AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನಲ್ಲಿದ್ದ ಸ್ಯಾನಿಟೈಸರ್​ಗೆ ಬೆಂಕಿ: ಜೀವಂತ ಭಸ್ಮಗೊಂಡ NCP ಮುಖಂಡ

ಮುಂಬೈ: ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನದಲ್ಲಿದ್ದ ಸ್ಯಾನಿಟೈಸರ್ ಬಾಟಲ್​ಗೆ ಬೆಂಕಿ ತಾಗಿ NCP ಪಕ್ಷದ ಮುಖಂಡನೊಬ್ಬ ವಾಹನದಲ್ಲೇ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಪಿಂಪಲ್​ಗಾವ್​ ಬಳಿ ನಡೆದಿದೆ. NCP ಮುಖಂಡ ಸಂಜಯ್​ ಶಿಂಧೆ ಕಳೆದ ಮಂಗಳವಾರ ನಾಸಿಕ್​ನಲ್ಲಿರುವ ತಮ್ಮ ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಪಿಂಪಲ್​ಗಾವ್​ಗೆ ಕಾರ್​ನಲ್ಲಿ ತೆರಳುತ್ತಿದ್ದರು. ವಾಹನ ಕಡ್ವಾ ನದಿ ಬಳಿ ಸಮೀಪಿಸುತ್ತಿರುವಾಗಲೇ ತಾಂತ್ರಕ ದೋಷ ಉಂಟಾಗಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಕಾರ್​ನಲ್ಲಿದ್ದ ಹ್ಯಾಂಡ್​ ಸ್ಯಾನಿಟೈಸರ್ […]

ಕಾರಿನಲ್ಲಿದ್ದ ಸ್ಯಾನಿಟೈಸರ್​ಗೆ ಬೆಂಕಿ: ಜೀವಂತ ಭಸ್ಮಗೊಂಡ NCP ಮುಖಂಡ
KUSHAL V
| Edited By: |

Updated on:Oct 15, 2020 | 2:01 PM

Share

ಮುಂಬೈ: ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನದಲ್ಲಿದ್ದ ಸ್ಯಾನಿಟೈಸರ್ ಬಾಟಲ್​ಗೆ ಬೆಂಕಿ ತಾಗಿ NCP ಪಕ್ಷದ ಮುಖಂಡನೊಬ್ಬ ವಾಹನದಲ್ಲೇ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಪಿಂಪಲ್​ಗಾವ್​ ಬಳಿ ನಡೆದಿದೆ.

NCP ಮುಖಂಡ ಸಂಜಯ್​ ಶಿಂಧೆ ಕಳೆದ ಮಂಗಳವಾರ ನಾಸಿಕ್​ನಲ್ಲಿರುವ ತಮ್ಮ ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಪಿಂಪಲ್​ಗಾವ್​ಗೆ ಕಾರ್​ನಲ್ಲಿ ತೆರಳುತ್ತಿದ್ದರು. ವಾಹನ ಕಡ್ವಾ ನದಿ ಬಳಿ ಸಮೀಪಿಸುತ್ತಿರುವಾಗಲೇ ತಾಂತ್ರಕ ದೋಷ ಉಂಟಾಗಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಕಾರ್​ನಲ್ಲಿದ್ದ ಹ್ಯಾಂಡ್​ ಸ್ಯಾನಿಟೈಸರ್ ಬಾಟಲ್​ ಸಹ ಬೆಂಕಿ ಹೊತ್ತಿಕೊಂಡು ಇಡೀ ಕಾರ್​ ಸಂಪೂರ್ಣವಾಗಿ ಭಸ್ಮವಾಗಿದೆ.

ಕೂಡಲೇ ಸಂಜಯ್​ ಶಿಂಧೆ ಕಾರ್​ನ ಬಾಗಿಲು ತೆರೆದು ಹೊರಬರಲು ಸಾಕಷ್ಟು ಪ್ರಯತ್ನಪಟ್ಟರೂ ಬೆಂಕಿಯಿಂದ ಗಾಡಿಯ ಸೆಂಟ್ರಲ್​ ಲಾಕಿಂಗ್​ ಸಿಸ್ಟಂ ಬಂದ್​ ಆಗಿಹೋದ ಕಾರಣ ಒಳಗೇ ಸಿಲುಕಿಕೊಂಡರು. ಕಾರಿನ ಗಾಜನ್ನು ಒಡೆದು ಹೊರಬರಲು ಯತ್ನಿಸುವಷ್ಟರಲ್ಲೇ ಸಜೀವ ದಹನವಾಗಿ ಹೋದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿದ್ದ ಗ್ರಾಮಸ್ಥರು ಶಿಂಧೆ ಪ್ರಾಣ ಉಳಿಸಲು ಸಾಕಷ್ಟು ಪ್ರಯತ್ನಪಟ್ಟರೂ ಸಫಲರಾಗಲಿಲ್ಲ ಎಂದು ತಿಳಿದುಬಂದಿದೆ.

Published On - 1:58 pm, Thu, 15 October 20

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್