AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನಲ್ಲಿದ್ದ ಸ್ಯಾನಿಟೈಸರ್​ಗೆ ಬೆಂಕಿ: ಜೀವಂತ ಭಸ್ಮಗೊಂಡ NCP ಮುಖಂಡ

ಮುಂಬೈ: ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನದಲ್ಲಿದ್ದ ಸ್ಯಾನಿಟೈಸರ್ ಬಾಟಲ್​ಗೆ ಬೆಂಕಿ ತಾಗಿ NCP ಪಕ್ಷದ ಮುಖಂಡನೊಬ್ಬ ವಾಹನದಲ್ಲೇ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಪಿಂಪಲ್​ಗಾವ್​ ಬಳಿ ನಡೆದಿದೆ. NCP ಮುಖಂಡ ಸಂಜಯ್​ ಶಿಂಧೆ ಕಳೆದ ಮಂಗಳವಾರ ನಾಸಿಕ್​ನಲ್ಲಿರುವ ತಮ್ಮ ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಪಿಂಪಲ್​ಗಾವ್​ಗೆ ಕಾರ್​ನಲ್ಲಿ ತೆರಳುತ್ತಿದ್ದರು. ವಾಹನ ಕಡ್ವಾ ನದಿ ಬಳಿ ಸಮೀಪಿಸುತ್ತಿರುವಾಗಲೇ ತಾಂತ್ರಕ ದೋಷ ಉಂಟಾಗಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಕಾರ್​ನಲ್ಲಿದ್ದ ಹ್ಯಾಂಡ್​ ಸ್ಯಾನಿಟೈಸರ್ […]

ಕಾರಿನಲ್ಲಿದ್ದ ಸ್ಯಾನಿಟೈಸರ್​ಗೆ ಬೆಂಕಿ: ಜೀವಂತ ಭಸ್ಮಗೊಂಡ NCP ಮುಖಂಡ
KUSHAL V
| Edited By: ಸಾಧು ಶ್ರೀನಾಥ್​|

Updated on:Oct 15, 2020 | 2:01 PM

Share

ಮುಂಬೈ: ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನದಲ್ಲಿದ್ದ ಸ್ಯಾನಿಟೈಸರ್ ಬಾಟಲ್​ಗೆ ಬೆಂಕಿ ತಾಗಿ NCP ಪಕ್ಷದ ಮುಖಂಡನೊಬ್ಬ ವಾಹನದಲ್ಲೇ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಪಿಂಪಲ್​ಗಾವ್​ ಬಳಿ ನಡೆದಿದೆ.

NCP ಮುಖಂಡ ಸಂಜಯ್​ ಶಿಂಧೆ ಕಳೆದ ಮಂಗಳವಾರ ನಾಸಿಕ್​ನಲ್ಲಿರುವ ತಮ್ಮ ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಪಿಂಪಲ್​ಗಾವ್​ಗೆ ಕಾರ್​ನಲ್ಲಿ ತೆರಳುತ್ತಿದ್ದರು. ವಾಹನ ಕಡ್ವಾ ನದಿ ಬಳಿ ಸಮೀಪಿಸುತ್ತಿರುವಾಗಲೇ ತಾಂತ್ರಕ ದೋಷ ಉಂಟಾಗಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಕಾರ್​ನಲ್ಲಿದ್ದ ಹ್ಯಾಂಡ್​ ಸ್ಯಾನಿಟೈಸರ್ ಬಾಟಲ್​ ಸಹ ಬೆಂಕಿ ಹೊತ್ತಿಕೊಂಡು ಇಡೀ ಕಾರ್​ ಸಂಪೂರ್ಣವಾಗಿ ಭಸ್ಮವಾಗಿದೆ.

ಕೂಡಲೇ ಸಂಜಯ್​ ಶಿಂಧೆ ಕಾರ್​ನ ಬಾಗಿಲು ತೆರೆದು ಹೊರಬರಲು ಸಾಕಷ್ಟು ಪ್ರಯತ್ನಪಟ್ಟರೂ ಬೆಂಕಿಯಿಂದ ಗಾಡಿಯ ಸೆಂಟ್ರಲ್​ ಲಾಕಿಂಗ್​ ಸಿಸ್ಟಂ ಬಂದ್​ ಆಗಿಹೋದ ಕಾರಣ ಒಳಗೇ ಸಿಲುಕಿಕೊಂಡರು. ಕಾರಿನ ಗಾಜನ್ನು ಒಡೆದು ಹೊರಬರಲು ಯತ್ನಿಸುವಷ್ಟರಲ್ಲೇ ಸಜೀವ ದಹನವಾಗಿ ಹೋದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿದ್ದ ಗ್ರಾಮಸ್ಥರು ಶಿಂಧೆ ಪ್ರಾಣ ಉಳಿಸಲು ಸಾಕಷ್ಟು ಪ್ರಯತ್ನಪಟ್ಟರೂ ಸಫಲರಾಗಲಿಲ್ಲ ಎಂದು ತಿಳಿದುಬಂದಿದೆ.

Published On - 1:58 pm, Thu, 15 October 20

Follow Us
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ