AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನಲ್ಲಿದ್ದ ಸ್ಯಾನಿಟೈಸರ್​ಗೆ ಬೆಂಕಿ: ಜೀವಂತ ಭಸ್ಮಗೊಂಡ NCP ಮುಖಂಡ

ಮುಂಬೈ: ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನದಲ್ಲಿದ್ದ ಸ್ಯಾನಿಟೈಸರ್ ಬಾಟಲ್​ಗೆ ಬೆಂಕಿ ತಾಗಿ NCP ಪಕ್ಷದ ಮುಖಂಡನೊಬ್ಬ ವಾಹನದಲ್ಲೇ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಪಿಂಪಲ್​ಗಾವ್​ ಬಳಿ ನಡೆದಿದೆ. NCP ಮುಖಂಡ ಸಂಜಯ್​ ಶಿಂಧೆ ಕಳೆದ ಮಂಗಳವಾರ ನಾಸಿಕ್​ನಲ್ಲಿರುವ ತಮ್ಮ ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಪಿಂಪಲ್​ಗಾವ್​ಗೆ ಕಾರ್​ನಲ್ಲಿ ತೆರಳುತ್ತಿದ್ದರು. ವಾಹನ ಕಡ್ವಾ ನದಿ ಬಳಿ ಸಮೀಪಿಸುತ್ತಿರುವಾಗಲೇ ತಾಂತ್ರಕ ದೋಷ ಉಂಟಾಗಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಕಾರ್​ನಲ್ಲಿದ್ದ ಹ್ಯಾಂಡ್​ ಸ್ಯಾನಿಟೈಸರ್ […]

ಕಾರಿನಲ್ಲಿದ್ದ ಸ್ಯಾನಿಟೈಸರ್​ಗೆ ಬೆಂಕಿ: ಜೀವಂತ ಭಸ್ಮಗೊಂಡ NCP ಮುಖಂಡ
KUSHAL V
| Edited By: ಸಾಧು ಶ್ರೀನಾಥ್​|

Updated on:Oct 15, 2020 | 2:01 PM

Share

ಮುಂಬೈ: ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನದಲ್ಲಿದ್ದ ಸ್ಯಾನಿಟೈಸರ್ ಬಾಟಲ್​ಗೆ ಬೆಂಕಿ ತಾಗಿ NCP ಪಕ್ಷದ ಮುಖಂಡನೊಬ್ಬ ವಾಹನದಲ್ಲೇ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಪಿಂಪಲ್​ಗಾವ್​ ಬಳಿ ನಡೆದಿದೆ.

NCP ಮುಖಂಡ ಸಂಜಯ್​ ಶಿಂಧೆ ಕಳೆದ ಮಂಗಳವಾರ ನಾಸಿಕ್​ನಲ್ಲಿರುವ ತಮ್ಮ ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಪಿಂಪಲ್​ಗಾವ್​ಗೆ ಕಾರ್​ನಲ್ಲಿ ತೆರಳುತ್ತಿದ್ದರು. ವಾಹನ ಕಡ್ವಾ ನದಿ ಬಳಿ ಸಮೀಪಿಸುತ್ತಿರುವಾಗಲೇ ತಾಂತ್ರಕ ದೋಷ ಉಂಟಾಗಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಕಾರ್​ನಲ್ಲಿದ್ದ ಹ್ಯಾಂಡ್​ ಸ್ಯಾನಿಟೈಸರ್ ಬಾಟಲ್​ ಸಹ ಬೆಂಕಿ ಹೊತ್ತಿಕೊಂಡು ಇಡೀ ಕಾರ್​ ಸಂಪೂರ್ಣವಾಗಿ ಭಸ್ಮವಾಗಿದೆ.

ಕೂಡಲೇ ಸಂಜಯ್​ ಶಿಂಧೆ ಕಾರ್​ನ ಬಾಗಿಲು ತೆರೆದು ಹೊರಬರಲು ಸಾಕಷ್ಟು ಪ್ರಯತ್ನಪಟ್ಟರೂ ಬೆಂಕಿಯಿಂದ ಗಾಡಿಯ ಸೆಂಟ್ರಲ್​ ಲಾಕಿಂಗ್​ ಸಿಸ್ಟಂ ಬಂದ್​ ಆಗಿಹೋದ ಕಾರಣ ಒಳಗೇ ಸಿಲುಕಿಕೊಂಡರು. ಕಾರಿನ ಗಾಜನ್ನು ಒಡೆದು ಹೊರಬರಲು ಯತ್ನಿಸುವಷ್ಟರಲ್ಲೇ ಸಜೀವ ದಹನವಾಗಿ ಹೋದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿದ್ದ ಗ್ರಾಮಸ್ಥರು ಶಿಂಧೆ ಪ್ರಾಣ ಉಳಿಸಲು ಸಾಕಷ್ಟು ಪ್ರಯತ್ನಪಟ್ಟರೂ ಸಫಲರಾಗಲಿಲ್ಲ ಎಂದು ತಿಳಿದುಬಂದಿದೆ.

Published On - 1:58 pm, Thu, 15 October 20

Follow Us
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ