂಡ ಜತೆಗಿದ್ದವು. ಜಂಟಿಯಾಗಿ ಚುನಾವಣೆ ಎದುರಿಸಿದ್ದವು ಎಂಬುದು ಗಮನಾರ್ಹ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?