AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನಲ್ಲಿದ್ದ ಸ್ಯಾನಿಟೈಸರ್​ಗೆ ಬೆಂಕಿ: ಜೀವಂತ ಭಸ್ಮಗೊಂಡ NCP ಮುಖಂಡ

ಮುಂಬೈ: ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನದಲ್ಲಿದ್ದ ಸ್ಯಾನಿಟೈಸರ್ ಬಾಟಲ್​ಗೆ ಬೆಂಕಿ ತಾಗಿ NCP ಪಕ್ಷದ ಮುಖಂಡನೊಬ್ಬ ವಾಹನದಲ್ಲೇ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಪಿಂಪಲ್​ಗಾವ್​ ಬಳಿ ನಡೆದಿದೆ. NCP ಮುಖಂಡ ಸಂಜಯ್​ ಶಿಂಧೆ ಕಳೆದ ಮಂಗಳವಾರ ನಾಸಿಕ್​ನಲ್ಲಿರುವ ತಮ್ಮ ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಪಿಂಪಲ್​ಗಾವ್​ಗೆ ಕಾರ್​ನಲ್ಲಿ ತೆರಳುತ್ತಿದ್ದರು. ವಾಹನ ಕಡ್ವಾ ನದಿ ಬಳಿ ಸಮೀಪಿಸುತ್ತಿರುವಾಗಲೇ ತಾಂತ್ರಕ ದೋಷ ಉಂಟಾಗಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಕಾರ್​ನಲ್ಲಿದ್ದ ಹ್ಯಾಂಡ್​ ಸ್ಯಾನಿಟೈಸರ್ […]

ಕಾರಿನಲ್ಲಿದ್ದ ಸ್ಯಾನಿಟೈಸರ್​ಗೆ ಬೆಂಕಿ: ಜೀವಂತ ಭಸ್ಮಗೊಂಡ NCP ಮುಖಂಡ
KUSHAL V
| Updated By: ಸಾಧು ಶ್ರೀನಾಥ್​|

Updated on:Oct 15, 2020 | 2:01 PM

Share

ಮುಂಬೈ: ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನದಲ್ಲಿದ್ದ ಸ್ಯಾನಿಟೈಸರ್ ಬಾಟಲ್​ಗೆ ಬೆಂಕಿ ತಾಗಿ NCP ಪಕ್ಷದ ಮುಖಂಡನೊಬ್ಬ ವಾಹನದಲ್ಲೇ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಪಿಂಪಲ್​ಗಾವ್​ ಬಳಿ ನಡೆದಿದೆ.

NCP ಮುಖಂಡ ಸಂಜಯ್​ ಶಿಂಧೆ ಕಳೆದ ಮಂಗಳವಾರ ನಾಸಿಕ್​ನಲ್ಲಿರುವ ತಮ್ಮ ದ್ರಾಕ್ಷಿ ತೋಟಕ್ಕೆ ಕೀಟನಾಶಕ ಕೊಳ್ಳಲು ಪಿಂಪಲ್​ಗಾವ್​ಗೆ ಕಾರ್​ನಲ್ಲಿ ತೆರಳುತ್ತಿದ್ದರು. ವಾಹನ ಕಡ್ವಾ ನದಿ ಬಳಿ ಸಮೀಪಿಸುತ್ತಿರುವಾಗಲೇ ತಾಂತ್ರಕ ದೋಷ ಉಂಟಾಗಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಕಾರ್​ನಲ್ಲಿದ್ದ ಹ್ಯಾಂಡ್​ ಸ್ಯಾನಿಟೈಸರ್ ಬಾಟಲ್​ ಸಹ ಬೆಂಕಿ ಹೊತ್ತಿಕೊಂಡು ಇಡೀ ಕಾರ್​ ಸಂಪೂರ್ಣವಾಗಿ ಭಸ್ಮವಾಗಿದೆ.

ಕೂಡಲೇ ಸಂಜಯ್​ ಶಿಂಧೆ ಕಾರ್​ನ ಬಾಗಿಲು ತೆರೆದು ಹೊರಬರಲು ಸಾಕಷ್ಟು ಪ್ರಯತ್ನಪಟ್ಟರೂ ಬೆಂಕಿಯಿಂದ ಗಾಡಿಯ ಸೆಂಟ್ರಲ್​ ಲಾಕಿಂಗ್​ ಸಿಸ್ಟಂ ಬಂದ್​ ಆಗಿಹೋದ ಕಾರಣ ಒಳಗೇ ಸಿಲುಕಿಕೊಂಡರು. ಕಾರಿನ ಗಾಜನ್ನು ಒಡೆದು ಹೊರಬರಲು ಯತ್ನಿಸುವಷ್ಟರಲ್ಲೇ ಸಜೀವ ದಹನವಾಗಿ ಹೋದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿದ್ದ ಗ್ರಾಮಸ್ಥರು ಶಿಂಧೆ ಪ್ರಾಣ ಉಳಿಸಲು ಸಾಕಷ್ಟು ಪ್ರಯತ್ನಪಟ್ಟರೂ ಸಫಲರಾಗಲಿಲ್ಲ ಎಂದು ತಿಳಿದುಬಂದಿದೆ.

Published On - 1:58 pm, Thu, 15 October 20

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!