AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನಲ್ಲಿದ್ದ ಸ್ಯಾನಿಟೈಸರ್​ಗೆ ಬೆಂಕಿ: ಜೀವಂತ ಭಸ್ಮಗೊಂಡ NCP ಮುಖಂಡ

ಮುಂಬೈ: ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನದಲ್ಲಿದ್ದ ಸ್ಯಾನಿಟೈಸರ್ ಬಾಟಲ್​ಗೆ ಬೆಂಕಿ ತಾಗಿ NCP ಪಕ್ಷದ ಮುಖಂಡನೊಬ್ಬ ವಾಹನದಲ್ಲೇ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಪಿಂಪಲ್​ಗಾವ್​ ಬಳಿ ನಡೆದಿದೆ. NCP ಮುಖಂಡ ಸಂಜಯ್​ ಶಿಂಧೆ ಕಳೆದ ಮಂಗಳವಾರ ನಾಸಿಕ್​ನಲ್ಲಿರುವ ತಮ್ಮ ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಪಿಂಪಲ್​ಗಾವ್​ಗೆ ಕಾರ್​ನಲ್ಲಿ ತೆರಳುತ್ತಿದ್ದರು. ವಾಹನ ಕಡ್ವಾ ನದಿ ಬಳಿ ಸಮೀಪಿಸುತ್ತಿರುವಾಗಲೇ ತಾಂತ್ರಕ ದೋಷ ಉಂಟಾಗಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಕಾರ್​ನಲ್ಲಿದ್ದ ಹ್ಯಾಂಡ್​ ಸ್ಯಾನಿಟೈಸರ್ […]

ಕಾರಿನಲ್ಲಿದ್ದ ಸ್ಯಾನಿಟೈಸರ್​ಗೆ ಬೆಂಕಿ: ಜೀವಂತ ಭಸ್ಮಗೊಂಡ NCP ಮುಖಂಡ
KUSHAL V
| Edited By: |

Updated on:Oct 15, 2020 | 2:01 PM

Share

ಮುಂಬೈ: ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನದಲ್ಲಿದ್ದ ಸ್ಯಾನಿಟೈಸರ್ ಬಾಟಲ್​ಗೆ ಬೆಂಕಿ ತಾಗಿ NCP ಪಕ್ಷದ ಮುಖಂಡನೊಬ್ಬ ವಾಹನದಲ್ಲೇ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಪಿಂಪಲ್​ಗಾವ್​ ಬಳಿ ನಡೆದಿದೆ.

NCP ಮುಖಂಡ ಸಂಜಯ್​ ಶಿಂಧೆ ಕಳೆದ ಮಂಗಳವಾರ ನಾಸಿಕ್​ನಲ್ಲಿರುವ ತಮ್ಮ ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಪಿಂಪಲ್​ಗಾವ್​ಗೆ ಕಾರ್​ನಲ್ಲಿ ತೆರಳುತ್ತಿದ್ದರು. ವಾಹನ ಕಡ್ವಾ ನದಿ ಬಳಿ ಸಮೀಪಿಸುತ್ತಿರುವಾಗಲೇ ತಾಂತ್ರಕ ದೋಷ ಉಂಟಾಗಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಕಾರ್​ನಲ್ಲಿದ್ದ ಹ್ಯಾಂಡ್​ ಸ್ಯಾನಿಟೈಸರ್ ಬಾಟಲ್​ ಸಹ ಬೆಂಕಿ ಹೊತ್ತಿಕೊಂಡು ಇಡೀ ಕಾರ್​ ಸಂಪೂರ್ಣವಾಗಿ ಭಸ್ಮವಾಗಿದೆ.

ಕೂಡಲೇ ಸಂಜಯ್​ ಶಿಂಧೆ ಕಾರ್​ನ ಬಾಗಿಲು ತೆರೆದು ಹೊರಬರಲು ಸಾಕಷ್ಟು ಪ್ರಯತ್ನಪಟ್ಟರೂ ಬೆಂಕಿಯಿಂದ ಗಾಡಿಯ ಸೆಂಟ್ರಲ್​ ಲಾಕಿಂಗ್​ ಸಿಸ್ಟಂ ಬಂದ್​ ಆಗಿಹೋದ ಕಾರಣ ಒಳಗೇ ಸಿಲುಕಿಕೊಂಡರು. ಕಾರಿನ ಗಾಜನ್ನು ಒಡೆದು ಹೊರಬರಲು ಯತ್ನಿಸುವಷ್ಟರಲ್ಲೇ ಸಜೀವ ದಹನವಾಗಿ ಹೋದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿದ್ದ ಗ್ರಾಮಸ್ಥರು ಶಿಂಧೆ ಪ್ರಾಣ ಉಳಿಸಲು ಸಾಕಷ್ಟು ಪ್ರಯತ್ನಪಟ್ಟರೂ ಸಫಲರಾಗಲಿಲ್ಲ ಎಂದು ತಿಳಿದುಬಂದಿದೆ.

Published On - 1:58 pm, Thu, 15 October 20

Follow Us
ಸಮುದ್ರದಾಳದಲ್ಲಿ ‘ಪಂಚರಂಗಿ’ ನಟಿ ನಿಧಿ ಸುಬ್ಬಯ್ಯ: ವಿಡಿಯೋ
ಸಮುದ್ರದಾಳದಲ್ಲಿ ‘ಪಂಚರಂಗಿ’ ನಟಿ ನಿಧಿ ಸುಬ್ಬಯ್ಯ: ವಿಡಿಯೋ
ಕಿಂಗ್ ಕೊಹ್ಲಿಯ ನೋ ಲುಕ್ ಸಿಕ್ಸರ್​ಗೆ ಹುಚ್ಚೆದ್ದು ಕುಣಿದ ಫ್ಯಾನ್ಸ್
ಕಿಂಗ್ ಕೊಹ್ಲಿಯ ನೋ ಲುಕ್ ಸಿಕ್ಸರ್​ಗೆ ಹುಚ್ಚೆದ್ದು ಕುಣಿದ ಫ್ಯಾನ್ಸ್
RCB-CSK ಪಂದ್ಯ ವೀಕ್ಷಣೆಗೆ ಆಗಮಿಸಿದ ಬಿಜೆಪಿ ಶಾಸಕರು, ಎಂಪಿಗಳು!
RCB-CSK ಪಂದ್ಯ ವೀಕ್ಷಣೆಗೆ ಆಗಮಿಸಿದ ಬಿಜೆಪಿ ಶಾಸಕರು, ಎಂಪಿಗಳು!
ಲಕ್ನೋ ತಂಡದ ಗೆಲುವಿಗೆ ಭಾವುಕರಾದ ಸಂಜೀವ್ ಗೋಯೆಂಕಾ; ವಿಡಿಯೋ
ಲಕ್ನೋ ತಂಡದ ಗೆಲುವಿಗೆ ಭಾವುಕರಾದ ಸಂಜೀವ್ ಗೋಯೆಂಕಾ; ವಿಡಿಯೋ
ಪೃಥ್ವಿ-ಕಾರ್ತಿಕ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?
ಪೃಥ್ವಿ-ಕಾರ್ತಿಕ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ