AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಾಠ ಮೀಸಲಾತಿ ಹೋರಾಟ: ಎನ್​ಸಿಪಿ ಶಾಸಕನ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು

Maratha Reservation Protest: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ(Maratha Reservation) ವಿಚಾರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದೆ, ಇಲ್ಲಿನ ಬೀಡ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಎನ್‌ಸಿಪಿ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಎಎನ್​ಐ ಹಂಚಿಕೊಂಡ ವಿಡಿಯೋದಲ್ಲಿ ಸೋಲಂಕೆ ಅವರ ಮನೆಯು ಧಗಧಗನೆ ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು. ಮನೆಯಿಂದ ದಟ್ಟ ಹೊಗೆ ಏರುತ್ತಿತ್ತು.

ಮರಾಠ ಮೀಸಲಾತಿ ಹೋರಾಟ: ಎನ್​ಸಿಪಿ ಶಾಸಕನ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು
ಶಾಸಕ ಪ್ರಕಾಶ್​ ಮನೆImage Credit source: ABP Live
ನಯನಾ ರಾಜೀವ್
|

Updated on: Oct 30, 2023 | 3:18 PM

Share

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ(Maratha Reservation) ವಿಚಾರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದೆ, ಇಲ್ಲಿನ ಬೀಡ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಎನ್‌ಸಿಪಿ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಎಎನ್​ಐ ಹಂಚಿಕೊಂಡ ವಿಡಿಯೋದಲ್ಲಿ ಸೋಲಂಕೆ ಅವರ ಮನೆಯು ಧಗಧಗನೆ ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು. ಮನೆಯಿಂದ ದಟ್ಟ ಹೊಗೆ ಏರುತ್ತಿತ್ತು.

ಶಾಸಕ ಸೋಲಂಕೆ ಮಾತನಾಡಿ, ದಾಳಿ ನಡೆದಾಗ ನಾನು ಮನೆಯೊಳಗಿದ್ದೆ, ಅದೃಷ್ಟವಶಾತ್ ನನ್ನ ಕುಟುಂಬಕ್ಕೆ ಹಾಗೂ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ, ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. ಆದರೆ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗಿದೆ ಎಂದು ಹೇಳಿದ್ದಾರೆ.

ಎನ್‌ಸಿಪಿ ಶಾಸಕ ಪ್ರಕಾಶ್ ಸೋಲಂಕೆ ನಿವಾಸದ ಮೇಲೆ ಮರಾಠಾ ಮೀಸಲಾತಿ ಪರ ಪ್ರತಿಭಟನಾಕಾರರು ನಡೆಸಿದ ದಾಳಿಗೆ ಸಿಎಂ ಏಕನಾಥ್ ಶಿಂಧೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರತಿಭಟನೆ ಯಾವ ತಿರುವು ಪಡೆದುಕೊಳ್ಳುತ್ತಿದೆ ಎಂಬುದರ ಬಗ್ಗೆ ಮನೋಜ ಜಾರಂಗೆ ಪಾಟೀಲ್ (ಮರಾಠಾ ಮೀಸಲಾತಿ ಹೋರಾಟಗಾರ) ಗಮನಹರಿಸಬೇಕು ಎಂದರು.

ಮತ್ತಷ್ಟು ಓದಿ: ಮರಾಠಾ ಮೀಸಲಾತಿ ಪ್ರತಿಭಟನೆ: ಜಲ್ನಾದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿ ಪ್ರಹಾರ

ಮರಾಠ ಸಮುದಾಯಕ್ಕೆ ಶಾಶ್ವತ ಮೀಸಲಾತಿ ಕಲ್ಪಿಸಲು ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಭರವಸೆ ನೀಡಿದರು. ಮರಾಠರ ನಾಡಾಗಿರುವ ಮಹಾರಾಷ್ಟ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಮರಾಠರ ಮೀಸಲಾತಿಯ ವಿಷಯ ಬಿರುಸುಗೊಳ್ಳುತ್ತಿದೆ.

ವಾಸ್ತವವಾಗಿ, ಮರಾಠ ಸಮುದಾಯದ ಜನರು ಹಿಂದುಳಿದ ಜಾತಿಗಳಿಗೆ ಸಿಗುವ ಅದೇ ಮೀಸಲಾತಿಯನ್ನು ಉದ್ಯೋಗ ಮತ್ತು ಶಿಕ್ಷಣದಲ್ಲಿ ಪಡೆಯಬೇಕೆಂದು ಒತ್ತಾಯಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಮರಾಠಾ ಮೀಸಲಾತಿಗೆ ಆಗ್ರಹಿಸಿ ಮರಾಠ ಮೋರ್ಚಾ ಸಂಚಾಲಕ ಮನೋಜ ಜಾರಂಗೆ ಪಾಟೀಲ ನೇತೃತ್ವದಲ್ಲಿ ಚಳವಳಿ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಳೆ ಕಾರಣ ಶಾಲೆಗಳಿಗೆ ರಜೆ ಘೋಷಣೆ ಈ ಮಳೆಗಾಲದಲ್ಲಿ ಹೆಚ್ಚುತ್ತಿದೆ!
ಮಳೆ ಕಾರಣ ಶಾಲೆಗಳಿಗೆ ರಜೆ ಘೋಷಣೆ ಈ ಮಳೆಗಾಲದಲ್ಲಿ ಹೆಚ್ಚುತ್ತಿದೆ!
‘ಅವರನ್ನು ಕಳಿಸು’; ವೀರಪ್ಪನ್ ಬಳಿ ಅಂಗಲಾಚಿದ್ದ ರಾಜ್​ಕುಮಾರ್
‘ಅವರನ್ನು ಕಳಿಸು’; ವೀರಪ್ಪನ್ ಬಳಿ ಅಂಗಲಾಚಿದ್ದ ರಾಜ್​ಕುಮಾರ್
Video: ಮಹಾರಾಷ್ಟ್ರ: ಶತಮಾನಗಳಷ್ಟು ಹಳೆಯದಾದ ಕೋಟೆ ಕುಸಿತ
Video: ಮಹಾರಾಷ್ಟ್ರ: ಶತಮಾನಗಳಷ್ಟು ಹಳೆಯದಾದ ಕೋಟೆ ಕುಸಿತ
ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ವ್ಯಕ್ತಿಯಿಂದ ಏಕಾಏಕಿ ಹಲ್ಲೆ
ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ವ್ಯಕ್ತಿಯಿಂದ ಏಕಾಏಕಿ ಹಲ್ಲೆ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ