AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನಲ್ಲಿದ್ದ ಸ್ಯಾನಿಟೈಸರ್​ಗೆ ಬೆಂಕಿ: ಜೀವಂತ ಭಸ್ಮಗೊಂಡ NCP ಮುಖಂಡ

ಮುಂಬೈ: ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನದಲ್ಲಿದ್ದ ಸ್ಯಾನಿಟೈಸರ್ ಬಾಟಲ್​ಗೆ ಬೆಂಕಿ ತಾಗಿ NCP ಪಕ್ಷದ ಮುಖಂಡನೊಬ್ಬ ವಾಹನದಲ್ಲೇ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಪಿಂಪಲ್​ಗಾವ್​ ಬಳಿ ನಡೆದಿದೆ. NCP ಮುಖಂಡ ಸಂಜಯ್​ ಶಿಂಧೆ ಕಳೆದ ಮಂಗಳವಾರ ನಾಸಿಕ್​ನಲ್ಲಿರುವ ತಮ್ಮ ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಪಿಂಪಲ್​ಗಾವ್​ಗೆ ಕಾರ್​ನಲ್ಲಿ ತೆರಳುತ್ತಿದ್ದರು. ವಾಹನ ಕಡ್ವಾ ನದಿ ಬಳಿ ಸಮೀಪಿಸುತ್ತಿರುವಾಗಲೇ ತಾಂತ್ರಕ ದೋಷ ಉಂಟಾಗಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಕಾರ್​ನಲ್ಲಿದ್ದ ಹ್ಯಾಂಡ್​ ಸ್ಯಾನಿಟೈಸರ್ […]

ಕಾರಿನಲ್ಲಿದ್ದ ಸ್ಯಾನಿಟೈಸರ್​ಗೆ ಬೆಂಕಿ: ಜೀವಂತ ಭಸ್ಮಗೊಂಡ NCP ಮುಖಂಡ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Oct 15, 2020 | 2:01 PM

ಮುಂಬೈ: ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನದಲ್ಲಿದ್ದ ಸ್ಯಾನಿಟೈಸರ್ ಬಾಟಲ್​ಗೆ ಬೆಂಕಿ ತಾಗಿ NCP ಪಕ್ಷದ ಮುಖಂಡನೊಬ್ಬ ವಾಹನದಲ್ಲೇ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಪಿಂಪಲ್​ಗಾವ್​ ಬಳಿ ನಡೆದಿದೆ.

NCP ಮುಖಂಡ ಸಂಜಯ್​ ಶಿಂಧೆ ಕಳೆದ ಮಂಗಳವಾರ ನಾಸಿಕ್​ನಲ್ಲಿರುವ ತಮ್ಮ ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಪಿಂಪಲ್​ಗಾವ್​ಗೆ ಕಾರ್​ನಲ್ಲಿ ತೆರಳುತ್ತಿದ್ದರು. ವಾಹನ ಕಡ್ವಾ ನದಿ ಬಳಿ ಸಮೀಪಿಸುತ್ತಿರುವಾಗಲೇ ತಾಂತ್ರಕ ದೋಷ ಉಂಟಾಗಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಕಾರ್​ನಲ್ಲಿದ್ದ ಹ್ಯಾಂಡ್​ ಸ್ಯಾನಿಟೈಸರ್ ಬಾಟಲ್​ ಸಹ ಬೆಂಕಿ ಹೊತ್ತಿಕೊಂಡು ಇಡೀ ಕಾರ್​ ಸಂಪೂರ್ಣವಾಗಿ ಭಸ್ಮವಾಗಿದೆ.

ಕೂಡಲೇ ಸಂಜಯ್​ ಶಿಂಧೆ ಕಾರ್​ನ ಬಾಗಿಲು ತೆರೆದು ಹೊರಬರಲು ಸಾಕಷ್ಟು ಪ್ರಯತ್ನಪಟ್ಟರೂ ಬೆಂಕಿಯಿಂದ ಗಾಡಿಯ ಸೆಂಟ್ರಲ್​ ಲಾಕಿಂಗ್​ ಸಿಸ್ಟಂ ಬಂದ್​ ಆಗಿಹೋದ ಕಾರಣ ಒಳಗೇ ಸಿಲುಕಿಕೊಂಡರು. ಕಾರಿನ ಗಾಜನ್ನು ಒಡೆದು ಹೊರಬರಲು ಯತ್ನಿಸುವಷ್ಟರಲ್ಲೇ ಸಜೀವ ದಹನವಾಗಿ ಹೋದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿದ್ದ ಗ್ರಾಮಸ್ಥರು ಶಿಂಧೆ ಪ್ರಾಣ ಉಳಿಸಲು ಸಾಕಷ್ಟು ಪ್ರಯತ್ನಪಟ್ಟರೂ ಸಫಲರಾಗಲಿಲ್ಲ ಎಂದು ತಿಳಿದುಬಂದಿದೆ.

Published On - 1:58 pm, Thu, 15 October 20

Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ