AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಸಿಪಿ ಮತ್ತೆ ವಿಲೀನವಾಗುತ್ತಾ? ಅಜಿತ್ ಪವಾರ್ ಕೊನೆಯ ಆಸೆಯ ಬಗ್ಗೆ ಶುರುವಾಯ್ತು ಚರ್ಚೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಮೃತಪಡುತ್ತಿದ್ದಂತೆ ಎನ್​ಸಿಪಿ ಅಧ್ಯಕ್ಷ ಯಾರಾಗುತ್ತಾರೆ, ಉಪಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದರ ಬಗ್ಗೆ ತೀವ್ರ ಚರ್ಚೆಗಳು ಶುರುವಾಗಿವೆ. ಇದರ ನಡುವೆ ಅಜಿತ್ ಪವಾರ್ ಎನ್​ಸಿಪಿಯ ವಿಲೀನದ ಬಗ್ಗೆ ಆಸೆಯಿಟ್ಟುಕೊಂಡಿದ್ದರು ಎಂಬ ವಿಚಾರವೂ ಹೊರಬಿದ್ದಿದ್ದು, ಅವರ ಕೊನೆಯಾಸೆಯಂತೆ ಫೆಬ್ರವರಿ ತಿಂಗಳ ಮಧ್ಯದಲ್ಲಿ ಈ ಬಗ್ಗೆ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.

ಎನ್​ಸಿಪಿ ಮತ್ತೆ ವಿಲೀನವಾಗುತ್ತಾ? ಅಜಿತ್ ಪವಾರ್ ಕೊನೆಯ ಆಸೆಯ ಬಗ್ಗೆ ಶುರುವಾಯ್ತು ಚರ್ಚೆ
Ajit Pawar And Sharad Pawar
ಸುಷ್ಮಾ ಚಕ್ರೆ
|

Updated on: Jan 30, 2026 | 7:21 PM

Share

ಮುಂಬೈ, ಜನವರಿ 30: ಬುಧವಾರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ದಿಢೀರ್ ಮರಣದ ನಂತರ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) 2 ಬಣಗಳ ವಿಲೀನದ ಬಗ್ಗೆ ಬಿಸಿಬಿಸಿ ಚರ್ಚೆ ಶುರುವಾಗಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಎರಡೂ ಬಣಗಳು ಮತ್ತೆ ಒಂದಾಗಲಿವೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಯ ನಂತರ ಫೆಬ್ರವರಿ ಎರಡನೇ ವಾರದಲ್ಲಿ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಎರಡೂ ಬಣಗಳ ಹಿರಿಯ ನಾಯಕರ ಪ್ರಕಾರ, ಬುಧವಾರ ವಿಮಾನ ಅಪಘಾತದಲ್ಲಿ ನಿಧನರಾದ ಅಜಿತ್ ಪವಾರ್ ವಿಲೀನಕ್ಕೆ ದಾರಿ ಮಾಡಿಕೊಟ್ಟರು ಮತ್ತು ಡಿಸೆಂಬರ್ ಮತ್ತು ಜನವರಿಯಲ್ಲಿ ಚಿಕ್ಕಪ್ಪ ಶರದ್ ಪವಾರ್ ಅವರೊಂದಿಗೆ ಹಲವಾರು ಸಭೆಗಳನ್ನು ನಡೆಸಿದ್ದರು. ಸ್ಥಳೀಯ ಸಂಸ್ಥೆ ಚುನಾವಣೆಯ ನಂತರ ಜಂಟಿ ಪತ್ರಿಕಾಗೋಷ್ಠಿಯ ಮೂಲಕ ಇಬ್ಬರು ನಾಯಕರು ವಿಲೀನವನ್ನು ಅಧಿಕೃತವಾಗಿ ಘೋಷಿಸಲು ನಿರ್ಧರಿಸಲಾಗಿತ್ತು.

ಅಜಿತ್ ಪವಾರ್ ಅವರ ಎನ್‌ಸಿಪಿ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ ಮತ್ತು ಮಹಾರಾಷ್ಟ್ರ ಸರ್ಕಾರದಲ್ಲಿ ಏಕನಾಥ್ ಶಿಂಧೆ ಅವರ ಶಿವಸೇನಾ ಜೊತೆ ಮೈತ್ರಿ ಮಾಡಿಕೊಂಡಿದೆ. ಅವರ ಚಿಕ್ಕಪ್ಪ ಶರದ್ ಪವಾರ್ ಅವರ ಎನ್‌ಸಿಪಿ ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ವಿರೋಧ ಪಕ್ಷದಲ್ಲಿದೆ.

ಇದನ್ನೂ ಓದಿ: ಅಜಿತ್ ಪವಾರ್ ಇದ್ದ ವಿಮಾನ ಅಪಘಾತ: ಕೊನೇ ಸಮಯದಲ್ಲಿ ಪೈಲಟ್ ಬದಲಾವಣೆ ಮಾಡಲಾಗಿತ್ತೇ?

ಇತ್ತೀಚಿನ ನಾಗರಿಕ ಚುನಾವಣೆಯ ಸಮಯದಲ್ಲಿ ಎರಡೂ ಬಣಗಳು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದಾಗ, ಅಜಿತ್ ಪವಾರ್ ತಮ್ಮ ಪಕ್ಷವನ್ನು ಎನ್‌ಸಿಪಿ (ಎಸ್‌ಪಿ) ಯೊಂದಿಗೆ ವಿಲೀನಗೊಳಿಸಲು ಉದ್ದೇಶಿಸಿರುವುದಾಗಿ ತಿಳಿಸಿದ್ದರು ಎಂದು ಮೂಲಗಳು ತಿಳಿಸಿವೆ. ಜನವರಿ 15ರಂದು ಪುಣೆ ಮತ್ತು ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ನಡೆದ ನಾಗರಿಕ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಿದ ನಂತರ, ಮುಂದಿನ ತಿಂಗಳು ನಡೆಯಲಿರುವ ಜಿಲ್ಲಾ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಮುಂದುವರಿಸಲು ಎರಡೂ ಬಣಗಳು ನಿರ್ಧರಿಸಿದವು.

ಇದನ್ನೂ ಓದಿ: ಅಜಿತ್ ಪವಾರ್ ಸಾವಿನಲ್ಲಿ ಷಡ್ಯಂತ್ರವಿಲ್ಲ, ಅದೊಂದು ಅಪಘಾತ; ಶರದ್ ಪವಾರ್ ಮೊದಲ ಪ್ರತಿಕ್ರಿಯೆ

“ಎನ್‌ಸಿಪಿ ಬಣಗಳ ವಿಲೀನದ ಬಗ್ಗೆ ನಾವು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾವು ಸಿಎಂ ಅವರನ್ನು ಭೇಟಿಯಾದೆವು. ಅಜಿತ್ ಪವಾರ್ ಅವರ ಕುಟುಂಬದೊಂದಿಗೆ ಚರ್ಚಿಸುತ್ತೇವೆ” ಎಂದು ಈ ಪ್ರಫುಲ್ ಪಟೇಲ್ ಹೇಳಿದ್ದಾರೆ. ಹಾಗೇ, ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ನಾಳೆ ಎಲ್ಲಾ ಎನ್‌ಸಿಪಿ ಶಾಸಕರ ಸಭೆ ಕರೆಯಲಾಗಿದೆ. ಬಹುತೇಕ ಎಲ್ಲರೂ ಸುನೇತ್ರಾ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಬೇಕೆಂದು ಬಯಸಿದ್ದಾರೆ ಎನ್ನಲಾಗಿದೆ. ಉಪ ಮುಖ್ಯಮಂತ್ರಿ ಹುದ್ದೆಗೂ ಸುನೇತ್ರಾ ಪವಾರ್ ಅವರ ಹೆಸರು ದೃಢೀಕರಿಸಲ್ಪಡುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ